• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”

Coastal Times by Coastal Times
May 11, 2025
in ಕರಾವಳಿ
ಮಾತಾ ಅಮೃತಾನಂದಮಯಿ ಮಠ , ಮಂಗಳೂರು “ಗಡಿ ಕಾಯುವ ಯೋಧರಿಗಾಗಿ ವಿಶೇಷ ಪ್ರಾರ್ಥನೆ.”
113
VIEWS
WhatsappTelegramShare on FacebookShare on Twitter

ಮಂಗಳೂರು: ಭಾರತೀಯ ಸೇನೆಯು ಗಡಿಯಲ್ಲಿ ನೆರೆ ರಾಷ್ಟ್ರ ಪಾಕಿಸ್ತಾನದೊಂದಿಗೆ ಯುದ್ಧ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಶತ್ರು ರಾಷ್ಟ್ರದ ವಿವಿಧ ರೀತಿಯ ದಾಳಿಗಳನ್ನು ಸಮರ್ಥವಾಗಿ‌ ಎದುರಿಸುತ್ತಾ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ಹಗಲಿರುಳೆನ್ನದೆ ಶ್ರಮಿಸುತ್ತಿದೆ.

ನಮ್ಮ ಸೇನೆಗಳ ಸಾಧನೆಗಾಗಿ ಮತ್ತು ಶ್ರೀ ದೇವರ ಅನುಗ್ರಹ ಪ್ರಾಪ್ತಿಗಾಗಿ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಮಠದ ಮುಖ್ಯಸ್ಥರಾದ ಸಂಪೂಜ್ಯ ಸ್ವಾಮಿನಿ ಮಂಗಳಾಮೃತ ಪ್ರಾಣ ರವರ ಉಪಸ್ಥಿತಿಯಲ್ಲಿ ಲೋಕ ಕಲ್ಯಾಣಾರ್ಥ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಸುಮಂಗಲೆಯರು ಅಮೃತ ಜ್ಯೋತಿ, ಪುಷ್ಪ ಹಾಗೂ ಕುಂಕುಮಗಳೊಂದಿಗೆ ಲೋಕ ಕಲ್ಯಾಣಕ್ಕಾಗಿ ಪ್ರದಕ್ಷಿಣೆಯೊಂದಿಗೆ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇಶದ ಸೇನೆಯಲ್ಲಿ ಸೇವೆಗೈದ ನಿವೃತ್ತ ಸೇನಾನಿಗಳು ಭಾಗವಹಿಸಿದ್ದರು.ವಾಯು ಸೇನೆಯ ನಿವೃತ್ತ ಯಶವಂತ ಗೋಪಾಲ ಶೆಟ್ಟಿ,, ನೌಕಾಪಡೆಯ ನಿವೃತ್ತ ಕಮಾಂಡರ್ ಜಯರಾಂ ನೋಂಡ, ಮತ್ತು ಭೂಸೇನೆಯ ಲ್ಯಾನ್ಸ್ ದಫೇದಾರ್ ಸೋಮಶೇಖರ್ ಇವರುಗಳನ್ನು ಈ ಸಂದರ್ಭದಲ್ಲಿ ಮೂರೂ ಸೇನೆಗಳಿಗೆ ಗೌರವಾರ್ಪಣೆಯ ಸಂಕೇತವಾಗಿ ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದಲ್ಲಿ ಸನ್ಮಾನಿಸಲಾಯಿತು. ಯಶವಂತ ಶೆಟ್ಟಿಯವರು ನೆರೆದಿದ್ದ ಭಕ್ತವೃಂದವನ್ನು ಉದ್ದೇಶಿಸಿ ಮಾತನಾಡಿ ” ನಮ್ಮ ಸೇನೆಯಲ್ಲಿ ಮಂಗಳೂರಿನ ಐವರು ಸೇವಾನಿರತರಾಗಿದ್ದಾರೆ ,ಅದರಲ್ಲೂ ನಾಲ್ಕು ಮಹಿಳೆಯರು ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ.
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಈ ದಿವ್ಯ ಕ್ಷೇತ್ರದಲ್ಲಿ ಭಾರತೀಯ ಸೇನೆಯವರಿಗಾಗಿ ವಿಶೇಷ ಪ್ರಾರ್ಥನೆ ಹಮ್ಮಿಕೊಂಡಿರುವುದು ನಿಜವಾಗಿಯೂ ಅತ್ಯಂತ ಅರ್ಥ ಪೂರ್ಣ ಹಾಗೂ ಅಗತ್ಯವಾದ ಕಾರ್ಯಕ್ರಮವಾಗಿದೆ.

