• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ನಂಟು

Coastal Times by Coastal Times
April 10, 2022
in ಕರಾವಳಿ
ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಚೆಂಡಾಟಕ್ಕೂ ಧಾರ್ಮಿಕ ನಂಬಿಕೆ ನಂಟು
87
VIEWS
WhatsappTelegramShare on FacebookShare on Twitterinstagram

ಮಂಗಳೂರು, ಏಪ್ರಿಲ್ 10;  ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಸಂಭ್ರಮ ನಡೆಯುತ್ತಿದೆ. ಒಂದು ತಿಂಗಳ ಕಾಲ ನಡೆಯುವ ಜಾತ್ರೋತ್ಸವದ ಪ್ರಮುಖ ಆಕರ್ಷಣೆ ಪೊಳಲಿ ಚೆಂಡು ಉತ್ಸವ ಆಗಿದೆ. ಐದು ದಿನಗಳ ಕಾಲ‌ನಡೆಯುವ ಚೆಂಡು ಉತ್ಸವ ಭಕ್ತರ ಆಕರ್ಷಣೆಯ ಕಾರ್ಯಕ್ರಮವಾಗಿದ್ದು, ಕಾಲ್ಚೆಂಡು ಆಟದ ರೀತಿ ದೇವಳದ ಎದುರಿನ ಗದ್ದೆಯಲ್ಲಿ ರಬ್ಬರ್ ಚೆಂಡಿನಲ್ಲಿ ಭಕ್ತರು ಆಟ ಆಡುತ್ತಾರೆ.

ಪುರಾಣದ ಕಥೆಗಳ ಪ್ರಕಾರ ದೇವಿ ಆದಿ ಮಾಯೆ ರಾಕ್ಷಸರ ಸಂಹಾರ ಮಾಡಲು ಭಧ್ರಕಾಳಿಯಾಗಿ ರೂಪುಗೊಂಡು, ಲೋಕ‌ಕಂಟಕರಾಗಿ ಮೆರೆಯುತ್ತಿದ್ದ ಚಂಡ-ಮುಂಡ ಎಂಬ ರಾಕ್ಷಸರನ್ನು ವಧೆ ಮಾಡುತ್ತಾಳೆ. ರಾಕ್ಷಸರ ಶಿರವನ್ನು ಬೇರ್ಪಡಿಸಿ ವಧೆಯ ಸಂಭ್ರಮಾಚರಣೆಯನ್ನು ಮಾಡಲು ಚಂಡಮುಂಡರ ರುಂಡವನ್ನು ಚೆಂಡಾಗಿ ಪರಿವರ್ತಿಸಿ ಆಟ ಆಡುತ್ತಾರೆ ಎಂದು ಪುರಾಣದಲ್ಲಿ ಉಲ್ಲೇಖವಾಗಿದೆ.

ಇದೇ ಹಿನ್ನಲೆಯಲ್ಲಿ ಇಂದಿಗೂ ಪೊಳಲಿ ಜಾತ್ರೋತ್ಸವದ ಐದು ದಿನ ಭಕ್ತರು ದೇವಳದ ಗದ್ದೆಯಲ್ಲಿ ಚೆಂಡಾಟ ಆಡುತ್ತಾರೆ. ‘ಚೆಂಡು ಉತ್ಸವ’ ಎಂದೂ ಕರೆಯಲಾಗುವ ಪೊಳಲಿ ಚೆಂಡು ಹಬ್ಬವು ವಾರ್ಷಿಕ ದೇವಸ್ಥಾನದ ಉತ್ಸವದ ಸಮಯದಲ್ಲಿ ಐದು ದಿನಗಳ ಕಾಲ ನಡೆಯುವ ಜನಪ್ರಿಯ ಚೆಂಡು ಆಟವಾಗಿದೆ.

