• About us
  • Contact us
  • Disclaimer
Thursday, June 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನೂಲು ಕಟ್ಟಿ ಮಗುವಿನ ಆರೋಗ್ಯ ಸರಿಪಡಿಸುವುದಾಗಿ ಬಂದ ನಕಲಿ ಮಂತ್ರವಾದಿಗಳಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Coastal Times by Coastal Times
June 10, 2023
in ಕರಾವಳಿ
ನೂಲು ಕಟ್ಟಿ ಮಗುವಿನ ಆರೋಗ್ಯ ಸರಿಪಡಿಸುವುದಾಗಿ ಬಂದ ನಕಲಿ ಮಂತ್ರವಾದಿಗಳಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ
130
VIEWS
WhatsappTelegramShare on FacebookShare on Twitter

ಉಪ್ಪಿನಂಗಡಿ : ಜೂ 10 :  ಮಗುವಿನ ಆರೋಗ್ಯ ಸಮಸ್ಯೆಯನ್ನು ಮಂತ್ರದ ಮೂಲಕ ಪರಿಹರಿಸುವುದಾಗಿ ಬಂದ ಮಂತ್ರವಾದಿ ಮತ್ತು ಆತನ ಸಹಚರನಿಗೆ ಯುವಕರ ತಂಡವೊಂದು ಗೂಸಾ ನೀಡಿರುವ  ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ವಳಾಲು ಎಂಬಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ ಎನ್ನಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣ ವೈರಲ್‌ ಆಗಿದೆ.

ಉಫ್ಪಿನಂಗಡಿ ಸಮೀಪದ ವಳಾಲು ಎಂಬಲ್ಲಿನ ಮುಸ್ಲಿಂ ಕುಟುಂಬವೊಂದರ ಮಗುವಿಗೆ ಅನಾರೋಗ್ಯ ಸಮಸ್ಯೆಕಾಡುತಿತ್ತು . ಕಡಬ ತಾಲೂಕಿನ ಕೋಡಿಂಬಾಳದ  ಮಂತ್ರವಾದಿಗಳೆಂದು ಹೇಳಿಕೊಂಡ  ಇಬ್ಬರು ಈ ಆರೋಗ್ಯ ಸಮಸ್ಯೆಯನ್ನು  ಮಂತ್ರದ ಮೂಲಕ ಪರಿಹರಿಸುವುದಾಗಿ ಆ ಕುಟುಂಬವನ್ನು ಸಂಪರ್ಕಿಸಿ ತಿಳಿಸಿದ್ದಾರೆ . ಈ ಹಿನ್ನಲೆಯಲ್ಲಿ ಮಗುವಿನ ಮನೆಯವರು ಮನೆಗೆ ಬಂದು ಪರಿಹರಿಸುವಂತೆ ಅವರಲ್ಲಿ ಕೇಳಿಕೊಂಡಿದ್ದಾರೆ. ಅದರಂತೆ ವಾರದ ಹಿಂದೆ ಕೋಡಿಂಬಾಳದ ಮಂತ್ರವಾದಿ ಹಾಗೂ ಆತನ ಸಹಚರರು ವಳಾಲಿನ ಮಗುವಿದ್ದ ಮನೆಗೆ ಬಂದಿದ್ದಾರೆ. ಮಗುವಿನ ದೋಷ ಪರಿಹಾರಕ್ಕಾಗಿ ಮಂತ್ರಿಸಿದ ನೂಲು ಕಟ್ಟುವುದಾಗಿ ತಿಳಿಸಿದ ಅವರು ಮನೆಯವರ ಮುಂದೆ ನೂಲು ಮಂತ್ರಿಸಲು ಮುಂದಾಗಿದ್ದಾರೆ.

