• About us
  • Contact us
  • Disclaimer
Saturday, July 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

Coastal Times by Coastal Times
October 10, 2025
in ಕರಾವಳಿ
ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ
20
VIEWS
WhatsappTelegramShare on FacebookShare on Twitter

ಉಳ್ಳಾಲ: ಮಂಜನಾಡಿ ಉರುಮಣೆಕೋಡಿ ಮನೆ ಕುಸಿತ ದುರಂತ ಪ್ರಕರಣದಲ್ಲಿ ಅತ್ತೆ, ಇಬ್ಬರು ಮಕ್ಕಳನ್ನು ಹಾಗೂ ತನ್ನೆರಡು ಕಾಲುಗಳನ್ನು ಕಳೆದುಕೊಂಡ ಅಶ್ವಿ‌ನಿ ಅವರನ್ನು ವಿಚಾರಣೆಗೆ ಬರಲು ಹೇಳಿದ ಅಧಿಕಾರಿಯೇ ಗೈರಾಗಿದ್ದು, ಸಂಬಂಧಿಕರು ಮತ್ತು ಸ್ಥಳೀಯರು ಈ ನಡೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಆರಂಭದಲ್ಲಿ ಭಾರೀ ಮಳೆಯ ವೇಳೆ ಗುಡ್ಡ ಮನೆಯ ಮೇಲೆ ಕುಸಿದಿತ್ತು. ಈ ವೇಳೆ ಗೋಡೆ ಅಶ್ವಿ‌ನಿ ಅವರ ಕಾಲಿನ ಮೇಲೆಯೇ ಬಿದ್ದು, ರಕ್ಷಣ ಕಾರ್ಯ ವಿಳಂಬವಾಗಿದ್ದರಿಂದ ಆಸ್ಪತ್ರೆಯಲ್ಲಿ ಅವರ ಎರಡೂ ಕಾಲುಗಳನ್ನು ತೆಗೆಯಲಾಗಿತ್ತು. ಅಂದಿನಿಂದ ಅವರು ಯಾತನೆಯ ಜೀವನ ನಡೆಸುತ್ತಿದ್ದಾರೆ. ಈ ನಡುವೆ ಘಟನೆಯ ಕುರಿತು ಮಾಹಿತಿ ಪಡೆಯುವುದಕ್ಕಾಗಿ ಘಟನಾ ಸ್ಥಳಕ್ಕೆ ಅಶ್ವಿನಿ ಅ.8 ರಂದು 11 ಗಂಟೆಗೆ ಘಟನಾ ಸ್ಥಳದಲ್ಲಿ ಹಾಜರಿರುವಂತೆ ಜಿಲ್ಲಾ ಪಂಚಾಯತ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಾಟ್ಸ್ ಆ್ಯಪ್ ಮೂಲಕ ನೋಟಿಸ್ ನೀಡಿದ್ದರು.

