• About us
  • Contact us
  • Disclaimer
Tuesday, November 4, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಾಮಂಜೂರು ಗನ್ ಫೈರ್ ಪ್ರಕರಣಕ್ಕೆ ಟ್ವಿಸ್ಟ್‌ – ಅಸಲಿ ಗುರಿ ಯಾರು?, ಪೊಲೀಸ್‌ ಕಮೀಷನರ್‌ ಹೇಳಿದ್ದೇನು?

Coastal Times by Coastal Times
January 10, 2025
in ಕ್ರೈಮ್ ನ್ಯೂಸ್
ವಾಮಂಜೂರು ಗನ್ ಫೈರ್ ಪ್ರಕರಣಕ್ಕೆ ಟ್ವಿಸ್ಟ್‌ – ಅಸಲಿ ಗುರಿ ಯಾರು?, ಪೊಲೀಸ್‌ ಕಮೀಷನರ್‌ ಹೇಳಿದ್ದೇನು?
152
VIEWS
WhatsappTelegramShare on FacebookShare on Twitter

ಮಂಗಳೂರು: ವಾಮಂಜೂರು ಮೂಡುಶೆಡ್ಡೆಯಲ್ಲಿ ಪಿಸ್ತೂಲಿನಿಂದ ಗುಂಡು ಹಾರಿ ವ್ಯಕ್ತಿ ಗಾಯಗೊಂಡ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಈ ಸಂಬಂಧ ಕುಖ್ಯಾತ ರೌಡಿಗಳಾದ ಬದ್ರುದ್ದೀನ್‌ ಮತ್ತು ಇಮ್ರಾನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜ.6ರಂದು ಮೂಡುಶೆಡ್ಡೆಯ ಬದ್ರುದ್ದೀನ್‌ನ ಸೆಕೆಂಡ್‌ ಹ್ಯಾಂಡ್‌ ಸೇಲ್‌ ಅಂಗಡಿಯಲ್ಲಿ ಗುಂಡು ಸಿಡಿದು ಓರ್ವ ಗಾಯಗೊಂಡಿದ್ದರು. ಬಂಧಿತರಿಬ್ಬರೂ ನಿಷೇಧಿತ ಪಿಎಫ್‌ಐ ಸಂಘಟನೆ ಮುಖಂಡರಾಗಿದ್ದು, ಇವರಲ್ಲಿದ್ದ ಪಿಸ್ತೂಲ್‌ಗೆ ಲೈಸೆನ್ಸ್‌ ಇರಲಿಲ್ಲ ಎಂದು ತಿಳಿದುಬಂದಿದೆ. ಬದ್ರುದ್ದೀನ್‌ ಹೊಂದಿದ್ದ ಅಕ್ರಮ ಪಿಸ್ತೂಲಿನಿಂದ ಆಕಸ್ಮಿಕವಾಗಿ ಗುಂಡುಹಾರಿದ್ದು, ಪ್ರಿಂಟರ್‌ಗೆ ತಗಲಿ ಮುಂಭಾಗದಲ್ಲಿ ಕುಳಿತಿದ್ದ ಸ್ಥಳೀಯ ಮಸೀದಿಯ ಧರ್ಮಗುರು ಮೊಹಮ್ಮದ್ ಸಫ್ವಾನ್‌ ಎಂಬಾತನ ಹೊಟ್ಟೆಗೆ ತಾಗಿ ಆತ ಗಂಭೀರ ಗಾಯಗೊಂಡಿದ್ದ.

