ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣಕ್ಕೆ ಸಂಬಂಧಿಸಿದಂತೆ ದೇವರಾಜೆ ಗೌಡರನ್ನು ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಗುಯಿಲಾಳ್ ಟೋಲ್ ಬಳಿ ವಶಕ್ಕೆ ಪಡೆಯಲಾಗಿದೆ. ಹಾಸನ ಪೊಲೀಸರು ಗ್ರಾಮಾಂತರ ಠಾಣೆ ಪೊಲೀಸರಿಗೆ ನೀಡಿದ ಮಾಹಿತಿ ಮೇರೆಗೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದು, ಹಾಸನ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಪೆನ್ಡ್ರೈ ವ್ ಪ್ರಕರಣಕ್ಕೆ ಸಂಬಂಸಿದಂತೆ ಡಿಸಿಎಂ ವಿರುದ್ಧ ಆರೋಪಿಸಿದ್ದ ವಕೀಲ ದೇವರಾಜೇಗೌಡ ವಿರುದ್ಧವೇ ಲೈಂಗಿಕ ದೌರ್ಜನ್ಯ ಪ್ರಕರಣ ಏಪ್ರಿಲ್ 1 ರಂದೇ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪ್ರಸ್ತುತ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ವಕೀಲ ದೇವರಾಜೇಗೌಡ ಅವರನ್ನು ಇರಿಸಲಾಗಿದೆ. ಆದರೆ, ಪೊಲೀಸರು ಈ ಬೆಳವಣಿಗೆಗಳ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.
ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ : ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿದ್ದ ಸಹಾಯದ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿ ದೂರು ನೀಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ, ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಎಫ್ ಐ ಆರ್ ದಾಖಲು : ವೀಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನ ಎಂದು ಸಂತ್ರಸ್ಥೆ ದೂರು ನೀಡಿರುವುದು ಗಂಭೀರತೆ ಪಡೆದುಕೊಂಡಿದೆ. ಮಹಿಳೆದೂರು ಆದರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಮಹಿಳೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಸಿದಂತೆ ಜಾಮೀನಿಗಾಗಿ ಹಾಸನದ ಎರಡನೇ ಅಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇ8 ರಂದು ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಮೇ 15ಕ್ಕೆ ಮುಂದಿನ ವಿಚಾರಣೆಗಾಗಿ ನ್ಯಾಯಾಲಯ ಮುಂದೂಡಿದೆ. ಮಹಿಳೆ ಹಾಗೂ ಆಕೆಯ ಪತಿ ವಿರುದ್ದ ಹನಿ ಟ್ಯಾಪ್ ಆರೋಪದಲ್ಲಿ ಬೆಂಗಳೂರಿನಲ್ಲಿ ಕೇಸ್ ತನ್ನ ವಿರುದ್ದ ದೂರು ನೀಡಿದ್ದ ಮಹಿಳೆಯಿಂದ ಹನಿ ಟ್ರ್ಯಾಪ್ ಎಂದು ದೇವರಾಜೇಗೌಡ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.
ಜಾತಿ ನಿಂದನೆ-ದೂರು : ದೇವರಾಜೇಗೌಡ ವಿರುದ್ಧ ಜಾತಿನಿಂದನೆ ,ಹಲ್ಲೆಗೆ ಯತ್ನ ಆರೋಪದ ಪ್ರಕರಣ ಮಾ.೩೦ ರಂದು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪಟ್ಟಣದ ಎಲ್ಐಸಿ ಕಚೇರಿ ತಿರುವಿನಲ್ಲಿ ಪತ್ನಿಯೊಂದಿಗೆ ‘ಮೇಂದ್ರ ತೆರಳುತ್ತಿದ್ದಾಗ ಬಿಳಿಯ ಇನ್ನೋವಾ ಕಾರಿನಲ್ಲಿ ಬಂದ ದೇವರಾಜೇಗೌಡ ಏಕಾಏಕಿ ನಿಂದಿಸಿದರು. ಪ್ರಶ್ನಿಸಿದಾಗ ಸಾರ್ವಜನಿಕವಾಗಿ ಜಾತಿನಿಂದನೆ ಮಾಡಿದರು. ಹಣಕಾಸಿನ ವಿಷಯ ಹೇಳಿಕೊಂಡು ತನ್ನ ಪತ್ನಿ ಮೇಲೂ ಹಲ್ಲೆಗೆ ಮುಂದಾದರು ಎಂದು ಆರೋಪಿಸಲಾಗಿದೆ.

Discover more from Coastal Times Kannada
Subscribe to get the latest posts sent to your email.








Discussion about this post