ಉಳ್ಳಾಲ: ಮತ್ತೆ ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ್ದರು.
ನಸುಕಿನ ಜಾವ 2.25 ರ ಸುಮಾರಿಗೆ KA19z 7354 ವ್ಯಾಗನಾರ್ ಕಾರಿನಲ್ಲಿ ಬಂದ ತಂಡದಲ್ಲಿ ಇದ್ದವರಲ್ಲಿ ಒಬ್ಬ ಕೆಳಗಿಳಿದು ಅಕ್ರಮ ಮರಳುಗಾರಿಕೆ ತಡೆಗಟ್ಟಲು ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ್ದಾನೆ. ಕರಾವಳಿ ನಿಯಂತ್ರಣ ವಲಯ (ಸಿ ಆರ್ ಜೆಡ್) ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಜಿಲ್ಲಾಧಿಕಾರಿ, ಮರಳು ಸಮಿತಿ ಅಧ್ಯಕ್ಷರು, ಆದೇಶದಂತೆ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಗೆ ಒಂದು ವರ್ಷದವರೆಗೆ 24 ಗಂಟೆಗಳ ಕಾಲ ಸಿಸಿಟಿವಿ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.
ಕೆಲ ತಿಂಗಳುಗಳ ಹಿಂದೆ ಸೋಮೇಶ್ವರ ಸಮುದ್ರ ತೀರದಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಡಿಕ್ಕಿ ಹೊಡೆಸಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಅವರು ಮರುದಿನವೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post