• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸ್ಮಾರ್ಟ್ ಸಿಟಿಗೊಂದು ‘ಐಡೆಂಟಿಟಿ’ – ರೋಹನ್ ಸಿಟಿ

Coastal Times by Coastal Times
January 11, 2023
in ಕರಾವಳಿ
ಮಂಗಳೂರು ಸ್ಮಾರ್ಟ್ ಸಿಟಿಗೊಂದು ‘ಐಡೆಂಟಿಟಿ’ – ರೋಹನ್ ಸಿಟಿ
94
VIEWS
WhatsappTelegramShare on FacebookShare on Twitter

ಮಂಗಳೂರು, ಜ.10: ಕಳೆದ 29 ವರ್ಷಗಳಿಂದ ಮಂಗಳೂರು ಆಸುಪಾಸಿನಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ರೋಹನ್ ಕಾರ್ಪೊರೇಶನ್, ಬಿಜೈ ಮುಖ್ಯ ರಸ್ತೆಯಲ್ಲಿ, ಅತ್ಯಾಧುನಿಕ ಸೌಕರ್ಯಗಳ ರೋಹನ್ ಸಿಟಿ’ ಸಮುಚ್ಛಯವನ್ನು ಅಭಿವೃದ್ಧಿಪಡಿಸುತ್ತಿದೆ. ಸಹಕಾರಿ ರಂಗದ ಭೀಷ್ಮ ಎಂದೇ ಹೆಸರುವಾಸಿಯಾಗಿರುವ ‘ಸಹಕಾರ ರತ್ನ’ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರು ಈ ಸಮುಚ್ಚಯದ ಸಹ ಪ್ರವರ್ತಕರಾಗಿದ್ದಾರೆ. ಪ್ರಾಥಮಿಕ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಇದೀಗ ಬುಕ್ಕಿಂಗ್‌ಗೆ ವಿದ್ಯುಕ್ತ ಚಾಲನೆಯನ್ನು ನೀಡಲಾಗುತ್ತಿದೆ. ಎಂದು ರೋಹನ್ ಕಾರ್ಪೋರೇಶನ್‌ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ರೋಹನ್ ಮೊಂತೆರೊ ತಿಳಿಸಿದ್ದಾರೆ.

ಜಿನ್ನೆ ಮುಖ್ಯ ರಸ್ತೆ ಪ್ರದೇಶ, ಸ್ಕಾರ್ಟ್ ಸಿಟಿಯ ವ್ಯಾಪ್ತಿಗೆ ಬರುವ ಮಂಗಳೂರು ಮಹಾನಗರಪಾಲಿಕೆಯ ಹೃದಯ ಭಾಗವಾಗಿದ್ದು, ಸಕಲ ಸೌಕರ್ಯಗಳೊಂದಿಗೆ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿದೆ. ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಆಧುನಿಕ ವೈದ್ಯಕೀಯ ಸೇವೆ ನೀಡುವ ಆಸ್ಪತ್ರೆಗಳು, ಕ್ಲಿನಿಕ್‌ಗಳು, ಸೂಪರ್‌ ಮಾರ್ಕೆಟ್, ಮಲ್ಟಿಪ್ಲೆಕ್ಸ್ ಇವೆಲ್ಲವೂ ಕೂಗಳತೆ ದೂರದಲ್ಲಿವೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ 10 ಕಿಮೀ ಅಂತರದಲ್ಲಿದ್ದು, ಉತ್ತಮ ರಸ್ತೆಯ ಸಂಪರ್ಕ ಹೊಂದಿದೆ.

3.5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ರೋಹನ್ ಸಿಟಿ ರೋಹನ್ ಕಾರ್ಪೊರೇಶನ್‌ನ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ನಿರಂತರ ವಿದ್ಯುತ್ ಮತ್ತು ನೀರು ಸರಬರಾಜು, ಯಾಂತೀಕೃತ ವಾಹನ ನಿಲುಗಡೆ, ಹಸಿರುವನ ಮತ್ತು ವಾಯುವಿಹಾರಕ್ಕೆ ಕಾಲುದಾರಿಯನ್ನು ಹೊಂದಿದೆ. ವಸತಿಗಾಗಿ 6 ಲಕ್ಷ ಚದರ ಅಡಿ, ವಾಣಿಜ್ಯ ಮಳಿಗೆಗಳಿಗಾಗಿ 2 ಲಕ್ಷ ಚದರ ಅಡಿಯನ್ನು ಕಾಯ್ದಿರಿಸಲಾಗಿದೆ. ವಿವಿಧ ವಿಸ್ತೀರ್ಣ ಮತ್ತು ವಿನ್ಯಾಸದಲ್ಲಿ ಒಟ್ಟು 546, ಸಿಂಗಲ್, ಡಬಲ್ ಮತ್ತು ಶ್ರೀ ಬೆಡ್‌ರೂಂ ಫ್ಲಾಟ್‌ಗಳು ಹಾಗೂ 284 ವಾಣಿಜ್ಯ ಮಳಿಗೆಗಳು ಮಾರಾಟಕ್ಕಿವೆ.

ವಾಣಿಜ್ಯ ಮಳಿಗೆಯಲ್ಲಿ ಎರಡು ಜತೆ ಸರ್ವಿಸ್ ಎಲೀಟರ್, 6 ಹೈ ಸ್ಪೀಡ್ ಸ್ವಯಂಚಾಲಿತ ಸರ್ವಿಸ್ ಮತ್ತು ಪ್ಯಾಸೆಂಜರ್ ಲಿಫ್ಟ್ ಎಲೆಕ್ನಿಕ್ ಕಾರ್ ಚಾರ್ಜಿಂಗ್ ಪಾಯಿಂಟ್ಸ್, ಸಾಕಷ್ಟು ಫಲಕ ಸ್ಥಳಗಳು, ಎರಡು ಹಂತಗಳಲ್ಲಿ 35000 ಚದರ ಅಡಿ ಹೈಪರ್ ಮಾರುಕಟ್ಟೆ, ಚಿಲ್ಲರೆ ಅಂಗಡಿಗಳು, ಸಗಟು ಅಂಗಡಿಗಳು, ಕಾರ್ಪೊರೇಟ್ ಹಾಗೂ ಇತರ ಕಚೇರಿಗಳು, ಸುರಕ್ಷಿತ ಮಕ್ಕಳ ಆಟದ ಸ್ಥಳ, ಹಾಗೂ ಸ್ವಯಂಚಾಲಿತ ಚೇಂಜ್ ಓವರ್‌ನೊಂದಿಗೆ 100% ಡೀಸೆಲ್ ಜನರೇಟರ್ ಪವರ್ ಬ್ಯಾಕಪ್ ಮತ್ತು ಒಟ್ಟು 1486 ಚತುಶ್ಚಕ್ರ ಮತ್ತು 395 ದ್ವಿಚಕ್ರ, ಯಾಂತ್ರೀಕೃತ ಪಾರ್ಕಿಂಗ್ ವ್ಯವಸ್ಥೆ ಲಭ್ಯವಿದೆ.

ಮಂಗಳೂರು ಸ್ಮಾರ್ಟ್ ಸಿಟಿಯ ಪ್ರಪ್ರಥಮ ಅಂತರಾಷ್ಟ್ರೀಯ ದರ್ಜೆಯ ಸಿಟಿ ಕ್ಲಬ್ ರೋಹನ್ ಸಿಟಿಯ ಪ್ರಧಾನ ಆಕರ್ಷಣೆಯಾಗಲಿದೆ. ವಿಶಾಲ ವಿಶ್ರಾಂತಿ ಕೊಠಡಿಗಳು, ಸ್ವಾಗತ ಆವರಣ, ವಿದ್ಯಾರ್ಥಿಗಳ ಚಟುವಟಿಕೆ ಕೊಠಡಿ, ಅತ್ಯಾಧುನಿಕ ಗ್ರಂಥಾಲಯ, ಬಾರ್, ಕಾಫಿ ಶಾಪ್, ಫೈನ್ ಡೈನ್ ಫ್ಯಾಮಿಲಿ ರೆಸ್ಟೋರೆಂಟ್, ಜಾಗಿಂಗ್ ಟ್ರ್ಯಾಕ್, ಸೀನಿಯರ್ ಸಿಟಿಜನ್ ಪಾರ್ಕ್, ಈಜುಕೊಳ, ಸೂಕರ್ ಟೇಬಲ್, ಟೇಬಲ್ ಟೆನ್ನಿಸ್ ವಿಡಿಯೋ ಗೇಮ್ಸ್ ವಲಯ, 3 ಡಿ ಥಿಯೇಟರ್, ಸುಸಜ್ಜಿತ ಜಿಮ್, ಸ್ಪಾ, ಯುನಿಸೆಕ್ಸ್ ಸಲೂನ್, ಏರೋಬಿಕ್ ಹಾಗೂ ಯೋಗ ಕೊಠಡಿ, ಕಾನ್ಸರೆನ್ಸ್ ಹಾಲ್, ವಿವಿದೋದ್ದೇಶ ಹಾಲ್, ಸಭಾಂಗಣ, ಒಳಾಂಗಣ ಕಾರ್ಡ್ ರೂಮ್, ಬೋರ್ಡ್ ರೂಮ್ ಮತ್ತಿತರ ವೈಶಿಷ್ಟ್ಯಗಳನ್ನೊಳಗೊಂಡ ಸಂಪೂರ್ಣ ಹವಾನಿಯಂತ್ರಿತ ಸಿಟಿ ಕ್ಲಬ್, 365 ದಿನಗಳು, 24×7 ತೆರೆದಿರುತ್ತದೆ. ಸಮುಚ್ಛಯಕ್ಕೆ ತನ್ನದೇ ಮಳೆ ನೀರು ಕೊಯ್ದು ವ್ಯವಸ್ಥೆ, ಘನ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆ, ಸೌರಶಕ್ತಿ ವ್ಯವಸ್ಥೆ ಮತ್ತು ಅಗ್ನಿಶಾಮಕ ವ್ಯವಸ್ಥೆ ಇರಲಿದೆ.