ಅದರಂತೆ ಅಶ್ವಿನಿಯವರನ್ನು ಕುಟುಂಸ್ಥರು ಹರೇಕಳದ ತಾಯಿ ಮನೆಯಿಂದ ಘಟನಾ ಸ್ಥಳಕ್ಕೆ ಕರೆತಂದಿದ್ದಾರೆ. ಆದರೆ 11 ಗಂಟೆಯಾದರೂ ತನಿಖಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ ಮೊಬೈಲ್ ಮೂಲಕ ಅಧಿಕಾರಿಯನ್ನು ಸಂಬಂಧಿಕರು ಸಂಪರ್ಕಿಸಿದ್ದಾರೆ. ಈ ವೇಳೆ ಅಧಿಕಾರಿ, ತಾನು ಅನಾರೋಗ್ಯಕ್ಕೀಡಾಗಿದ್ದಾನೆ. ಆದ್ದರಿಂದ ಬರುವುದಿಲ್ಲ ಎಂದು ಬೆಳಗ್ಗೆ 9:30ರ ಸುಮಾರಿಗೆ ಅಶ್ವಿನಿಯವರ ಸಂಬಂಧಿಕರ ಮೊಬೈಲ್ ಗೆ ಸಂದೇಶ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಬಳಿಕ ಹೆಚ್ಚು ಮಾತನಾಡದೇ ಮೊಬೈಲ್ ಸಂಪರ್ಕ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಅಧಿಕಾರಿ ವರ್ತನೆಯನ್ನು ವಿರೋಧಿಸಿದ ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್‌ ಆಳ್ವ ಕುವೆತ್ತಬೈಲ್‌ ಮಾತನಾಡಿ, ಅಶ್ವಿ‌ನಿ ಅವರ ಮಕ್ಕಳು ಹಾಗೂ ಅತ್ತೆ ಸಾವಿಗೆ ರಸ್ತೆಗಾಗಿ ಅಗೆದ ಗುಡ್ಡವೂ ಕಾರಣವಾಗಿದೆ. ಇದಕ್ಕೆ ಈಗಾಗಲೇ ಅಧಿಕಾರಿಗಳು ನೀಡಿರುವ ಸುಳ್ಳು ವರದಿಗಳು ಸಾಕ್ಷಿಯಾಗುತ್ತಿದೆ. ಇಂದು ತನಿಖೆ ನಡೆಸಬೇಕಾಗಿದ್ದ ಎಂಜಿನಿಯರ್‌ ಅವರೇ ಕೊನೇ ಘಳಿಗೆಯಲ್ಲಿ ಕೈಕೊಟ್ಟಿದ್ದು, ಅಶ್ವಿ‌ನಿ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಹೀಗೇ ಮುಂದುವರಿದಲ್ಲಿ ಉಗ್ರ ರೀತಿಯಲ್ಲಿ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಸಂಬಂಧಿ ಸುಮಲತಾ ಕೊಣಾಜೆ ಮಾತನಾಡಿ, ಕಾಲುಗಳಿಲ್ಲದ ಅಶ್ವಿ‌ನಿಯನ್ನು ಕರೆತರಲು ಎಷ್ಟು ಕಷ್ಟವಿದೆ ಅನ್ನುವ ಸೌಜನ್ಯವೂ ಅಧಿಕಾರಿಗಳಲ್ಲಿ ಇಲ್ಲ. ಮನೆ ಕುಸಿತಗೊಂಡು 4 ತಿಂಗಳುಗಳು ಕಳೆದರೂ ತೆರವುಗೊಳಿಸುವ ಕೆಲಸಗಳು ಆಗಿಲ್ಲ. ಅಶ್ವಿ‌ನಿ ಚಿಕಿತ್ಸಾ ವೆಚ್ಚ, ಬದುಕು ನಡೆಸಲು ಹಣ ಹೊಂದಿಸಲಾಗದೆ ಸಾಮಾಜಿಕ ಜಾಲತಾಣದ ಮೂಲಕ ಯುವಸಮುದಾಯ ಭಿಕ್ಷೆ ಬೇಡುವ ಸ್ಥಿತಿಗೆ ಬಂದು ತಲುಪಿದೆ. ಮನೆಯೊಳಗೆ ಬೆಲೆಬಾಳುವ ವಸ್ತುಗಳು ಇದ್ದು, ತೆರವುಗೊಳಿಸುವ ಆದೇಶವನ್ನು ಅಧಿಕಾರಿಗಳು ಮಾಡದೇ ಕುಟುಂಬವನ್ನು ಸರಕಾರವೇ ಬೀದಿಗೆ ತಂದು ನಿಲ್ಲಿಸಿದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ನಾಯಕರು ಉಪಸ್ಥಿತರಿದ್ದರು.

ನಿಕಟಪೂರ್ವ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮುರಳೀಧರ್ ಕೊಣಾಜೆ, ರೈತ ಮೋರ್ಚಾ ಅಧ್ಯಕ್ಷ ಪದ್ಮನಾಭ ಗಟ್ಟಿ ಕೊಣಾಜೆ, ಕಾರ್ಯದರ್ಶಿ ರಮೇಶ್ ಬೆದ್ರೊಳಿಕೆ, ಜೀವನ್ ಪ್ರಕಾಶ್ ಮಂಜನಾಡಿ, ಉದಯ್ ಮಂಜನಾಡಿ, ರಾಧಾಕೃಷ್ಣ, ಧಕ್ಷರಾಜ್, ನಿತೇಶ್, ಜಗದೀಶ್ ಕುಲಾಲ್, ಪತಿ ಸೀತಾರಾಮ್, ಸಹೋದರರಾದ ಪವನ್, ಜಗದೀಶ್ ಕುಲಾಲ್, ಕೃಷ್ಣ ಕುಲಾಲ್, ಸುಖಾನಂದ್ ಶೆಟ್ಟಿ ಮುಂತಾದವರು ಸ್ಥಳದಲ್ಲಿ ಉಪಸ್ಥಿತರಿದ್ದು, ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ಅಶ್ವಿನಿ ಅವರಿಗೆ ನ್ಯಾಯ ಸಿಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

Next Post

ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

Related Posts

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
23
ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ
ಕರಾವಳಿ

ಸುರತ್ಕಲ್ ಸಮುದ್ರದಲ್ಲಿ ಮಲ್ಪೆ ಮೂಲದ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು ಅಪಾಯದಲ್ಲಿದ್ದ ಆರು ಮಂದಿಯ ರಕ್ಷಣೆ

July 17, 2026
16
Next Post
ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

ಕಾರ್ಕಳ: ಸ್ನೇಹಿತರಿಂದ ಖಾಸಗಿ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ; ನಾಲ್ವರ ಹೆಸರು ಬರೆದಿಟ್ಟು ಬೆಳ್ಮಣ್ ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ!

Discussion about this post

Recent News

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
11
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

ಮಂಗಳೂರು: 15ಕ್ಕೂ ಹೆಚ್ಚು ದರೋಡೆ ಮಾಡಿದ್ದ ನೇಪಾಳದ ಕುಖ್ಯಾತ ಗ್ಯಾಂಗ್ ಬಂಧನ, 10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶಕ್ಕೆ

July 18, 2026
ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’: ಜುಲೈ 18ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

July 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d