• About us
  • Contact us
  • Disclaimer
Wednesday, November 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ನ.14ರಿಂದ 16ರವರೆಗೆ ಫಾದರ್ ಮುಲ್ಲರ್‌ನಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ – ಎಕ್ಸ್‌ಪ್ಲೋರಾ-2025

Coastal Times by Coastal Times
November 10, 2025
in ಕರಾವಳಿ
ಮಂಗಳೂರು : ನ.14ರಿಂದ 16ರವರೆಗೆ ಫಾದರ್ ಮುಲ್ಲರ್‌ನಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ – ಎಕ್ಸ್‌ಪ್ಲೋರಾ-2025
20
VIEWS
WhatsappTelegramShare on FacebookShare on Twitter

ಮಂಗಳೂರು , ನ.10: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (ಎಫ್‌ಎಂಸಿಐ) ಆಶ್ರಯದಲ್ಲಿ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ-ಎಕ್ಸ್‌ಪ್ಲೋರಾ ನ.14ರಿಂದ 16ರ ವರೆಗೆ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ.

ಫಾದರ್ ಮುಲ್ಲರ್ ಗ್ರಂಥಾಲಯ ಕಟ್ಟಡದ ಡೆಸೆನಿಯಲ್ ಮೆಮೋರಿಯಲ್ ಹಾಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಫ್‌ಎಂಸಿಐ ನಿರ್ದೇಶಕ ಫಾ. ಫೌಸ್ಟಿನ್ ಲ್ಯೂಕಸ್ ಲೋಬೊ ಅವರು, ನ.14ರಂದು ಮಧ್ಯಾಹ್ನ 12ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಭಾರತ ಮತ್ತು ವಿದೇಶಗಳಿಂದ 1,500 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಯುಕೆ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಜರ್ಮನಿ ಮತ್ತು ಭಾರತ ಸೇರಿದಂತೆ ಐದು ದೇಶಗಳ ತಜ್ಞರು ಭಾಗವಹಿಸಲಿದ್ದಾರೆ ಎಂದರು.

ಕರ್ನಾಟಕ ಸರಕಾರದ ಆಯುಷ್ ಇಲಾಖೆಯ ಮುಖ್ಯ ನಿರ್ದೇಶಕ ಕಮಲಾ ಬಾಯಿ ಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಆಫ್ರಿಕಾದ ದರ್ಬನ್ ತಾಂತ್ರಿಕ ವಿಶ್ವವಿದ್ಯಾಲಯದ ಹೋಮಿಯೊಪತಿ ವಿಭಾಗದ ಮುಖ್ಯಸ್ಥೆ ಡಾ. ಆಶ್ಲೇ ರೋಸ್ ಮತ್ತು ಯು.ಕೆ. ಫಮಖ್ಷನಲ್ ಶಿಫ್ಟ್ ಕನ್ಸಲ್ಟಿಂಗ್‌ನ ನಿರ್ದೇಶಕ ಡಾ. ಕಿಮ್ ಆಂಥೋನಿ ಜಾಬ್ಸ್ಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಶೋಧನಾ ವಿಧಾನ, ಶೈಕ್ಷಣಿಕ ನಾವೀನ್ಯತೆ ಮತ್ತು ವೈದ್ಯಕೀಯ ಪ್ರಗತಿಗಳ ಕುರಿತು ಅಧಿವೇಶನಗಳ ಮೂಲಕ ಹೋಮಿಯೋಪತಿ ವಿಜ್ಞಾನದ ತಿಳುವಳಿಕೆಯನ್ನು ಹೆಚ್ಚಿಸುವ ಗುರಿಯನ್ನು ಸಮ್ಮೇಳನ ಹೊಂದಿದೆ ಎಂದರು.