ರೋಹನ್ ಸಿಟಿಗೆ ರೇರಾ (RERA) ಹಾಗೂ ಕ್ರೆಡಾಯ್ (CREDAI) ಮಾನ್ಯತೆಯಿದ್ದು, ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್‌ಗಳ ಅನುಮೋದನೆ ಇರುವುದರಿಂದ ಸಾಲಸೌಲಭ್ಯ ಗ್ರಾಹಕರಿಗೆ ಸುಲಭವಾಗಲಿದೆ. ಜತೆಗೆ ರೂ. 31,000/- (ಶರತ್ತುಗಳು ಅನ್ವಯ) ಮಾಸಿಕ ಕಂತಿನಲ್ಲಿ ಫ್ಲ್ಯಾಟ್ ಖರೀದಿಸಲು ನಿರ್ಮಾಣ ಸಂಸ್ಥೆ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ರೋಹನ್ ಕಾರ್ಪೊರೇಶನ್, ಮುಖ್ಯ ರಸ್ತೆ, ಬಿಜೈ, ಮಂಗಳೂರು ಮಾರಾಟ ಕಚೇರಿಗೆ ಭೇಟಿ ನೀಡಬಹುದು ಅಥವಾ ಅಂತರ್‌ಜಾಲತಾಣ rohancorporation.in ಅಥವಾ ದೂರವಾಣಿ ಸಂಖ್ಯೆ 98454 90100 ಸಂಪರ್ಕಿಸಬಹುದಾಗಿದೆ.

ರೋಹನ್‌ ಕಾರ್ಪೊರೇಶನ್ : ಕಳೆದ 29 ವರ್ಷಗಳಿಂದ, ಯುವ ಉದ್ಯಮಿ ಶ್ರೀ ರೋಹನ್ ಮೊಂತೇರೊ ಅವರ ನಾಯಕತ್ವದಲ್ಲಿ, ರೋಹನ್ ಕಾರ್ಪೊರೇಶನ್ ನಿರ್ಮಾಣ ಸಂಸ್ಥೆ ಮಂಗಳೂರು ನಗರದಾದ್ಯಂತ ಬೃಹತ್‌ ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಿ ಮನೆಮಾತಾಗಿದೆ. ಈ ವರೆಗೆ 25 ಕ್ಕೂ ಹೆಚ್ಚು ಪ್ರತಿಷ್ಠಿತ ನಿರ್ಮಾಣಗಳೊಂದಿಗೆ, 2000 ಕ್ಕೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿರುವ ಶ್ರೇಯಸ್ಸು ಶ್ರೀ ರೋಹನ್ ಮೊಂತೇರೊ ಅವರಿಗೆ ಸಲ್ಲುತ್ತದೆ. ಪ್ರಸ್ತುತ ಪಕ್ಷಿಕೆರೆಯಲ್ಲಿ ರೋಹನ್‌ ಎಸ್ಟೇಟ್, ಕುಲಶೇಖರ-ಬೈತುರ್ಲಿಯಲ್ಲಿ ರೋಹನ್‌ ಎಸ್ಟೇಟ್, ಮಂಗಳೂರು-ಬೆಂಗಳೂರು ಹೆದ್ದಾರಿಯ ಪಂಪ್‌ವೆಲ್ ಬಳಿಯ ವಸತಿ ಮತ್ತು ವಾಣಿಜ್ಯ ಸಂಕೀರ್ಣ ರೋಹನ್ ಸ್ಟೇರ್ ಮುಂತಾದ ಯೋಜನೆಗಳಲ್ಲಿ ಕೆಲವೇ ಕೆಲವು ಫ್ಲ್ಯಾಟ್‌ಗಳು, ಮಳಿಗೆಗಳು, ಸಂಪೂರ್ಣ ಸುಸಜ್ಜಿತ ನಿವೇಶನಗಳು ಮಾರಾಟಕ್ಕಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು: ಬೇಳದಲ್ಲಿ ಅದ್ದೂರಿಯಾಗಿ ನಡೆದ 17ನೇ ಕವಿತಾ ಫೆಸ್ತ್

Next Post

​ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
29
Next Post
​ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

​ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
45
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d