ಬಂಟ್ವಾಳ : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಪೆಟ್ರೋಲ್ ಸುರಿದು ಹತ್ಯೆ ಮಾಡಿ ಬಳಿಕ ಗುಡ್ಡದಿಂದ ಆಳವಾದ ಹೊಂಡಕ್ಕೆ ಎಸೆದಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಕೊಳ್ನಾಡು ಗ್ರಾಮದ ಸುರಿಬೈಲು ನಿವಾಸಿ ಅಬ್ದುಲ್ ಸಮದ್ (19) ಕೊಲೆಯಾದ ಯುವಕ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ. ಕೊಲೆ ಮಾಡಿದ ಆರೋಪಿಯನ್ನು ಬೋಳಂತೂರು ಗ್ರಾಮದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ವಿಟ್ಲ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ವಿವರ: ಸಲಿಂಗಕಾಮಿ ಆರೋಪವಿರುವ ಆಟೋ ಚಾಲಕ ಅದ್ರಾಮ ಸಂಶಯಾಸ್ಪದವಾಗಿ ವರ್ತಿಸುತ್ತಿದ್ದ ಕಾರಣ, ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗಾಂಜಾವ್ಯಸನಿಯೂ ಆಗಿರುವ ಆರೋಪಿ ಅದ್ರಾಮ ನಾನು ಕೊಲೆಯೊಂದನ್ನು ಮಾಡಿದ್ದೇನೆ ಎಂದು ಹೇಳಿಕೊಂಡು ಬಂದಿರುವುದಾಗಿ ಹೇಳಲಾಗಿದೆ.ಕೊಲೆ ಬಗ್ಗೆ ಆತನನ್ನು ವಿಚಾರಿಸಿದಾಗ ನಡೆದ ಘಟನೆಗಳನ್ನು ವಿವರಿಸಿದ್ದಾನೆ. ಮಂಚಿ-ಇರಾ, ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post