• About us
  • Contact us
  • Disclaimer
Thursday, June 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಬರೋಬ್ಬರಿ 6 ಕೋಟಿ ಮೌಲ್ಯದ ಆರೂವರೆ ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

Coastal Times by Coastal Times
October 9, 2024
in ಕ್ರೈಮ್ ನ್ಯೂಸ್
ಮಂಗಳೂರು: ಬರೋಬ್ಬರಿ 6 ಕೋಟಿ ಮೌಲ್ಯದ ಆರೂವರೆ ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ
19
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ನಗರ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 6 ಕೋ. ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಇದು ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್‌ ವಶಪಡಿಸಿದ ಪ್ರಕರಣವಾಗಿದೆ. “ಡ್ರಗ್ಸ್‌ ಫ್ರೀ ಮಂಗಳೂರು’ ಮಾಡುವ ಉದ್ದೇಶ ಹೊಂದಿದ್ದೇವೆ. ಈಚೆಗೆ ರಾಜ್ಯ ಗೃಹಸಚಿವರೂ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನೈಜೀರಿಯಾ ಮೂಲದ, ಬೆಂಗಳೂರಿನ ದೊಮ್ಮಸಂದ್ರ ಸ್ವಾಮಿ ವಿವೇಕಾನಂದ ನಗರದ ಸಾಯಿಮಿಡೋ ಪೇಸ್‌-2 ಗೋವಿಂದ ರೆಡ್ಡಿ ಲೇಔಟ್‌ನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಪೀಟರ್‌ ಅಕೆಡಿ ಬೆಲನೋವು (38) ಎಂಬಾತನನ್ನು ಬಂಧಿಸಿ, ಆತನಿಂದ 6 ಕೋಟಿ ರೂ. ಮೌಲ್ಯದ ಕ್ರಿಸ್ಟಲ್‌ ರೂಪದಲ್ಲಿದ್ದ ಹಾಗೂ ಹಂಚುವುದಕ್ಕಾಗಿ 50-70 ಗ್ರಾಂ ತೂಕದ ಪ್ಯಾಕೆಟ್‌ ರೂಪದಲ್ಲಿ ಇರಿಸಿಕೊಂಡಿದ್ದ ಎಂಡಿಎಂಎ ಡ್ರಗ್‌ ವಶಪಡಿಸಲಾಗಿದೆ.

2024ರ ಸೆ. 29ರಂದು ಮಂಗಳೂರು ಪೂರ್ವ ಪೊಲೀಸ್‌ ಠಾಣೆ ವ್ಯಾಪ್ತಿಯ ಪಂಪ್‌ವೆಲ್‌ ಬಳಿಯ ಲಾಡೊjಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ತೊಕ್ಕೊಟ್ಟು ಪೆರ್ಮನ್ನೂರಿನ ಚೆಂಬುಗುಡ್ಡೆಯ ಹೈದರ್‌ ಅಲಿಯಾಸ್‌ ಹೈದರ್‌ ಅಲಿ(51)ಯನ್ನು ಬಂಧಿಸಿ 75 ಸಾ. ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.

ನಗರದಲ್ಲಿ ಮಾದಕ ವಸ್ತುವನ್ನು ಪೂರೈಸುವ ಡ್ರಗ್ಸ್‌ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿ ತನಿಖೆ ಕೈಗೊಂಡಿದ್ದರು. ಹೈದರ್‌ ಅಲಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್‌ ಪೆಡ್ಲರ್‌ಗಳ ಮಾಹಿತಿ ಸಂಗ್ರಹಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಮಾದಕ ವಸ್ತುವನ್ನು ಪೂರೈಸುವ ವ್ಯಕ್ತಿಯು ಬೆಂಗಳೂರಿನಲ್ಲಿರುವ ನೈಜೀರಿಯಾ ಪ್ರಜೆ ಪೀಟರ್‌ ಎಂಬ ಮಾಹಿತಿ ಕಲೆ ಹಾಕಿದ್ದರು.

ಪೀಟರ್‌ ಮನೆಯಿಂದ ಡ್ರಗ್‌ ಮಾತ್ರವಲ್ಲದೆ 3 ಮೊಬೈಲ್‌ ಫೋನುಗಳು, ಡಿಜಿಟಲ್‌ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್‌ ಕಾರ್ಡ್‌ಗಳು, 17 ಸಕ್ರಿಯವಿಲ್ಲದ ಸಿಮ್‌ ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ಗಳ ಬ್ಯಾಂಕ್‌ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಈ ಹಿಂದೆ 2023ರಲ್ಲಿ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್‌ ಠಾಣೆಯಲ್ಲಿ ಡ್ರಗ್ಸ್‌ ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈತನು ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಕೇರಳಕ್ಕೂ ಮಾದಕ ವಸ್ತುವನ್ನು ಪೂರೈಸುತ್ತಿದ್ದ. ಈ ದಂಧೆಯಲ್ಲಿ ಹಲವರು ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು ಎಂದು ಕಮಿಷನರ್‌ ತಿಳಿಸಿದ್ದಾರೆ.

