ಮಂಗಳೂರು: ಮಂಗಳೂರು ಪುರಭವನದ ಬಳಿ ಕಂಡುಬಂದಿದ್ದ ಯಾರೋ ಒಬ್ಬ ವ್ಯಕ್ತಿಯ ಅಪರಿಚಿತ ಶವವನ್ನು ವೈದ್ಯಕೀಯ ಸಿಬ್ಬಂದಿಗಳನ್ನು ಕಾಯದೆ ಸಹೋದ್ಯೋಗಿಗಳ ನೆರವಿನೊಂದಿಗೆ ತಾವೆ ಮುಂದೆ ನಿಂತು ಮೃತದೇಹವನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಬಂಗೇರಾ ಅವರನ್ನು ಅಭಿನಂದಿಸಿ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.


ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಸಿಎಚ್ ಸಿ ಸಂಪತ್ ಬಂಗೇರ ಅವರು ಈ ಶ್ಲಾಘನೀಯ ಕೆಲಸ ಮಾಡಿದ್ದಾರೆ. ಸಂಪತ್ ಅವರು ನವೆಂಬರ್ 9 ರಂದು ನಗರದ ಪುರಭವನ ಸಮೀಪದ ಮಿನಿ ವಿಧಾನಸೌಧ ಬಳಿ ಕರ್ತವ್ಯದಲ್ಲಿದ್ದಾಗ ಅಪರಿಚಿತ ಮೃತದೇಹ ಕಂಡುಬಂದಿದೆ.

ಇವರು ಯಾವುದೇ ರೀತಿಯಲ್ಲೂ ವೈದ್ಯಕೀಯ ಸಿಬ್ಬಂದಿಗೆ ಕಾಯದೆ ಸಹೋದ್ಯೋಗಿಗಳ ನೆರವಿನೊಂದಿಗೆ ತಾವೇ ಮುಂದೆ ನಿಂತು ಮೃತದೇಹವನ್ನು ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಕರ್ತವ್ಯದ ವೇಳೆ ಮಾನವೀಯ ಕೆಲಸ ಮಾಡಿದ ಸಂಪತ್ ಬಂಗೇರ ಅವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post