ಚರ್ಮದ ಚೆಂಡು ಇದಾಗಿದ್ದು, ಮಿಜಾರಿನಲ್ಲಿರುವ ಕಾಬ್ಲರ್ ಕುಟುಂಬದಿಂದ ಮಾಡಲ್ಪಟ್ಟಿದೆ. ಕಡಪು ಕರಿಯಾದಿಂದ ಬಂದ ಎಣ್ಣೆ ಮಿಲ್ಲರ್ ಕುಟುಂಬಕ್ಕೆ ಕಾಬ್ಲರ್ ಕುಟುಂಬದಿಂದ ಚೆಂಡನ್ನು ತರುವ ಜವಾಬ್ದಾರಿಯನ್ನು ನೀಡಲಾಗುತ್ತದೆ. ಪೊಳಲಿ ಜಾತ್ರೆಗೆ ದಿನ ನಿಗದಿಪಡಿಸುವಲ್ಲಿ ಮೂಡುಬಿದಿರೆಯ ಪುತ್ತಿಗೆಯ ಕ್ಷೇತ್ರದ ಪಾತ್ರ ಮುಖ್ಯವಾಗಿದೆ. ಕಳೆದ 16 ವರ್ಷಗಳಿಂದ ಪೊಳಲಿ ಚೆಂಡಿನ ಸಿದ್ಧತೆಯನ್ನು ಶ್ರದ್ಧಾ ಭಕ್ತಿಯಿಂದ ನಿರ್ಮಿಸುತ್ತಿರುವವರು ಮೂಡಬಿದಿರೆಯ ಗಾಂಧಿನಗರದ ಎಂ. ಪದ್ಮನಾಭ ಸಮಗಾರ.

ತಂದೆ ಕೃಷ್ಣ ಸಮಗಾರರರಿಂದ ಬಂದ ಬಳುವಳಿ :

ಎಂ. ಪದ್ಮನಾಭ ಸಮಗಾರ ಅವರು ತಂದೆ ಕೃಷ್ಣ ಸಮಗಾರರರಿಂದ ಬಳುವಳಿಯಾಗಿ ಬಂದ ವೃತ್ತಿ ಕೌಶಲದ ಜತೆಗೆ ಚೆಂಡು ತಯಾರಿಕೆಯನ್ನೂ ಪದ್ಮನಾಭ ಮುಂದುವರಿಸಿಕೊಂಡು ಬಂದಿದ್ದಾರೆ. ಬೆಂಗಳೂರಿನಿಂದ ಗಾಡಿ ಎತ್ತಿನ ದಪ್ಪ ಚರ್ಮವನ್ನು ಬೆಂಗಳೂರಿನಲ್ಲಿ ಶೋಧಿಸಿ, ಮನೆಗೆ ತಂದು ತಮಗೆ ಬೇಕಾದ ರೀತಿಯಲ್ಲಿ ಹದ ಮಾಡಿ ತೆಂಗಿನ ನಾರನ್ನು ಚೆಂಡಿನೊಳಗೆ ನಿರ್ವಾತವಿಲ್ಲದಂತೆ ತುಂಬಿ ಹೊಲಿಯುವ ಚಾಕಚಕ್ಯತೆಗೆ ಅಷ್ಟೇ ಶ್ರಮವಿದೆ.

ಮೊದಲು ವೃತ್ತಕಾರದ ಚರ್ಮವನ್ನು ಕತ್ತರಿಸಿ ಅರ್ಧ ಗೋಲಾಕಾರವಾಗಿ ರೂಪಿಸುವ ಹಂತದಲ್ಲಿ ಪುಟ್ಟ ಒನಕೆಯಿಂದ ಚರ್ಮವನ್ನು ಗುದ್ದಿ ಹದ ಮಾಡಬೇಕಾಗುತ್ತದೆ. ಹೀಗೆ ಎರಡು ಅರ್ಧ ಗೋಲಾಕಾರದ ಬಟ್ಟಲುಗಳು ತಯಾರಾದ ಬಳಿಕ ಎರಡನ್ನೂ ಚರ್ಮದ ದಾರದಿಂದಲೇ ಆರ್ಧಾಂಶ ಹೋಲಿಯಲಾಗುತ್ತದೆ.

