• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ

Coastal Times by Coastal Times
June 11, 2022
in ಕರಾವಳಿ
ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನಲ್ಲಿ : ವಿದ್ಯಾರ್ಥಿಗಳ ಗುಂಪು ಘರ್ಷಣೆ, ಸಿಎಫ್ಐ ಸಂಘಟನೆಯಿಂದ ಮುತ್ತಿಗೆ ಯತ್ನ
100
VIEWS
WhatsappTelegramShare on FacebookShare on Twitter

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ‘ಕಾಲೇಜಿನಲ್ಲಿ ತರಗತಿಯೊಂದರಲ್ಲಿ ಇತ್ತೀಚೆಗೆ ಸಾವರ್ಕರ್‌ ಭಾವಚಿತ್ರ ಅಳವಡಿಸಿದ್ದ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದ್ದನ್ನು ಪ್ರಶ್ನಿಸಿ ನಮ್ಮ ಮೇಲೆ ಹಲ್ಲೆ ನಡೆಸಲಾಗಿದೆ’ ಎಂದು ಆರೋಪಿಸಿ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿ ಮಹಮ್ಮದ್‌ ಮರ್ಜೂಕ್‌, ತೃತೀಯ ಬಿ.ಎಸ್ಸಿಯ ಮಹಮ್ಮದ್‌ ಇರ್ಫಾಜ್‌ ಹಾಗೂ ದ್ವಿತೀಯ ಬಿ.ಎ. ವಿದ್ಯಾರ್ಥಿ ಅಬೂಬಕ್ಕರ್‌ ಸಿದ್ಧಿಕ್‌ ದೂರು ನೀಡಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಲ್ಲೆ ನಡೆಸಿದವರು ಎಬಿವಿಪಿ ಸಂಘಟನೆಯವರು’ ಎಂದು ದೂರುದಾರರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಜನ್‌ ಶೆಟ್ಟಿ ಹಾಗೂ ಸ್ವಸ್ತಿಕ್‌ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ. ಇವರು ಎಬಿವಿಪಿ ಸಂಘಟನೆಯವರು ಎನ್ನಲಾಗಿದೆ. ‘ಕ್ಯಾಂಟೀನ್‌ ಬಳಿ ತೆರಳುತ್ತಿದ್ದಾಗ ಪ್ರಜನ್‌ ಅವರನ್ನು ದೂಡಿ ಸ್ವಸ್ತಿಕ್‌ ಅವರ ಮೇಲೆ ಹಲ್ಲೆ ನಡೆಸಲಾಗಿದೆ’ ಎಂದು ಎಬಿವಿಪಿ ಮುಖಂಡರು ದೂರಿದ್ದಾರೆ. ‘ಘರ್ಷಣೆ ಸಂಬಂಧ ಎರಡು ದೂರುಗಳು ಬಂದಿವೆ. ಒಂದು ಗುಂಪಿನ ಮೂವರು ವಿದ್ಯಾರ್ಥಿಗಳು ಹಲ್ಲೆಯಿಂದ ಗಾಯಗೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಇನ್ನೊಂದು ಗುಂಪಿನ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಹಲ್ಲೆಗೆ ಒಳಗಾದವರು ಯಾವ ಸಂಘಟನೆಗೆ ಸೇರಿದವರು ಎಂದು ತಿಳಿಯದು’ ಎಂದು ಪಾಂಡೇಶ್ವರ ಠಾಣೆಯ ಪೊಲೀಸರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ (ಸಿಎಫ್‌ಐ) ಹಾಗೂ ನ್ಯಾಷನಲ್‌ ಸ್ಟೂಡೆಂಟ್ಸ್‌ ಯೂನಿಯನ್‌ ಆಫ್‌ ಇಂಡಿಯಾ (ಎನ್ಎಸ್‌ಯುಐ) ಹಾಗೂ ಯುವ ಕಾಂಗ್ರೆಸ್‌ ಸಂಘಟನೆಗಳು ಕಾಲೇಜಿನ ಪ್ರವೇಶ ದ್ವಾರದ ಬಳಿ ಸಂಜೆ ಪ್ರತಿಭಟನೆ ನಡೆಸಿದವು. ‘ಮುಸ್ಲಿಂ ಸಮುದಾಯವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಲಾಗಿದೆ. ಇದಕ್ಕೂ ಮುನ್ನ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಗೆ ಹಾಜರಾಗದಂತೆ ನಿರ್ಬಂಧ ವಿಧಿಸಲಾಯಿತು. ಮುಸ್ಲಿಂ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ದೂರ ಇಡುವ ಹುನ್ನಾರ ನಡೆಯುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಸಾವರ್ಕರ್‌ ಭಾವಚಿತ್ರವನ್ನು ತರಗತಿಯಲ್ಲಿ ಅಕ್ರಮವಾಗಿ ಅಳವಡಿಸಿದ ವಿದ್ಯಾರ್ಥಿಗಳ ವಿರುದ್ಧ ಕಾಲೇಜಿನ ಪ್ರಾಂಶುಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಬದಲು ಈ ಬಗ್ಗೆ ದೂರು ನೀಡುವಾಗ ‘ಸಾವರ್ಕರ್ ಒಬ್ಬ ದೇಶದ್ರೋಹಿ’ ಎಂಬ ