• About us
  • Contact us
  • Disclaimer
Tuesday, September 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ

Coastal Times by Coastal Times
June 10, 2024
in ಕ್ರೈಮ್ ನ್ಯೂಸ್
ಬೋಳಿಯಾರು ಬಿಜೆಪಿ ವಿಜಯೋತ್ಸವ ಮೆರವಣಿಗೆ ಮುಗಿಸಿ ವಾಪಸ್ಸು ಬರುತ್ತಿದಾಗ ಚೂರಿ ಇರಿತ, ಐವರು ಆರೋಪಿಗಳ ಬಂಧನ
115
VIEWS
WhatsappTelegramShare on FacebookShare on Twitter

ಮಂಗಳೂರು, ಜೂನ್ 10: ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ಚೂರಿಯಿಂದ ದಾಳಿ ನಡೆಸಿದ ಘಟನೆ ಸಂಬಂಧಿಸಿ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತರು.

ಭಾನುವಾರ ರಾತ್ರಿ ಬೋಳಿಯಾರ್‌ನಲ್ಲಿ ವಿಜಯೋತ್ಸವದ ಮೆರವಣಿಗೆ ನಡೆದಿದ್ದು, ಮೆರವಣಿಗೆ ಬೋಳಿಯಾರ್ ಮಸೀದಿ ಮುಂದೆ ಸಾಗಿ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಸಾಗಿದ್ದರು. ಇದಾದ ಬಳಿಕ ವಿಜಯೋತ್ಸವ ಮುಗಿಸಿ ಮಸೀದಿ ಬಳಿ ಹೋಂಡಾ ಆ್ಯಕ್ಟೀವಾದಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರಾದ ಹರೀಶ್, ನಂದಕುಮಾರ್, ಕೃಷ್ಣಕುಮಾರ್ ‘ಬೋಲೋ ಭಾರತ್ ಮಾತಾ ಕೀ ಜೈ’ ಎಂಬ ಘೋಷಣೆ ಕೂಗಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಮೂವರನ್ನು ಮಸೀದಿ ಮುಂಭಾಗ ನಿಂತ ವ್ಯಕ್ತಿಯೊಬ್ಬ ಅಟ್ಟಾಡಿಸಿಕೊಂಡು ಹೋಗುವುದನ್ನು ಕಾಣಬಹುದು ಇದರ ಸಿಸಿಟಿವಿ ವಿಡಿಯೋವನ್ನೂ ಮಸೀದಿಯವರು ಬಿಡುಗಡೆ ಮಾಡಿದ್ದಾರೆ.

ಆ ವ್ಯಕ್ತಿಯನ್ನು 20-25ರಷ್ಟಿದ್ದ ಮುಸ್ಲಿಂ ಯುವಕರು ಹಿಂಬಾಲಿಸುತ್ತಾರೆ. ಮಸೀದಿಯಿಂದ 800 ಮೀಟರ್‌ ದೂರದಲ್ಲಿ ಬೋಳಿಯಾರ್‌ ಕ್ರಾಸ್‌ ಸಮಾಧಾನ ಬಾರ್‌  ಬಳಿ ಬೈಕನ್ನು ಮುಸ್ಲಿಂ ಯುವಕರ ತಂಡ ತಡೆದು,  ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮೂವರು ಬಿಜೆಪಿ ಕಾರ್ಯಕರ್ತರಿಗೆ ಥಳಿಸಲಾಗಿದ್ದು,  ಬಳಿಕ  ಅವರ ಪೈಕಿ ಇಬ್ಬರಿಗೆ ಚೂರಿಯಿಂದ ಇರಿದಿರುವುದಾಗಿ ಆರೋಪಿಸಲಾಗಿದೆ.

ಹರೀಶ್ (41) ಹಾಗೂ ನಂದಕುಮಾರ್ (24) ಇರಿತಕ್ಕೆ ಒಳಗಾದವರು. ಕೃಷ್ಣ ಕುಮಾರ್ ಎಂಬಾತನಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಲಾಗಿತ್ತು.  ಹಲ್ಲೆಯಾಗುತ್ತಿದ್ದಂತೆ ಸ್ಥಳೀಯರು ಒಟ್ಟು ಸೇರಿದ್ದು ಗಂಭೀರ ಗಾಯಗೊಂಡ ಹರೀಶ್ ಹಾಗೂ ನಂದಕುಮಾರ್‌ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಚೂರಿಯಿಂದ ಇರಿದ ರಭಸಕ್ಕೆ ಒಬ್ಬನ ಬೆನ್ನಿಗೆ ಗಾಯವಾದ್ರೆ ಇನ್ನೊಬ್ಬನ ಸೊಂಟಕ್ಕೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಘಟನೆ ಸಂಬಂಧ ಇನ್ನೂ ಹಲವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ದೂರು ಆಧರಿಸಿ ಪೊಲೀಸರು ಸೆಕ್ಷನ್ 143, 147, 148, 153ಎ, 504, 506, 149 ಅಡಿ ಪ್ರಕರಣ ದಾಖಲಿಸಿದ್ದಾರೆ. ಸುರೇಶ್, ವಿನಯ್, ಸುಭಾಶ್, ರಂಜಿತ್, ಧನಂಜಯ ಆರೋಪಿಗಳೆಂದು ಹೆಸರಿಸಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಚೂರಿ ಇರಿತದ ವಿಚಾರ ತಿಳಿಯುತ್ತಿದ್ದಂತೆ ಬೋಳಿಯಾರಿನಲ್ಲಿ ಎರಡೂ ಕೋಮಿನ ಜನರು ಸೇರಿದ್ದರು. ಬಳಿಕ ಪೊಲೀಸರು ಅವರನ್ನು ಚದುರಿಸುವ ಪ್ರಯತ್ನ ಮಾಡಿದ್ದರು. ಆನಂತರ, ಮಧ್ಯರಾತ್ರಿ ವೇಳೆಗೆ ಕೋಣಾಜೆ ಠಾಣೆಯ ಮುಂದೆ ಸೇರಿದ್ದ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹ ಮಾಡಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಘಟನೆ ನಡೆದ ಬಾರ್ ಮುಂಭಾಗದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರುಕಟ್ಟೆ ಗೆ ಬೆಂಕಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ

Next Post

ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ; ಎಚ್ಡಿಕೆಗೆ ಬೃಹತ್ ಕೈಗಾರಿಕೆ ಬಂಪರ್, ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?

Related Posts

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
21
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು
ಕ್ರೈಮ್ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಪೊಲೀಸ್​ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಾವು

August 28, 2026
58
Next Post
ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ; ಎಚ್ಡಿಕೆಗೆ ಬೃಹತ್ ಕೈಗಾರಿಕೆ ಬಂಪರ್, ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?

ಕೇಂದ್ರ ಸಚಿವರಿಗೆ ಖಾತೆ ಹಂಚಿಕೆ ; ಎಚ್ಡಿಕೆಗೆ ಬೃಹತ್ ಕೈಗಾರಿಕೆ ಬಂಪರ್, ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ?

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
39
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d