ಈ ಪ್ರಕರಣವನ್ನು ತಿರುಚಲು ಗಾಯಾಳು ಸಫ್ವಾನ್‌ ಯತ್ನಿಸಿದ್ದು, ತನ್ನ ಕೈನಿಂದಲೇ ಗುಂಡು ಹಾರಿತ್ತು ಹಾಗೂ ಪಿಸ್ತೂಲ್‌ ಅನ್ನು ಭಾಸ್ಕರ್‌ ಎಂಬಾತ ನೀಡಿದ್ದಾಗಿ ಪೊಲೀಸರಿಗೆ ತಪ್ಪು ಮಾಹಿತಿ ನೀಡಿದ್ದ. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದ್ದರು.  ಎಫ್‌ಎಸ್‌ಎಲ್‌ ಮತ್ತು ಬ್ಯಾಲಿಸ್ಟಿಕ್‌ ವಿಭಾಗದ ಅಧಿಕಾರಿಗಳೂ ತನಿಖೆ ನಡೆಸಿದಾಗ ಸ್ವಯಂ ಆಗಿ ಗುಂಡು ಹಾರಿಸಿದಾಗ ಈ ರೀತಿ ಗಾಯವಾಗುವುದಿಲ್ಲ ಎನ್ನುವುದು ಗೊತ್ತಾಗಿದೆ. ಅಲ್ಲದೆ ಪ್ರತ್ಯಕ್ಷದರ್ಶಿಗಳ ವಿಚಾರಣೆ ಹಾಗೂ ಸಿಸಿಟಿವಿ ತುಣುಕುಗಳನ್ನು ಪರಿಶೀಲಿಸಿದಾಗ ವಾಸ್ತವಾಂಶ ಬಹಿರಂಗಗೊಂಡಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. ಬದ್ರುದ್ದೀನ್‌ಗೆ ಈ ಪಿಸ್ತೂಲನ್ನು ಇಮ್ರಾನ್‌ ನೀಡಿದ್ದ ಹಾಗೂ ಗಾಯಾಳು ಸಫ್ವಾನ್‌ ಕೂಡ ಪಿಎಫ್‌ಐ ಸದಸ್ಯ ಎಂದು ತಿಳಿದುಬಂದಿದೆ.

ಅಸಲಿ ಗುರಿ ಯಾರು?, ಇಷ್ಟಕ್ಕೂ ಈ ಪಿಸ್ತೂಲನ್ನು ರಹಸ್ಯವಾಗಿ ತಂದಿರಿಸಿದ್ದು ಯಾಕೆಂದು ಪ್ರಶ್ನೆ? ಮಂಗಳೂರಿನಲ್ಲಿ ಇವರ ಅಸಲಿ ಟಾರ್ಗೆಟ್ ಯಾರಾಗಿದ್ದರು ಎನ್ನುವ ಪ್ರಶ್ನೆಯೂ ಎದುರಾಗಿದೆ. ಪಿಎಫ್ಐ ದೇಶದ್ರೋಹಿ ಕೃತ್ಯಕ್ಕಾಗಿ ನಿಷೇಧಗೊಂಡಿದ್ದ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರಿಗೆ ಗನ್ ತಂದಿಟ್ಟು ಯಾರ ಹೆಣ ಉರುಳಿಸುವ ಪ್ಲಾನ್ ಇತ್ತು ಎನ್ನುವ ಪ್ರಶ್ನೆ ಎದ್ದಿದೆ. ಈ ಹಿಂದೆಯೇ ಹಿಂದು ಸಂಘಟನೆ ನಾಯಕರು ಪಿಎಫ್ಐ ಹಿಟ್ ಲಿಸ್ಟ್ ನಲ್ಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಈಗ ಪಿಎಫ್ಐ ನಂಟಿದ್ದವರ ಕೈಯಲ್ಲಿ ಅಕ್ರಮ ಪಿಸ್ತೂಲ್ ಇರುವುದು ಪತ್ತೆಯಾಗಿದ್ದು ಇವರ ಒಳಸಂಚನ್ನು ಬಯಲು ಮಾಡಿದೆ. ಅದಕ್ಕೇ ಹೇಳೋದು, ಮನುಷ್ಯ ತಾನೊಂದು ಬಗೆದರೆ ವಿಧಿಯೊಂದು ಬಗೆಯುತ್ತೆ ಎಂದು. ರೌಡಿಗಳು ದುಷ್ಟ ಕೂಟ ಕಟ್ಟಿಕೊಂಡು ಏನೋ ಮಾಡಲು ಹೋಗಿ ಎಡವಟ್ಟಾಗಿದ್ದು, ಆಕಸ್ಮಿಕವಾಗಿ ಸಿಡಿದ ಗುಂಡು ತಮ್ಮವರದ್ದೇ ಹೊಟ್ಟೆಯನ್ನು ಸೀಳಿ ಗುಟ್ಟನ್ನು ರಟ್ಟು ಮಾಡಿದೆ. ನಿಷೇಧಿತ ಪಿಎಫ್‌ಐ ಮುಖಂಡ ಪಿಸ್ತೂಲ್‌ ಇರಿಸಿಕೊಂಡದ್ದು ಯಾಕೆ ಹಾಗೂ ಈತನ ಅಸಲಿ ಗುರಿ ಯಾರು ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಗೋವಾದಿಂದ ಮಂಗಳೂರಿಗೆ ಹೈಡ್ರೋ ವೀಡ್‌ ಗಾಂಜಾ ಪೂರೈಸುತ್ತಿದ್ದ ಕೇರಳ ಮೂಲದ ವ್ಯಕ್ತಿಯ ಬಂಧನ

