• About us
  • Contact us
  • Disclaimer
Wednesday, January 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಶಬೀರ್ ಬ್ರಿಗೇಡ್ ಮರು ಆಯ್ಕೆ

Coastal Times by Coastal Times
July 10, 2025
in ಕರಾವಳಿ, ರಾಜ್ಯ
ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಶಬೀರ್ ಬ್ರಿಗೇಡ್ ಮರು ಆಯ್ಕೆ
39
VIEWS
WhatsappTelegramShare on FacebookShare on Twitter

ಬೆಂಗಳೂರಿನಲ್ಲಿ ಉದ್ಯೋಗ, ವ್ಯಾಪಾರ ಸೇರಿದಂತೆ ತಮ್ಮ ಬದುಕು ಕಟ್ಟಿಕೊಂಡಿರುವ ಕರಾವಳಿ‌ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವಾರ್ಷಿಕ ವಿಶೇಷ ಮಹಾಸಭೆಯು ಕ್ವೀನ್ಸ್ ರೋಡ್‌ನ ದಾರುಸ್ಸಲಾಂ ಸಭಾಂಗಣದಲ್ಲಿ ಬುಧವಾರ(ಜುಲೈ 9) ಸಂಜೆ ನಡೆಯಿತು.

ಸಭೆಯು ಉಬೈದ್ ಮಲ್ಲೇಶ್ವರಂ ಅವರ ಕಿರಾಅತ್ ಮೂಲಕ ಆರಂಭಗೊಂಡಿತು. ಪ್ರಾಸ್ತಾವಿಕವಾಗಿ ಶಬೀರ್ ಬ್ರಿಗೇಡ್ ಮಾತನಾಡಿದರು. ಕಳೆದ ಒಂದು ವರ್ಷ ಅವಧಿಯ ಖರ್ಚು ವೆಚ್ಚ, ವಾರ್ಷಿಕ ಕೆಲಸಕಾರ್ಯಗಳ ವರದಿಯನ್ನು ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ ವಾಚಿಸಿದರು. ಹೊಸ ನಾಯಕತ್ವ ಆಯ್ಕೆ ಪ್ರಕ್ರಿಯೆಯನ್ನು ಬಿಸಿಸಿಯ ಮಾರ್ಗದರ್ಶಕರಾದ ಸುಹೈಲ್ ಕಂದಕ್ ಹಾಗೂ ಹನೀಫ್ ಖಾನ್ ಕೊಡಾಜೆ ನೆರವೇರಿಸಿ ಕೊಟ್ಟರು.

ನೂತನವಾಗಿ 55 ಸದಸ್ಯರ ಕಾರ್ಯಕಾರಿಣಿ ಸಮಿತಿಯು ಆಯ್ಕೆಗೊಂಡ ನಂತರ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆ ನಡೆಸಿ ಮುಂಬರುವ 2 ವರ್ಷಗಳ ಅವಧಿಗೆ ಹೊಸ ನಾಯಕತ್ವವನ್ನು ಆರಿಸಲಾಯಿತು.