ಎಕ್ಸ್‌ಪ್ಲೋರಾದ ವೈಶಿಷ್ಟ್ಯತೆಗಳು :

  • ಎಕ್ಸ್‌ಪ್ಲೋರಾ ಫೋಕಸ್ – ಸಮ್ಮೇಳನದ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚೆಗಳು
  • OSCE (ಆಬ್ಲೆಕ್ಟಿವ್ ಸ್ಟ್ರಕ್ಟರ್ಡ್ ಕ್ಲಿನಿಕಲ್ ಎಕ್ಸಾಮಿನೇಷನ್) ಪ್ರಾಯೋಗಿಕ ತರಬೇತಿ – ಭಾರತದಲ್ಲಿ ಮೊದಲ ಬಾರಿಗೆ, ಹೋಮಿಯೋಪಥಿಯ ಮೂರು ವಿಷಯಗಳಲ್ಲಿ – ಹೋಮಿಯೋಪಥಿಕ್ ಮೆಟೀರಿಯಾ ಮೆಡಿಕಾ, ಆರ್ಗನಾನ್ ಆಫ್ ಮೆಡಿಸಿನ್ ಮತ್ತು ರೆಪರ್ಟರಿ – ಒ.ಎಸ್.ಸಿ.ಇ (ಆಲ್ವೆಕ್ಟಿವ್ ಕ್ಟರ್ಡ್ ಕ್ಲಿನಿಕಲ್ ಎಕ್ಸಾಮಿನೇಷನ್) ಪ್ರಾಯೋಗಿಕ ತರಬೇತಿ ನಡೆಸಲಾಗುತ್ತಿದೆ. ವೈದ್ಯಕೀಯ ಶಿಕ್ಷಣದ ಪಕ್ಷಪಾತವನ್ನು ತೊಡೆದುಹಾಕಲು ವಿಶ್ವ ಮಟ್ಟದಲ್ಲಿ ಅಂಗೀಕರಿಸಲಾದ ಮೌಲ್ಯಮಾಪನ ತಂತ್ರಜ್ಞಾನ ಇದಾಗಿದೆ.
  • ಸಂಶೋಧನಾ ಪತ್ರಿಕೆ/ಪೋಸ್ಟರ್ ಸ್ಪರ್ಧೆಗಳ ಮುಕ್ತ ಚರ್ಚಾ ವೇದಿಕೆ. 130+ ಪ್ರತಿನಿಧಿಗಳಿಗೆ ಭಾಗವಹಿಸುತ್ತಿರುವ ಪತ್ರಿಕೆ ಪ್ರಸ್ತುತಿಗಾಗಿ ಮುಕ್ತ ವೇದಿಕೆ
  • ಸಂಶೋಧನಾ ಕೇಂದ್ರ-ವೈದ್ಯರಿಗೆ ಅಥವಾ ಸಂಸ್ಥೆಗಳಿಗೆ ಫಾದರ್ ಮಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಹೊಸ ಸಂಶೋಧನಾ ಉಪಕ್ರಮಗಳನ್ನು ಕೈಗೊಳ್ಳಲು ಇದು ಒಂದು ವಿಶಿಷ್ಟ ಅವಕಾಶ.

2025 ವಾರ್ಷಿಕ ಕಾಲೇಜು ನಿಯತಕಾಲಿಕೆ ಮತ್ತು ಸಂಶೋಧನಾ ಬುಲೆಟಿನ್ 2025ರ ಬಿಡುಗಡೆ ಮತ್ತು ಆಸ್ಪತ್ರೆ ಮಾಹಿತಿ ನಿರ್ವಹಣಾ ವ್ಯವಸ್ಥೆಯ ಉದ್ಘಾಟನೆಯೂ ನಡೆಯಲಿದೆ ಎಂದು ವಿವರಿಸಿದರು. ಇದೇ ಸಂದರ್ಭದಲ್ಲಿ ಸಂಜೆ 4:30ರಿಂದ 9ರ ತನಕ ಸಾಂಸ್ಕೃತಿಕ ಕಾರ್ಯಕ್ರಮ ಸಂಜೆ 4:30 ರಿಂದ ರಾತ್ರಿ 9:00 ಕಂಕನಾಡಿಯ ಫಾದರ್ ಮುಲ್ಲರ್ ಮೈದಾನದಲ್ಲಿ ನಡೆಯಲಿದೆ.

