• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌ ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ

Coastal Times by Coastal Times
June 10, 2022
in ಕರಾವಳಿ
ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌  ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ
68
VIEWS
WhatsappTelegramShare on FacebookShare on Twitter

ಉಳ್ಳಾಲ: ಕ್ಯಾನ್ಸರ್‌ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡು ವುದಕ್ಕಾಗಿ ಯೆನೆಪೋಯ ವಿಶ್ವವಿದ್ಯಾಲ ಯವು ಟಾಟಾ ಟ್ರಸ್ಟ್‌  ಸಹಯೋಗದಲ್ಲಿ ಸ್ಥಾಪಿಸಿರುವ ಜುಲೇಖಾ ಯೆನೆಪೋಯ ಆಂಕಾಲಜಿ ಇನ್‌ಸ್ಟಿಟ್ಯೂಟ್ ಉದ್ಘಾಟ ನೆಗೆ ಸಜ್ಜಾಗಿದೆ ಎಂದು ಕುಲಪತಿ ಎಂ.ವಿಜಯಕುಮಾರ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕ್ಯಾನ್ಸರ್‌ನಿಂದ ನಿಧನರಾಗಿರುವ ಜುಲೇಖಾ ಅವರ ಹೆಸರನ್ನು ಸಂಸ್ಥೆಗೆ ಇಡಲಾಗಿದೆ. ಇವರು ಯೆನೆಪೋಯ ವಿವಿ ಕುಲಾಧಿಪತಿ ಅಬ್ದುಲ್‌ ಕುಂಞಿ ಅವರ ತಾಯಿ. ಕಳೆದ ಫೆಬ್ರವರಿಯಲ್ಲಿ ಕಟ್ಟಡ ಪೂರ್ಣಗೊಂಡಿದೆ. ಒಂದು ತಿಂಗಳಿನಿಂದ ಕೇರಳ, ಉಡುಪಿ ಮತ್ತು ಕರ್ನಾಟಕದ ಉತ್ತರ ಭಾಗಗಳ ಸುಮಾರು 50 ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಆಂಕಾಲಜಿ ವಿಭಾಗದ ಮುಖ್ಯಸ್ಥ ಜಲಾಲುದ್ದೀನ್‌ ಅಕ್ಬರ್‌ ಮಾತನಾಡಿ, ಸಂಸ್ಥೆಯಲ್ಲಿ ರೇಡಿಯೊಥೆರಪಿ ಮತ್ತು ನ್ಯೂಕ್ಲಿಯರ್‌ ಮೆಡಿಸಿನ್‌ ವಿಭಾಗಗಳನ್ನು ಸೇರ್ಪಡೆಗೊಳಿಸಲಾಗಿದೆ. ಚಿಕಿತ್ಸಾ ಸೌಲಭ್ಯಗಳನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ. ಇಲ್ಲಿ ಕ್ಯಾನ್ಸರ್‌ಗೆ ಎಲ್ಲ ರೀತಿಯ ಚಿಕಿತ್ಸೆ ಸಿಗಲಿದೆ. ಕೇಂದ್ರವು 36 ಸಾವಿರ ಚದರ ಅಡಿ ವಿಸ್ತೀರ್ಣ ಹೊಂದಿದೆ. ಕಟ್ಟಡದಲ್ಲಿ ಆರು ಮಹಡಿಗಳಿದ್ದು, ಎರಡು ರೇಡಿಯೊ ಥೆರಪಿ ಬಂಕರ್‌ಗಳು, ಒಂದು ಬ್ರಾಕಿ ಥೆರಪಿ ಬಂಕರ್‌ ಇವೆ. ಟ್ರೂ ಭೀಮ್‌ ರೇಡಿಯೊಥೆರಪಿ ಯಂತ್ರವನ್ನು ಬಳಸಲಾಗುತ್ತಿದೆ ಎಂದರು. ಟ್ರೂ ಬೀಮ್ ರೇಡಿಯೊಥೆರಪಿ ಯಂತ್ರವು ಉದ್ದೇಶಿತ ವಿಧಾನದೊಂದಿಗೆ ಆರೋಗ್ಯಕರ ಅಂಗಾಂಶಗಳಿಗೆ ಹಾನಿಯನ್ನು ಕಡಿಮೆ ಮಾಡುತ್ತದೆ. ದೇಹದ ಎಲ್ಲ ಪರೀಕ್ಷೆಗಳ ಜತೆಗೆ, ಹೆಚ್ಚು ಸುಧಾರಿತ ಪೆಟ್ ಸಿಇಟಿ ಸ್ಕ್ಯಾನರ್, ಸಿ.ಟಿ ಸ್ಕ್ಯಾನ್‌ಗಿಂತ ಬೇಗ ಕ್ಯಾನ್ಸರ್ ಅನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಕೀಮೊಥೆರಪಿಯನ್ನು ನೀಡಲು 10 ಹಾಸಿಗೆಗಳ ಡೇ ಕೇರ್ ಸೌಲಭ್ಯವನ್ನು ಸಹ ಸ್ಥಾಪಿಸಲಾಗಿದೆ ಎಂದು ಡಾ. ವಿಜಯಾ ಹೇಳಿದರು.