ಈ ವೇಳೆ ಅಲ್ಲಿಗೆ ಒಬ್ಬರಿಗೆ ಮಂತ್ರವಾದಿ ಹಾಗೂ ಸಹಚರರನ್ನು ತಾನೂ ಈ ಹಿಂದೆ ಎಲ್ಲೋ ನೋಡಿರುವ  ಬಗ್ಗೆ ಸಂಶಯ ಉಂಟಾಗಿದ್ದು, ಅವರಿಬ್ಬರು ಕಡಬ ಭಾಗದಲ್ಲಿ ಗುಜರಿ ಇತ್ಯಾದಿ ವಸ್ತುಗಳನ್ನು ಹೆಕ್ಕುವ  ಹಾಗೂ ಅದೇ ರೀತಿಯ ಇನ್ನಿತರ ಚಟುವಟಿಕೆಗಳನ್ನು ಮಾಡುತ್ತಿದ್ದ ವ್ಯಕ್ತಿಗಳು ಎನ್ನುವ ಶಂಕೆ ಮೂಡಿದೆ. ಈ ಹಿನ್ನಲೆಯಲ್ಲಿ ಆತ ಮನೆಯ ಇತರ ಸದಸ್ಯರ ಜತೆ ಸೇರಿ ಮಂತ್ರವಾದಿಯ ಪೂರ್ವಾಪರ ವಿಚಾರಿಸಲು ತೊಡಗಿದ್ದಾರೆ ಎನ್ನಲಾಗಿದೆ. ಈ ವೇಳೆ ಮಂತ್ಸರವಾದಿ ಹಾಗೂ ಆತನ ಸಹಚರ ಸಮರ್ಪಕ ಉತ್ತರ ನೀಡಲಾಗದೆ ತಬ್ಬಿಬ್ಬಾಗಿದ್ದಾರೆ.

ಮೂಲಗಳ ಪ್ರಕಾರ ಬಳಿಕ ಅವರಿಬ್ಬರನ್ನು ಯುವಕರ ತಂಡ ಪೊಲೀಸರಿಗೆ ಒಪ್ಪಿದೆ. ನಕಲಿ ಮಂತ್ರವಾದಿ ಹಾಗೂ ಅವರನ್ನು ಮನೆಗೆ ಕರೆಸಿಕೊಂಡ ಕುಟುಂಬವೂ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು  ಸುದೀರ್ಘ ಮಾತುಕತೆ ಮೂಲಕ ಪ್ರಕರಣವನ್ನು ಠಾಣೆಯಲ್ಲಿ ಇತ್ಯಾರ್ಥ ಪಡಿಸಿರುವುದಾಗಿ ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ಮಂತ್ರವಾದಿ ಹಾಗೂ ಯುವಕರ ತಂಡದ ನಡುವೆ ಮಾತಿಗೆ ಮಾತು ಬೆಳೆಯುವ ಹಾಗೂ ಮಂತ್ರವಾದದ ಹೆಸರಿನಲ್ಲಿ ನಡೆಸುತ್ತಿರುವ ಮೋಸದ ಕುರಿತು ಆಕ್ರೋಶ ವ್ಯಕ್ತಪಡಿಸುವುದನ್ನು ಕಾಣಬಹುದಾಗಿದೆ. ಇತ್ತಂಡಗಳು ಪರಸ್ಪರ ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಒಂದು ಹಂತದಲ್ಲಿ ಯುವಕರು ಇಬ್ಬರಿಗೂ ಹಿಗ್ಗಾಮುಗ್ಗಾ ಥಳಿಸಿರುವುದು ಕಾಣುತ್ತದೆ .

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಅಂತರಾಷ್ಟ್ರೀಯ ಉಗ್ರ ಸಂಘಟನೆಗಳೊಂದಿಗೆ ನಂಟು, ಎಟಿಎಸ್ ನಿಂದ ಗುಜರಾತಿನ ಪೋರಬಂದರ್ ನಲ್ಲಿ ವಿದೇಶಿ ಪ್ರಜೆ ಸೇರಿ ನಾಲ್ವರ ಬಂಧನ

Next Post

ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸುವ ‘ಶಕ್ತಿ’ಗೆ ಸಿಎಂ ಚಾಲನೆ

Related Posts

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರಾವಳಿ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ
ಕರಾವಳಿ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
Next Post
ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸುವ ‘ಶಕ್ತಿ’ಗೆ ಸಿಎಂ ಚಾಲನೆ

ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಒದಗಿಸುವ ‘ಶಕ್ತಿ’ಗೆ ಸಿಎಂ ಚಾಲನೆ

Discussion about this post

Recent News

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
30
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
75
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಚಾಲನೆ

June 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d