Next Post

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮಹಿಳೆಗೆ ಮೆದುಳು ನಿಷ್ಕ್ರಿಯ, 176 ವರ್ಷಗಳ ಇತಿಹಾಸದಲ್ಲೇ ಮೊದಲು! ಇಬ್ಬರಿಗೆ ಕಣ್ಣು, ಒಬ್ಬರಿಗೆ ಲಿವರ್ ದಾನ ನೀಡಿದ ಮಹಿಳೆ

Related Posts

ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರು: ಎಪಿಕೆ ಫೈಲ್ ಡೌನ್‌ಲೋಡ್ ಮಾಡಿಸಿ ಹಿರಿಯ ನಾಗರಿಕರೊಬ್ಬರಿಗೆ 3.83 ಲಕ್ಷ ರೂ. ವಂಚನೆ

November 2, 2025
15
ಮಂಗಳೂರಿನ ನಟೋರಿಯಸ್ ರೌಡಿ ಟೋಪಿ ನೌಫಾಲ್ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರ ಹತ್ಯೆ
ಕ್ರೈಮ್ ನ್ಯೂಸ್

ಮಂಗಳೂರಿನ ನಟೋರಿಯಸ್ ರೌಡಿ ಟೋಪಿ ನೌಫಾಲ್ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರ ಹತ್ಯೆ

November 1, 2025
338
Next Post
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮಹಿಳೆಗೆ ಮೆದುಳು ನಿಷ್ಕ್ರಿಯ, 176 ವರ್ಷಗಳ ಇತಿಹಾಸದಲ್ಲೇ ಮೊದಲು! ಇಬ್ಬರಿಗೆ ಕಣ್ಣು, ಒಬ್ಬರಿಗೆ ಲಿವರ್ ದಾನ ನೀಡಿದ ಮಹಿಳೆ

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶಿವಮೊಗ್ಗದ ಮಹಿಳೆಗೆ ಮೆದುಳು ನಿಷ್ಕ್ರಿಯ, 176 ವರ್ಷಗಳ ಇತಿಹಾಸದಲ್ಲೇ ಮೊದಲು! ಇಬ್ಬರಿಗೆ ಕಣ್ಣು, ಒಬ್ಬರಿಗೆ ಲಿವರ್ ದಾನ ನೀಡಿದ ಮಹಿಳೆ

Discussion about this post

Recent News

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
31
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

November 2, 2025
42
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

World Cup 2025: ಮಹಿಳಾ ವಿಶ್ವಕಪ್​ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ; 25 ವರ್ಷದ ಬಳಿಕ ಹೊಸ ಚಾಂಪಿಯನ್ಸ್

November 3, 2025
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ  ಸ್ವರ್ಣ

ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ

November 2, 2025
ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ರೋಟರಿ ವಿದ್ಯಾ ಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

November 2, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d