• About us
  • Contact us
  • Disclaimer
Tuesday, May 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮಹಿಳೆಗೆ ಮೆದುಳು ನಿಷ್ಕ್ರಿಯ, 176 ವರ್ಷಗಳ ಇತಿಹಾಸದಲ್ಲೇ ಮೊದಲು! ಇಬ್ಬರಿಗೆ ಕಣ್ಣು, ಒಬ್ಬರಿಗೆ ಲಿವರ್ ದಾನ ನೀಡಿದ ಮಹಿಳೆ

Coastal Times by Coastal Times
January 10, 2025
in ಕರಾವಳಿ
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮಹಿಳೆಗೆ ಮೆದುಳು ನಿಷ್ಕ್ರಿಯ, 176 ವರ್ಷಗಳ ಇತಿಹಾಸದಲ್ಲೇ ಮೊದಲು! ಇಬ್ಬರಿಗೆ ಕಣ್ಣು, ಒಬ್ಬರಿಗೆ ಲಿವರ್ ದಾನ ನೀಡಿದ ಮಹಿಳೆ
93
VIEWS
WhatsappTelegramShare on FacebookShare on Twitter

ಮಂಗಳೂರು, ಜ.10: ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೆದುಳು ನಿಷ್ಕ್ರಿಯಗೊಂಡ ಮಹಿಳೆಯೊಬ್ಬರ ಅಂಗವನ್ನು ದಾನ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡ ಗ್ರಾಮದ ನಿವಾಸಿ ರೇಖಾ(41) ಎಂಬವರ ಲಿವರ್ ಅನ್ನು ಮೈಸೂರಿಗೆ ಮತ್ತು ಕಣ್ಣಿನ ಕಾರ್ನಿಯಾಗಳನ್ನು ಅತ್ತಾವರ ಕೆಎಂಸಿ ಆಸ್ಪತ್ರೆಗೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ‌ ರೇಖಾ (41) ಅವರ ಮೆದುಳು ನಿಷ್ಕ್ರಿಯವಾದ ಕಾರಣ ಅವರ ಅಂಗಾಂಗ ದಾನ ಮಾಡಲಾಯಿತು. ರೇಖಾ ಅವರಿಗೆ ಬ್ರೈನ್ ಟ್ಯೂಮರ್​ ಇದ್ದಿದ್ದರಿಂದ ಶಿವಮೊಗ್ಗದ ಆಸ್ಪತ್ರೆಯಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಜನವರಿ 6ರಂದು ರೇಖಾ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾದ ರೇಖಾ ಅವರ ಮೆದುಳು ನಿಷ್ಕ್ರಿಯವಾಗಿದ್ದರಿಂದ ಆಸ್ಪತ್ರೆಯ ವೈದ್ಯರು ಅಂಗಾಂಗ ದಾನದ ಸಲಹೆ ನೀಡಿದ್ದು, ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು.

ಅದರಂತೆ, ರೇಖಾ ಅವರ ಕಣ್ಣು ಮತ್ತು ಲಿವರ್ ತೆಗೆದು ದಾನ ಪ್ರಕ್ರಿಯೆ ನಡೆಸಲಾಯಿತು. ಎರಡು ಕಣ್ಣನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಲಿವರ್​ ಅನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಮೂಲಕ ಮೃತ ಮಹಿಳೆ ರೇಖಾ ಮೂರು ಮಂದಿಯ ಬಾಳಿಗೆ ಬೆಳಕಾದರು.

ಈ ಬಗ್ಗೆ ಮಾತನಾಡಿದ ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್, ”ರೇಖಾ ಅವರು‌ ಜನವರಿ 6ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಮೆದುಳು ನಿಷ್ಕ್ರಿಯವಾದ ಪರಿಣಾಮ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಕಣ್ಣು ಮತ್ತು ಲಿವರ್ ದಾನ ಮಾಡಲಾಗಿದೆ. ಇದು ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ 176 ವರ್ಷಗಳ ಇತಿಹಾಸದಲ್ಲಿ ನಡೆದ ಮೊದಲ ಅಂಗಾಂಗ ದಾನವಾಗಿದೆ” ಎಂದರು.