ಈ ಉತ್ಸವವನ್ನು ದುಬೈನ ಉದ್ಯಮಿ ಮೈಕೆಲ್ ಡಿ ಸೋಜ ಉದ್ಘಾಟಿಸುವರು. ಭರತನಾಟ್ಯ ಕಲಾವಿದ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ ಪುರಸ್ಕೃತ ರೆಮೋನಾ ಎವೆಟ್ ಪೆರೇರಾ ಮತ್ತು ಅಂತ‌ರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರೂಬೆನ್ ಜೇಸನ್ ಮಚಾದೊ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಫ್‌ಎಂಎಂಸಿಎಚ್) ಎನ್‌ಎಬಿಎಚ್ ಮಾನ್ಯತೆ ದೊರೆತು 10 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇದರ ಸಂಭ್ರಮಾಚರಣೆ ನ.14ರಂದು ಪರಾಹ್ನ 3 ಗಂಟೆಗೆ ಡಿಎಂ ಹಾಲ್‌ನಲ್ಲಿ ನಡೆಯಲಿದೆ. 2015ರಲ್ಲಿ ಮಾನ್ಯತೆಯನ್ನು ಸಾಧಿಸಿದಾಗಿನಿಂದ ಆಸ್ಪತ್ರೆಯು ನಿರಂತರ ಪರಿಶೋಧನೆ ಮತ್ತು ಸುಧಾರಣೆಗಳ ಮೂಲಕ ತನ್ನ ಮಾನದಂಡಗಳನ್ನು ಕಾಯ್ದುಕೊಂಡಿದೆ ಎಂದು ವಿವರಿಸಿದರು.

ಇದೀಗ 6ನೇ ಆವೃತ್ತಿಯ ಎನ್‌ಎಬಿಎಚ್ ಮಾನದಂಡಗಳ ಅಡಿಯಲ್ಲಿ ಮಾನ್ಯತೆ ಪಡೆದಿದ್ದು, ಈ ಮಾನ್ಯತೆ 2029ರವರೆಗೆ ಇದೆ. ಎನ್‌ಎಬಿಎಚ್ ಡಿಜಿಟಲ್ ಆರೋಗ್ಯ ಮಾನದಂಡಗಳ ಅಡಿಯಲ್ಲಿ ಗೋಲ್ಡನ್ ಸ್ಟಾಂಡರ್ಡ್ ನೀಡಲಾಗಿದೆ ಎಂದು ವಿವರಿಸಿದರು.

