• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು

Coastal Times by Coastal Times
November 9, 2024
in ಕರಾವಳಿ
ತೊಕ್ಕೊಟ್ಟು ಹದಗೆಟ್ಟ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು
278
VIEWS
WhatsappTelegramShare on FacebookShare on Twitter

ಉಳ್ಳಾಲ : ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸ್ಕೂಟರ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಮೇಲೆ ಟ್ಯಾಂಕರ್ ಹರಿದು ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡ ಬಳಿ ಶನಿವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಕುಳಾಯಿಯ ಪ್ರಸಕ್ತ ದೇರಳಕಟ್ಟೆಯಲ್ಲಿ ವಾಸವಾಗಿದ್ದ ರಹ್ಮತ್ (47) ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ರಹ್ಮತ್‌ರ ಪತಿ ಅಬ್ದುಲ್ ರಶೀದ್ ಅವರಿಗೂ ಗಾಯವಾಗಿದೆ.

ರಶೀದ್ ಅವರು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ವಿಭಾಗದ ಸಿಬ್ಬಂದಿಯಾಗಿದ್ದು, ಶನಿವಾರ ಸಂಜೆ ಸುಮಾರು 4:30ಕ್ಕೆ ತನ್ನ ಆ್ಯಕ್ಟಿವಾ ಸ್ಕೂಟರ್‌ನಲ್ಲಿ ತನ್ನ ಪತ್ನಿ ರಹ್ಮತ್‌ರನ್ನು ಕುಳ್ಳಿರಿಸಿ ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ತೊಕ್ಕೊಟ್ಟು-ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಹದಗೆಟ್ಟ ರಸ್ತೆಯ ಗುಂಡಿಯಿಂದ ಪಾರಾಗಲು ರಶೀದ್ ಹರಸಾಹಸ ಪಡುತ್ತಿದ್ದಂತೆಯೇ ನಿಯಂತ್ರಣ ಕಳಕೊಂಡು ಸ್ಕೂಟರ್ ಸ್ಕಿಡ್ಡಾಗಿ ಬಿತ್ತು ಎನ್ನಲಾಗಿದೆ. ಇದರಿಂದ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ರಹ್ಮತ್ ರಸ್ತೆಗೆ ಎಸೆಯಲ್ಪಟ್ಟರು. ಅದೇ ರಸ್ತೆಯಲ್ಲಿ ವೇಗದಲ್ಲಿದ್ದ ಟ್ಯಾಂಕರ್ ರಹ್ಮತ್‌ರ ಮೇಲೆಯೇ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಅಪಘಾತದಿಂದ ರಹ್ಮತ್ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ರಹ್ಮತ್ ಮೃತಪಟ್ಟಿರುವುದಾಗಿ ಘೋಷಿಸಿದರು.

ಉದ್ರಿಕ್ತ ಗುಂಪಿನಿಂದ ರಸ್ತೆಗೆ ಅಡ್ಡ ಕಲ್ಲುಗಳ ಇಟ್ಟು ಪ್ರತಿಭಟನೆ: ಈ ಸಂದರ್ಭ ರಸ್ತೆಗೆ ಬಿದ್ದಿದ್ದ ರೆಹಮತ್ ರ ಮೇಲೆ ಹಿಂಬದಿಯಲ್ಲಿದ್ದ ಟ್ಯಾಂಕರ್ ಲಾರಿಯ ಹಿಂಬದಿಯ ಚಕ್ರ ಚಲಿಸಿದೆ. ಪರಿಣಾಮವಾಗಿ ರೆಹಮತ್ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ಘಟನೆ ನಡೆದಿರುವುದಾಗಿ ಆರೋಪಿಸಿದ ಉದ್ರಿಕ್ತ ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದೆ. ಇದರಿಂದಾಗಿ ತೊಕ್ಕೊಟ್ಟು ಕೊಣಾಜೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಾಹನಗಳೆಲ್ಲವೂ ಸರತಿ ಸಾಲುಗಳಲ್ಲಿ ನಿಂತರೆ, ಹಲವು ವಾಹನಗಳು ಬೀರಿ ಮಾರ್ಗವಾಗಿ ಸಂಚರಿಸುತ್ತಿದೆ. ಉದ್ರಿಕ್ತ ಗುಂಪು ಹಾಗೂ ಉಳ್ಳಾಲ ಪೊಲೀಸರ ನಡುವೆ ತೀವ್ರ ವಾಗ್ದಾಳಿ ನಡೆದಿದೆ.

108 ಆಂಬ್ಯುಲೆನ್ಸ್ ಅವ್ಯವಸ್ಥೆ! ಅಪಘಾತದಲ್ಲಿ ಮೃತಪಟ್ಟ ಮಹಿಳೆ ರೆಹಮತ್  ಮೃತದೇಹ ಅರ್ಧ ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇತ್ತು. 108 ಆಂಬ್ಯುಲೆನ್ಸ್ ಗೆ ಕರೆ ಮಾಡಿದಾಗ ತಾಂತ್ರಿಕ ಕಾರಣಗಳ ನೀಡಿ ಸ್ಥಳಕ್ಕಾಗಮಿಸಲಿಲ್ಲ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಜನ ಆಂಬ್ಯುಲೆನ್ಸ್ ಅವ್ಯವಸ್ಥೆಯ ವಿರುದ್ಧವೂ, ನಿತ್ಯ ಹೊಂಡಗುಂಡಿಯ ರಸ್ತೆಯ ಬದಿಯಲ್ಲೇ ನಿಂತು ದಂಡ ಪಡೆಯುವ ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಘಟನಾ ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಸಂಚಾರಿ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಎಸಿಪಿ ಧನ್ಯಾ ನಾಯಕ್, ಉಳ್ಳಾಲ ಠಾಣಾಧಿಕಾರಿ ಬಾಲಕೃಷ್ಣ ಎಚ್.ಎನ್ ಭೇಟಿ ನೀಡಿ ಉದ್ರಿಕ್ತರ ಸಮಾಧಾನಿಸಿದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಪಕ್ಷಿಕೆರೆಯಲ್ಲೊಂದು ಘೋರ ದುರಂತ: ಪತ್ನಿ ಮಗುವನ್ನು ಹತ್ಯೆಗೈದು ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಗಂಡ

Next Post

ಉಪ್ಪಿನಂಗಡಿ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ ಪ್ರಕರಣ; ಆರೋಪಿಯ ಬಂಧನ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಉಪ್ಪಿನಂಗಡಿ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ ಪ್ರಕರಣ; ಆರೋಪಿಯ ಬಂಧನ

ಉಪ್ಪಿನಂಗಡಿ ಬೈಕ್ ತಡೆದು ಕತ್ತಿಯಿಂದ ಕಡಿದು ಬರ್ಬರ ಹತ್ಯೆ ಪ್ರಕರಣ; ಆರೋಪಿಯ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d