2016ರಲ್ಲಿ ಉದ್ಘಾಟನೆಗೊಂಡ ಕ್ಯಾನ್ಸರ್ ಕೇಂದ್ರವು 120 ಹಾಸಿಗೆಗಳ ಕೇಂದ್ರವಾಗಿದೆ. ಕೇಂದ್ರವು 1,100 ಹಾಸಿಗೆಗಳನ್ನು ಹೊಂದಿರುವ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹೊಂದಿಕೊಂಡಿದೆ. ಅತ್ಯಾಧುನಿಕ ರೇಡಿಯೊಥೆರಪಿ ಚಿಕಿತ್ಸೆಗೆ ರೋಗಿಗೆ ಬೆಂಗಳೂರಿನಲ್ಲಿ ₹ 8 ಲಕ್ಷ ವೆಚ್ಚವಾದರೆ, ಇಲ್ಲಿ ಈ ವೆಚ್ಚವು ₹ 1 ಲಕ್ಷ ದಾಟುವುದಿಲ್ಲ. ಐಸೊಟೋಪ್ ಸ್ಕ್ಯಾನ್‌ಗೆ ಬೆಂಗಳೂರಿನ ರೋಗಿಗೆ ₹ 30 ಸಾವಿರ ವೆಚ್ಚವಾಗುತ್ತದೆ. ಆದರೆ ನಮ್ಮ ಸಂಸ್ಥೆಯಲ್ಲಿ ಬಿಪಿಎಲ್‌ ಕಾರ್ಡ್ ಇಲ್ಲದವರಿಗೂ ₹ 9,000ಕ್ಕಿಂತ ಕಡಿಮೆ ಇರುತ್ತದೆ. ಬಿಪಿಎಲ್ ಕಾರ್ಡ್‌ದಾರರು ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ನೋಂದಾಯಿಸಿಕೊಂಡವರಿಗೆ ಚಿಕಿತ್ಸೆ ಉಚಿತವಾಗಿರುತ್ತದೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಆಂಕಾಲಜಿ ವಿಭಾಗದ ಮುಖ್ಯಸ್ಥ ರಾದ ಅಚ್ಯುತ್‌ ನಾಯಕ್‌, ರಾಜೇಶ್‌ ಕೃಷ್ಣ, ರೋಹನ್‌ ಶೆಟ್ಟಿ ಹಾಗೂ ಅರುಣ್‌ ಎಸ್‌ ನಾಥ್‌ ಇದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್‌: ಮಷಿನ್​ ಮೂಲಕ ಡೆಪಾಸಿಟ್​ ಆದ ಹಣ ಖಾತೆಗೆ ಬಂದಿಲ್ಲವೆಂದು ಮಹಿಳೆ ರಂಪಾಟ..

Next Post

ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
44
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
38
Next Post
ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ

ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
44
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d