ರೇಖಾ ಅವರದ್ದು ಬಡ ಕುಟುಂಬವಾಗಿದ್ದು, ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡಿದ್ದಕ್ಕಾಗಿ ವೆನ್ಲಾಕ್ ಆಸ್ಪತ್ರೆಯ ಡಿಎಂಓ ಡಾ.ಶಿವಪ್ರಕಾಶ್ ಕುಟುಂಬಸ್ಥರಿಗೆ ಧನ್ಯವಾದ ಹೇಳಿದರು. ಸಾವು ಎಲ್ಲರಿಗೂ ಬರುತ್ತದೆ, ಆದರೆ ಸಾವಿನ ಸಂದರ್ಭದಲ್ಲಿ ಅಂಗಾಂಗ ದಾನದ ಮೂಲಕ ಇನ್ನೊಬ್ಬರಿಗೆ ಜೀವ ಕೊಡುವುದು ಶ್ರೇಷ್ಠವಾದದ್ದು ಎಂದು ಶವವನ್ನು ಆಸ್ಪತ್ರೆಯಿಂದ ಬಿಟ್ಟು ಕೊಡುವ ಸಂದರ್ಭದಲ್ಲಿ ಡಾ.ಶಿವಪ್ರಕಾಶ್ ಅಭಿಪ್ರಾಯಪಟ್ಟರು. ಇದೇ ವೇಳೆ, ಐಎಂಎ ವೈದ್ಯರ ಸಂಘದ ಅಣ್ಣಯ್ಯ ಕುಲಾಲ್ ಮತ್ತು ಇತರ ವೈದ್ಯರು ಸೇರಿ ಬಡ ಕುಟುಂಬಕ್ಕೆ ಒಂದಷ್ಟು ಧನಸಹಾಯ ಮಾಡಿದ್ದಲ್ಲದೆ ಶಿವಮೊಗ್ಗಕ್ಕೆ ಶವ ಒಯ್ಯಲು ಆಂಬುಲೆನ್ಸ್ ಮಾಡಿಕೊಟ್ಟು ಅಂತ್ಯಕ್ರಿಯೆಗೆ ನೆರವಾಗಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಾಮಂಜೂರು ಗನ್ ಫೈರ್ ಪ್ರಕರಣಕ್ಕೆ ಟ್ವಿಸ್ಟ್‌ – ಅಸಲಿ ಗುರಿ ಯಾರು?, ಪೊಲೀಸ್‌ ಕಮೀಷನರ್‌ ಹೇಳಿದ್ದೇನು?

Next Post

ಉಪ್ಪಿನಂಗಡಿ: ಚಿನ್ನದ ನೆಕ್ಲೇಸ್‌ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Related Posts

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ
ಕರಾವಳಿ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
22
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು
ಕರಾವಳಿ

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
149
Next Post
ಉಪ್ಪಿನಂಗಡಿ: ಚಿನ್ನದ ನೆಕ್ಲೇಸ್‌ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ಉಪ್ಪಿನಂಗಡಿ: ಚಿನ್ನದ ನೆಕ್ಲೇಸ್‌ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Discussion about this post

Recent News

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
22
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
59
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

ಮಂಗಳೂರಿನಲ್ಲಿ ಗೇರು ಮೇಳಕ್ಕೆ ಚಾಲನೆ, ಗೇರು ಅಭಿವೃದ್ಧಿ ನಿಗಮಕ್ಕೆ 1 ಕೋಟಿ ರೂ. ಅನುದಾನ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

May 17, 2026
ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

ಬೆಳಗಾವಿ: 4500 ಕೋಟಿ ವಂಚಿಸಿದ ಶಿವಂ ಅಸೋಸಿಯೇಟ್ಸ್ ಮಾಲೀಕನ ಮನೆ, ಕಚೇರಿ ಸೀಜ್

May 16, 2026
ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

ಬಿಜಿ ವೆಲ್ತ್ ಷೇರಿಂಗ್ ಹೆಸರಿನ ವಿದೇಶಿ ಕಂಪನಿಗೆ ಡಾಲರ್ ಲೆಕ್ಕದಲ್ಲಿ ಹೂಡಿಕೆ ಮಾಡಿ, ಕೋಟಿ! ಕೋಟಿ!.. ಕಳಕೊಂಡ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜನರು

May 16, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d