ನೂತನವಾಗಿ ರಚಿಸಲಾದ ಕಮಿಟಿಗೆ ಅಧ್ಯಕ್ಷರಾಗಿ ಶಬೀರ್ ಬ್ರಿಗೇಡ್ ಅವರನ್ನು ಪುನರಾಯ್ಕೆ ಮಾಡಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಕೆಂಪಿ, ಉಪಾಧ್ಯಕ್ಷರುಗಳಾಗಿ ಗಫೂರ್ ಕೆಂಟ್, ಸಮದ್ ಕುಂತೂರ್, ಸಂಶುದ್ದೀನ್ ಕುಕ್ಕಾಜೆ, ಸಲೀತ್ ಮಾರ್ಥಳ್ಳಿ, ಸಲೀಂ ಸಿ ಎಂ ಹಾಗೂ ಕಾರ್ಯದರ್ಶಿಗಳಾಗಿ ಝಮೀರ್ ಉಳ್ಳಾಲ್, ಮಾಝಿನ್ ಕಾವಳಕಟ್ಟೆ, ರಹೀಮ್ ಚಿಕ್ಕಪೇಟೆ, ಸಮದ್ ಮದ್ದಡ್ಕ, ಹಾರಿಸ್ ಜಿ ಎಸ್ ಕೆ ಅವರನ್ನು ಆಯ್ಕೆ ಮಾಡಲಾಯಿತು. ಕೋಶಾಧಿಕಾರಿಯಾಗಿ ರಿಫಾಯಿ ವಸಂತನಗರ ಮತ್ತು ಮಾಧ್ಯಮ ಕಾರ್ಯದರ್ಶಿಯಾಗಿ ಬಶೀರ್ ಅಡ್ಯನಡ್ಕ, ಕಾನೂನು ಕಾರ್ಯದರ್ಶಿಯಾಗಿ ಅಡ್ವೋಕೇಟ್ ಖಲಂದರ್ ಕೊಯ್ಲ, ಪಿ ಆರ್ ಕಾರ್ಯದರ್ಶಿಯಾಗಿ ಅಯ್ಯುಬ್ ಕೋರಮಂಗಲ, ಆರೋಗ್ಯ ಕಾರ್ಯದರ್ಶಿಯಾಗಿ ರಫೀಕ್ ಪಾನೆಲ, ಕ್ರೀಡಾ ಕಾರ್ಯದರ್ಶಿಯಾಗಿ ಬದ್ರುದ್ದಿನ್ ಕಾಜೂರ್, ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಆಫ್ಜಲ್ ಉಚ್ಚಿಲ ಅವರನ್ನು ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಗಳಾಗಿ ಶಿಹಾಬ್ ಕಾಟಿಪಳ್ಳ, ಹಾರಿಸ್ ಬೆಳ್ಮ, ಆಸೀಫ್ ಪಿ ಕೆ, ಸವಾದ್ ಆರ್ ಟಿ ನಗರ ಖಲಂದರ್ ಅವರನ್ನು ಪದಾಧಿಕಾರಿಗಳಾಗಿ ನೇಮಿಸಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಮಾರ್ಗದರ್ಶಕ ಹನೀಫ್ ಖಾನ್ ಕೊಡಾಜೆ, “ಪ್ರವಾದಿ ಮುಹಮ್ಮದ್ (ಸ) ಅವರು ಈ ಲೋಕಕ್ಕೆ ಬಂದ ಇಸ್ಲಾಮಿನ ಅಂತಿಮ ಪ್ರವಾದಿಗಳು. ಅವರು ತಮ್ಮ ಜನರೊಂದಿಗೆ ಸೌಮ್ಯ ಹಾಗೂ ಪ್ರೀತಿಯ ಸ್ವಭಾವದಿಂದ ವರ್ತಿಸಿ, ಜನಾನುರಾಗಿ ಆಗಿ ಕೆಲಸ ಮಾಡಿದ್ದಾರೆ. ಅದುವೇ ನಮ್ಮ ಎಲ್ಲಾ ಕೆಲಸ ಕಾರ್ಯಗಳಿಗೆ ಮಾರ್ಗವಾಗಬೇಕು. ಅವರ ಜೀವನ ಶೈಲಿಯನ್ನು ನಾವು ಕೂಡ ಅಳವಡಿಸಿ, ಬ್ಯಾರಿ ಸಮುದಾಯದ ಉನ್ನತಿಗೆ ಶ್ರಮಿಸಬೇಕು.‌ ಸಮುದಾಯದ ಎಲ್ಲಾ ಆಗುಹೋಗುಗಳಿಗೆ ಸ್ಪಂದಿಸುವ ಸೂಕ್ಷ್ಮ ಮನಸ್ಸು ಹೊಂದುವವರಾಗಬೇಕು” ಎಂದು ಸಲಹೆ ನೀಡಿದರು.

ಬ್ಯಾರಿ ಸಮುದಾಯದ ರಾಜಕೀಯ ಮುಖಂಡ ಸುಹೈಲ್ ಕಂದಕ್ ಮಾತನಾಡುತ್ತಾ, “ಬೆಂಗಳೂರಿನಲ್ಲಿರುವ ಬ್ಯಾರಿಗಳನ್ನು ಒಂದುಗೂಡಿಸುವ ಮಹತ್ವದ ಉದ್ದೇಶವನ್ನಿಟ್ಟು, ಕಳೆದ ಒಂದೂವರೆ ವರ್ಷಗಳ ಹಿಂದೆ ಆರಂಭಗೊಂಡ ಬ್ಯಾರಿಸ್ ಸೆಂಟ್ರಲ್ ಕಮಿಟಿ ಸಮುದಾಯದ ನಡುವೆ ಒಳ್ಳೆಯ ಹೆಸರು ಗಳಿಸುವಲ್ಲಿ ಯಶಸ್ವಿಯಾಗಿದೆ. ಅದಕ್ಕೆ ಎಲ್ಲರ ಸಹಕಾರ, ನಿಸ್ವಾರ್ಥ ಸೇವೆ ಕೂಡ ಕಾರಣ. ಬ್ಯಾರಿ ಸಮುದಾಯವು ರಾಜಕೀಯ ಸೇರಿದಂತೆ ಎಲ್ಲಾ ರಂಗಗಳಲ್ಲಿ ಯಶಸ್ಸನ್ನು ಕಾಣಬೇಕು” ಎಂದು ಆಶಿಸಿದರು.

ಸಭೆಯಲ್ಲಿ ಸಂಶುದ್ದೀನ್ ಕುಕ್ಕಾಜೆ ಸ್ವಾಗತಿಸಿದರು. ನಾಸಿರ್ ಕೆಂಪಿ ಧನ್ಯವಾದಗೈದರು. ಸಂಪೂರ್ಣ ಕಾರ್ಯಕ್ರಮವನ್ನು ಬಶೀರ್ ಅಡ್ಯನಡ್ಕ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಮಂಗಳೂರಿಗೆ ಮಾದಕ ವಸ್ತು ಸಾಗಾಟ; ಮೂವರ ಬಂಧನ

Next Post

ಮಂಗಳೂರು: ಕಾರಿನ ಲೈಸನ್ಸ್ ಹಿಡಿದಿಟ್ಟು 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ !

Related Posts

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ
ಕರಾವಳಿ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
21
ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ: ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ
ಕರಾವಳಿ

ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ: ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

January 19, 2026
28
Next Post
ಮಂಗಳೂರು: ಕಾರಿನ ಲೈಸನ್ಸ್ ಹಿಡಿದಿಟ್ಟು 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ !

ಮಂಗಳೂರು: ಕಾರಿನ ಲೈಸನ್ಸ್ ಹಿಡಿದಿಟ್ಟು 50 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ !

Discussion about this post

Recent News

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
17
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d