ತೆಂಗಿನ ನಾರನ್ನು ನೀರು ಹನಿಸಿ ಒದ್ದೆ ಮಾಡಿ ಈ ಗೋಲದೊಳಗೆ ತುರುಕಿ ಮತ್ತೆ ಒತ್ತಡ ಹಾಕಿ ಗುದ್ದಬೇಕು. ಹೀಗೆ ಗುದ್ದಿ ಗಟ್ಟಿಗೊಳಿಸುವಾಗ ಎಲ್ಲಿಯೂ ಗೋಲದೊಳಗೆ ಖಾಲಿ ಜಾಗ ಸೃಷ್ಠಿಯಾಗದಂತೆ ನೋಡಿಕೊಳ್ಳಬೇಕಾಗುತ್ತದೆ. ಹೀಗೆ ಸ್ವಲ್ಪ ಚಪ್ಪಟ್ಟೆಯಾದ ಚೆಂಡು ತಯಾರಾಗುತ್ತದೆ. ಇದನ್ನು ಸಂಬಂಧಪಟ್ಟವರು ಒಯ್ದ ನಂತರ ಎಣ್ಣೆ ಕೊಡುತ್ತಾರೆ. ಆಗ ಪೂರ್ತಿಯಾಗಿ ಚೆಂಡಿನಾಕಾರಕ್ಕೆ ಬರುತ್ತದೆ. ಹೀಗೆ ಜಿಲ್ಲೆಯ ಹತ್ತು ಹಲವು ಧಾರ್ಮಿಕ ಕ್ಷೇತ್ರಗಳಿಗೆ ಚೆಂಡು ತಯಾರಿಸಿಕೊಡುವ ಅವಕಾಶ ಪಡೆದಿರುವ ಪದ್ಮನಾಭ ಅಪರೂಪದ ಸಾಧಕರಾಗಿದ್ದಾರೆ.

ಪೊಳಲಿ ಸೇರಿದಂತೆ ಜಿಲ್ಲೆಯ ಸುಮಾರು 18 ಕ್ಷೇತ್ರಗಳಿಗೆ ಅಲ್ಲಿನ ವಾರ್ಷಿಕ ಜಾತ್ರೆಗಳಿಗೆ ಚರ್ಮದ ಚೆಂಡು ಒದಗಿಸುತ್ತಾ ಬಂದಿದ್ದಾರೆ ಎಂ. ಪದ್ಮನಾಭ ಸಮಗಾರ. ಅದರಲ್ಲಿ ಪೊಳಲಿ ಚೆಂಡು ದೊಡ್ಡ ಗಾತ್ರದ್ದು. ವಾಮಂಜೂರಿನ ಅಮೃತೇಶ್ವರ ದೇವಸ್ಥಾನ, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನ, ಬೆಳುವಾಯಿ ನಡ್ಯೋಡಿಗೆ ಮತ್ತು ಸಾಣೂರು. ಕೋಟೆಬಾಗಿಲು, ಮೂಡುಬಿದರೆಯ ಆದಿಶಕ್ತಿ ಮಹಾದೇವಿ ಮತ್ತು ಮಹಾಕಾಳಿ ದೇವಸ್ಥಾನಗಳು, ಮಲ್ಲೂರು, ಅಮ್ಟಾಡಿ, ಇರುವೈಲು, ಮುಚ್ಚೂರು, ಮಾರ್ನಾಡು, ಅಳಿಯೂರು, ಅಶ್ವತ್ಥಪುರ, ಪಾಲಡ್ಕ ಹೀಗೆ ವಿವಿಧೆಡೆ ಹಲವು ಗಾತ್ರದ ಚೆಂಡುಗಳನ್ನು ಒದಗಿಸುತ್ತಾರೆ.

Related Posts

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ
ಕರಾವಳಿ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
20
ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ
ಕರಾವಳಿ

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ

September 22, 2023
47

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
107
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
20
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In