ಫಾದರ್ ಮುಲ್ಲರ್ ಸಂಸ್ಥೆಯ ಸಮ್ಮೇಳನ ಸಭಾಂಗಣದಲ್ಲಿ ನ.15ರಂದು ಹೊರರೋಗಿಗಳು, ಒಳರೋಗಿಗಳು ಮತ್ತು ಎಫ್ ಎಂಸಿಐ ಸಿಬ್ಬಂಂದಿಯ ಮಕ್ಕಳಿಗಾಗಿ ಮಕ್ಕಳ ದಿನಾಚರಣೆ ಆಯೋಜಿಸಲಾಗಿದೆ. ಮಕ್ಕಳಿಗಾಗಿ ಚಿತ್ರಕಲೆ ಮತ್ತು ವೇಷಭೂಷಣ ಸ್ಪರ್ಧೆ, ಜಾದೂ ಪ್ರದರ್ಶನ ಏರ್ಪಡಿಸಲಾಗಿದೆ. ಸಂಸ್ಥೆಯ ವತಿಯಿಂದ ನ. 13ರಂದು ಬಜಾಲ್ ನ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಯೋಜಿಸಲಾಗಿದೆ ಎಂದು ಫಾ. ಫೌಸ್ಟಿನ್ ಲ್ಯೂಕಸ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಫಾ. ಡೊನಾಲ್ಡ್ ನಿಲೇಶ್ ಕ್ರಾಸ್ತಾ, ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ಔಷಧೀಯ ವಿಭಾಗದ ಆಡಳಿತಾಧಿಕಾರಿ ರೆವರೆಂಡ್ ಫಾದರ್ ನೆಲ್ಸನ್ ಧೀರಜ್ ಪೈಸ್, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಫಾ. ಮೈಕೆಲ್ ಸಾಂತುಮೇಯರ್, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ಫಾ. ಜಾರ್ಜ್ ಜೀವನ್ ಸಿಕ್ವೇರಾ, ಸಹಾಯಕ ಆಡಳಿತಾಧಿಕಾರಿ ರೆವರೆಂಡ್ ಫಾದರ್ ವಿಲಿಯಂ ಡಿಸೋಜ , ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಡೀನ್ ಡಾ. ಆಂಟನಿ ಡಿ ಸೋಜ, ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ಇ.ಎಸ್.ಜೆ. ಪ್ರಭು ಕಿರಣ್, ವೈದ್ಯಕೀಯ ಅಧೀಕ್ಷಕ ಡಾ. ಗಿರೀಶ್ ನಾವುಡ, ಹೆಚ್ಚುವರಿ ವೈದ್ಯಕೀಯ ಅಧೀಕ್ಷಕ ಡಾ. ಕಿರಣ್ ಶೆಟ್ಟಿ, ಎನ್‌ಎಬಿಎಚ್ ಸಂಯೋಜಕ ಡಾ. ಪ್ರಥ್ವಿ ಶೆಟ್ಟಿ, ಮುಖ್ಯ ಗುಣಮಟ್ಟ ವ್ಯವಸ್ಥಾಪಕ ಡಾ. ಹೆಲೆನ್ ಗಣಲಲಂಜಿಯಂ, ಪೀಡಿಯಾಟ್ರಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಅನಿಲ್ ಶೆಟ್ಟಿ, ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್‌ನ ಮುಖ್ಯಸ್ಥೆ ವಿಲ್ಮಾ, ನರ್ಸಿಂಗ್ ಫ್ಯಾಕಲ್ಟಿ ಆಫ್ ನರ್ಸಿಂಗ್‌ನ ಪ್ರಿಯಾ ಎಸ್ ಪೆರೇರಾ , ಜೋಸ್ಮಿತಾ ಡಿ ಸೋಜ , ಡಾ. ಕೆಲ್ವಿನ್ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಯೋತ್ಪಾದಕ ಸಂಚನ್ನು ಭೇದಿಸಿದ ಗುಜರಾತ್​ ಎಟಿಎಸ್​: ರಿಸಿನ್​ ಎಂಬ ಮಾರಕ ವಿಷವನ್ನು ತಯಾರಿಸಿದ್ದ ವೈದ್ಯ ಸೇರಿ ಮೂವರು ಶಂಕಿತ ಐಸಿಸ್ ಉಗ್ರರ ಬಂಧನ

Next Post

ದೆಹಲಿಯ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ ಸ್ಫೋಟ: 8 ಮಂದಿ ಸಾವು, ಎಲ್ಲೆಡೆ ಹೈಅಲರ್ಟ್

Related Posts

ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ
ಕರಾವಳಿ

ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

November 11, 2025
11
ಮಂಗಳೂರು : ಡಿ.25,26 ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನವಾಕ್ಷರಿ ಮಹಾಮಂತ್ರ ಯಾಗ
ಕರಾವಳಿ

ಮಂಗಳೂರು : ಡಿ.25,26 ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನವಾಕ್ಷರಿ ಮಹಾಮಂತ್ರ ಯಾಗ

November 9, 2025
47
Next Post
ದೆಹಲಿಯ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ ಸ್ಫೋಟ: 8 ಮಂದಿ ಸಾವು, ಎಲ್ಲೆಡೆ ಹೈಅಲರ್ಟ್

ದೆಹಲಿಯ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ ಸ್ಫೋಟ: 8 ಮಂದಿ ಸಾವು, ಎಲ್ಲೆಡೆ ಹೈಅಲರ್ಟ್

Discussion about this post

Recent News

ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ

ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ

November 11, 2025
18
ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

November 11, 2025
11
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ

ಕರಾವಳಿಯ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರು ಭಾರತದ ರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆ

November 11, 2025
ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

ನ.13: ನವಮಂಗಳೂರು ಬಂದರು ಪ್ರಾಧಿಕಾರ (ಎನ್‌ಎಂಪಿಎ)ಯ ಸುವರ್ಣ ಮಹೋತ್ಸವ ಕಾರ್ಯಕ್ರಮ

November 11, 2025
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ

November 11, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d