ದೇಶದ ರಕ್ಷಣೆಗಾಗಿ ನಿಂತಿರುವ ಅಮೃತ ವಿದ್ಯಾಲಯಂನ ಹಳೇ ವಿದ್ಯಾರ್ಥಿಯು ಹೊಂದಿರುವ ದೇಶಪ್ರೇಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತ ದೇಶದ ವಿಜಯ ಪತಾಕೆ ಹಾರಿಸುವ ಬಗ್ಗೆ ಯಾವುದೇ ಸಂಶಯ ಬೇಡ.ಕೆಲವೇ ದಿನಗಳಲ್ಲಿ ಕೊನೆಗೊಳ್ಳುವ ಸಾಧ್ಯತೆ ಇದೆ.ಮಹಿಳೆಯರು ಅಂದರೆ ಸ್ತ್ರೀ ಶಕ್ತಿ ಈಗ ಮುಂದೆ ಬರುತ್ತಿರುವುದು ಹೆಮ್ಮೆಯ ವಿಷಯ.ಈ ಬಾರಿ ಎಲ್ಲಾ ಧರ್ಮದವರು ಒಕ್ಕೊರಲಿನಲ್ಲಿ‌ ಹೇಳಿದ ಮಾತು ತಕ್ಕ ಪ್ರತ್ಯುತ್ತರ ಕೊಟ್ಟೇ ಕೊಡುತ್ತೇವೆ ಎಂದು. ಇಂದು ಇಲ್ಲಿ ಮಾಡಿದ ಪ್ರಾರ್ಥನೆಯ ಫಲ ನ್ಯಾಯಕ್ಕೆ ಸಿಗುತ್ತದೆ,ಸತ್ಯಕ್ಕೆ ಸಿಗುತ್ತದೆ,ಎಲ್ಲರಲ್ಲೂ ದೇಶ ಭಕ್ತಿ ಜಾಗೃತ ಗೊಂಡು ದೇಶ ಸೇವೆ ಮಾಡೋಣ ಎಂದು ಸಂತೃಪ್ತಿಯಿಂದ ನುಡಿದರು.

ಸಾಮೂಹಿಕ ಶನಿದೋಷ ನಿವಾರಣಾ ಪೂಜೆಯ ನಂತರ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಅಮೀನ್, ಗೌರವಾಧ್ಯಕ್ಷರುಗಳಾದ ಡಾ.ಜೀವರಾಜ್ ಸೊರಕೆ, ಡಾ.ವೈ.ಸನತ್ ಹೆಗ್ಡೆ,ಶ್ರುತಿ ಸನತ್ ಹೆಗ್ಡೆ , ಸೇವಾ ಸಮಿತಿಯ ಪದಾಧಿಕಾರಿಗಳು, ಶ್ರೀ ಭೋಜರಾಜ್ ಕರ್ಕೇರ, ಶ್ರೀ ಬ್ರಹ್ಮಸ್ಥಾನಂ ಕ್ಷೇತ್ರದ ಪದಾಧಿಕಾರಿಗಳು, ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಂ.ಸಿ.ಸಿ. ಬ್ಯಾಂಕಿನ 113ನೇ ಸ್ಥಾಪಕರ ದಿನಾಚರಣೆ

Next Post

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

AIMIT ನಲ್ಲಿ ನವೋದ್ಯಮಕ್ಕೆ ನುರಿತ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಇಗ್ನೈಟಿಂಗ್ ಇನೋವೇಷನ್: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ 2025’

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d