ಕುಂದಾಪುರ, ಜೂ.9: ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ವಕ್ವಾಡಿ – ಬೀಜಾಡಿ ರಸ್ತೆಯಲ್ಲಿ ವಿದ್ಯಾರ್ಥಿನಿ ಶುಕ್ರವಾರ ಬೆಳಗ್ಗೆ ಕಾಲೇಜಿಗೆಂದು ನಡೆದು ಹೋಗುತ್ತಿದ್ದಾಗ ನಜೀರ್ (35) ಎಂಬಾತ ಹಿಂದಿನಿಂದ ಬಂದು ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಹೆದರಿದ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು ಅಷ್ಟರಲ್ಲಿ ಸ್ಥಳೀಯರು ಸೇರಿದ್ದಾರೆ.

ವಿದ್ಯಾರ್ಥಿನಿ ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ ಎನ್ನಲಾಗಿದೆ. ನಂತರ ಸೇರಿದ ಯುವಕರು ವಿದ್ಯಾರ್ಥಿನಿ ಕೈಯಲ್ಲೇ ನಜೀರ್ಗೆ ಚಪ್ಪಲಿಯಿಂದ ಹೊಡೆಸಿದ್ದಾರೆ. ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post