• About us
  • Contact us
  • Disclaimer
Monday, April 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಯೋತ್ಪಾದಕರ ವಿರುದ್ಧ ಮೊದಲ ಬುಲ್ಡೋಜರ್ ಕಾರ್ಯಾಚರಣೆ ; ಆಶಿಕ್ ಅಹಮ್ಮದ್ ನೆಂಗ್ರೂ ಮನೆ ಧ್ವಂಸ

Coastal Times by Coastal Times
December 10, 2022
in ರಾಷ್ಟ್ರೀಯ ಸುದ್ದಿ
ಭಯೋತ್ಪಾದಕರ ವಿರುದ್ಧ ಮೊದಲ ಬುಲ್ಡೋಜರ್ ಕಾರ್ಯಾಚರಣೆ ; ಆಶಿಕ್ ಅಹಮ್ಮದ್ ನೆಂಗ್ರೂ ಮನೆ ಧ್ವಂಸ
55
VIEWS
WhatsappTelegramShare on FacebookShare on Twitter

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರಗಾಮಿ ಸಂಘಟನೆ ಜೈಷ್- ಇ-ಮೊಹಮ್ಮದ್(ಜೆಇಎಂ) ಕಮಾಂಡರ್ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆಯನ್ನು ಉರುಳಿಸಲಾಗಿದೆ.

ಕಾಶ್ಮೀರದಲ್ಲಿ  ಉಗ್ರಗಾಮಿಯೊಬ್ಬನ ನಿವಾಸವನ್ನು ಸರ್ಕಾರಿ ಅಧಿಕಾರಿಗಳು ಉರುಳಿಸಿದ ಮೊದಲ ಪ್ರಕರಣ ಇದಾಗಿದೆ. ಪುಲ್ವಾಮಾದ ರಾಜಪೋರಾದ ಉಗ್ರಗಾಮಿ ಆಶಿಕ್ ಅಹಮ್ಮದ್ ನೆಂಗ್ರೂ ಅಲಿಯಾಸ್ ಅಮ್ಜಿದ್ ಬಾಯ್ ಆಫ್ ಅಜಾನ್ ಬಾಲ ಎಂಬಾತನ ಮನೆಯನ್ನು ಕೆಡವಲಾಗಿದೆ. 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ 2019ರ ಲೆಥ್ ಪೋರ ಫಿದಾಯೀನ್‌ನ ಆತ್ಮಹತ್ಯಾ ಬಾಂಬ್ ದಾಳಿ ಪ್ರಕರಣದಲ್ಲಿ ಈತನ ಕೈವಾಡವಿತ್ತು.

ಈ ವರ್ಷದ ಏಪ್ರಿಲ್‌ನಲ್ಲಿ, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ ಕೇಂದ್ರ ಸರ್ಕಾರ ನೆಂಗ್ರೂನನ್ನು ಭಯೋತ್ಪಾದಕ ಎಂದು ಘೋಷಿಸಿ‌ತ್ತು. ನೆಂಗ್ರೂಗೆ ಸೇರಿದ ಎರಡು ಅಂತಸ್ತಿನ ಮನೆಯನ್ನು ಜಿಲ್ಲಾಡಳಿತ ಪುಲ್ವಾಮಾ ಪೊಲೀಸರ ಸಮ್ಮುಖದಲ್ಲಿ ನೆಲಸಮಗೊಳಿಸಿದೆ ಎಂದು ವರದಿಗಳು ತಿಳಿಸಿವೆ.

ಕಾಶ್ಮೀರದ ಪುಲ್ವಾಮದ ಅವಂತಿಪುರದಲ್ಲಿ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಭಾರತೀಯ ಸೇನೆಯ 40 ಯೋಧರು ಹುತಾತ್ಮರಾಗಿದ್ದರು. ಜೈಷ್‌-ಇ- ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ಪುಲ್ವಾಮಾ ದಾಳಿಯ ಹೊಣೆ ಹೊತ್ತಿತ್ತು.

ಸಿಆರ್‌ಪಿಎಫ್‌ ಯೋಧರು ಪ್ರಯಾಣಿಸುತ್ತಿದ್ದ ಬಸ್‌ಗೆ ಸ್ಫೋಟಕ ತುಂಬಿದ್ದ ಕಾರನ್ನು ಗುದ್ದಿಸಲಾಗಿತ್ತು. ಈ ಘಟನೆಯಲ್ಲಿ ನಲವತ್ತು ಯೋಧರು ಮರಣ ಹೊಂದಿದ್ದರು. ಇದು ಜಗತ್ತಿನಾದ್ಯಂತ ಸುದ್ದಿ ಮಾಡಿತ್ತು. ಉಗ್ರ ಸಂಘಟನೆಯ ಕೃತ್ಯವನ್ನು ಪ್ರಮುಖ ಜಾಗತಿಕ ನಾಯಕರು ಖಂಡಿಸಿದ್ದರು. ಭಾರತವು ಪಾಕಿಸ್ತಾನದಲ್ಲಿ ಸರ್ಜಿಕಲ್‌ ಸ್ಟ್ರೈಕ್‌ ಕೈಗೊಂಡಿತ್ತು. ಉಗ್ರರ ಶಿಬಿರದ ಮೇಲೆ ವೈಮಾನಿಕ ದಾಳಿ ನಡೆಸಿತ್ತು.  2004ರಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ್ದ ದಾಳಿಯೊಂದರ ಸಂದರ್ಭ ಗಡಿ ಭದ್ರತಾ ಪಡೆಯ 28 ಯೋಧರು ಹುತಾತ್ಮರಾಗಿದ್ದರು. ಅದಾದ ನಂತರ, ಕಾಶ್ಮೀರದಲ್ಲಿ ನಡೆದ ದೊಡ್ಡ ಮಟ್ಟದ ದಾಳಿ ಇದಾಗಿತ್ತು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಲಿಯೋನೆಲ್ ಮೆಸ್ಸಿಯನ್ನು ನೋಡಲು ಕೇರಳದಿಂದ ಕತಾರ್‌ಗೆ ಮಹೀಂದ್ರ ಥಾರ್‌ ಓಡಿಸಿಕೊಂಡು ಹೋದ ಮಹಿಳೆ

Next Post

ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ : ವಾರದಲ್ಲಿ ವಿಶೇಷ ಸಭೆ ಕರೆದು ಪರಿಹಾರ ಎಂದ ಸಿಎಂ ಬೊಮ್ಮಾಯಿ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ : ವಾರದಲ್ಲಿ ವಿಶೇಷ ಸಭೆ ಕರೆದು ಪರಿಹಾರ ಎಂದ ಸಿಎಂ ಬೊಮ್ಮಾಯಿ

ಶಿರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆ : ವಾರದಲ್ಲಿ ವಿಶೇಷ ಸಭೆ ಕರೆದು ಪರಿಹಾರ ಎಂದ ಸಿಎಂ ಬೊಮ್ಮಾಯಿ

Discussion about this post

Recent News

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
0
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
3
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ನಿಧನ

April 13, 2026
ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

ಮಂಗಳೂರು ಸಂತ ಅಲೋಶಿಯಸ್ ರೆಕ್ಟರ್ ಫಾ. ಮೆಲ್ವಿನ್ ಜೆ ಪಿಂಟೋ ನಿಧನ

April 13, 2026
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ್ಟಿ ಬಂಧಿಸಿದ ಕಾರ್ಕಳ ಪೊಲೀಸರು,

April 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d