ಪುತ್ತೂರು: ತಲವಾರು ಹಿಡಿದು ನಿಂತಿದ್ದ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿ ಕಾನೂನು ಉಲ್ಲಂಘಿಸಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ಸಂಪ್ಯ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಟ್ಯಾರು ನಿವಾಸಿ ಸುಜಿತ್ ಬಂಗೇರ (36) ಮತ್ತು ಮರಿಕೆ ನಿವಾಸಿ ಪುಟ್ಟಣ್ಣ (32) ಬಂಧಿತ ಆರೋಪಿಗಳು.
ಯುವಕರನ್ನು ಪುತ್ತೂರಿನಲ್ಲಿ ಈ ಹಿಂದೆ ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಸುಜಿತ್ ಸಂಟ್ಯಾರು, ಪುಟ್ಟಣ್ಣ ಮರಿಕೆ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಪೋಟೋ ವೈರಲ್ ಆದ ಬೆನ್ನಲ್ಲೇ ಯುವಕರ ವಿರುದ್ಧ ಸುಮೊಟೋ ಕೇಸ್ ದಾಖಲಾಗಿದೆ. ಆರೋಪಿಗಳನ್ನು ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧನಕ್ಕೆ ಆಗ್ರಹ: ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ. ಆಗ್ರಹಿಸಿದ್ದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋದಲ್ಲಿ ಪಾಲ್ಗೊಂಡಿದ್ದ ಇಬ್ಬರು ಯುವಕರು ತಲ್ವಾರ್ ಹಿಡಿದು ಪೋಸು ಕೊಟ್ಟಿದ್ದ ವಿಡಿಯೋ ವೈರಲ್ ಆಗಿತ್ತು. ಪೊಲೀಸರು ಸುಮೊಟೊ ಕೇಸು ದಾಖಲಿಸಿದ್ದಲ್ಲದೆ ಆ ಇಬ್ಬರನ್ನೂ ಜೈಲಿಗೆ ತಳ್ಳಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post