ಆಯುಕ್ತ ಅನುಪಮ್‌ ಅಗರ್‌ವಾಲ್‌ ಮಾರ್ಗದರ್ಶನದಲ್ಲಿ, ಡಿಸಿಪಿ(ಕಾನೂನು ಸುವ್ಯವಸ್ಥೆ)ಸಿದ್ದಾರ್ಥ ಗೋಯಲ್‌, ಡಿಸಿಪಿ(ಅಪರಾಧ ಮತ್ತು ಸಂಚಾರ ಬಿ.ಪಿ.ದಿನೇಶ್‌ ಕುಮಾರ್‌ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್‌ ಕುಮಾರ್‌ ನಾಯ್ಕ, ಇನ್‌ಸ್ಪೆಕ್ಟರ್‌ ಶ್ಯಾಮ್‌ ಸುಂದರ್‌ ಎಚ್‌.ಎಂ, ಪಿಎಸ್‌ಐ ಸುದೀಪ್‌ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್‌ಐ ಮೋಹನ್‌ ಕೆ ವಿ., ರಾಮ ಪೂಜಾರಿ, ಶೀನಪ್ಪ, ಸುಜನ್‌ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬಂದಿ ಪಾಲ್ಗೊಂಡಿದ್ದರು.

ಪೀಟರ್‌ ಬೆಂಗಳೂರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಳ್ಳುವುದರ ಜತೆಗೆ ಡ್ರಗ್‌ ದಂಧೆಯಲ್ಲೂ ತೊಡಗಿಸಿಕೊಂಡಿದ್ದ. ಆತನ ಕುಟುಂಬವೂ ಬೆಂಗಳೂರಿನಲ್ಲೇ ಇದೆ. ಈತನ ವೀಸಾದ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿತ್ತು. ಎಂಡಿಎಂಎ ಪೂರೈಕೆ ಕಸದ ರಾಶಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ತಂತ್ರ ಈ ಜಾಲದ್ದಾಗಿತ್ತು. ಕಸದ ರಾಶಿಯಲ್ಲಿ ಹಾಕಿ, ಅದರ ಲೊಕೇಶನ್‌, ಫೋಟೋವನ್ನು ಸಂಬಂಧಿಸಿದವರಿಗೆ ಕೊಡಲಾಗುತ್ತಿತ್ತು! ಪೀಟರ್‌ಗೆ ಡ್ರಗ್‌ ಪೂರೈಕೆ ಮಾಡುವ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಸ್ಥಳೀಯವಾಗಿಯೂ ಹಲವು ಪೆಡ್ಲರ್‌ಗಳ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲಿ ಎಲ್ಲರನ್ನೂ ಬಂಧಿಸಲಾಗುವುದು ಎಂದು ಕಮಿಷನರ್‌ ತಿಳಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ ಮಳೆ ಅಬ್ಬರಕ್ಕೆ ಹೆಬ್ರಿಯ ಮುದ್ರಾಡಿಯಲ್ಲಿ ಕೊಚ್ಚಿ ಹೋದ ಕಾರು, ದ್ವಿಚಕ್ರ ವಾಹನಗಳು, ಪ್ರವಾಹಕ್ಕೆ 3 ಮನೆಗಳು ಅರ್ಧದಷ್ಟು ಮುಳುಗಡೆ.

Next Post

ಮುಮ್ತಾಜ್ ಆಲಿ ಆತ್ಮಹತ್ಯೆ ; ಅಬ್ದುಲ್ ಸತ್ತಾರ್, ಶಾಫಿ ನಂದಾವರ ಸೇರಿ ಮೂವರ ಅರೆಸ್ಟ್, ಆಡಿಯೋ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಹರಾಮಿಗಳು

Related Posts

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
233
ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
Next Post
ಮುಮ್ತಾಜ್ ಆಲಿ ಆತ್ಮಹತ್ಯೆ ; ಅಬ್ದುಲ್ ಸತ್ತಾರ್, ಶಾಫಿ ನಂದಾವರ ಸೇರಿ ಮೂವರ ಅರೆಸ್ಟ್, ಆಡಿಯೋ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಹರಾಮಿಗಳು

ಮುಮ್ತಾಜ್ ಆಲಿ ಆತ್ಮಹತ್ಯೆ ; ಅಬ್ದುಲ್ ಸತ್ತಾರ್, ಶಾಫಿ ನಂದಾವರ ಸೇರಿ ಮೂವರ ಅರೆಸ್ಟ್, ಆಡಿಯೋ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದ ಹರಾಮಿಗಳು

Discussion about this post

Recent News

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
233
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d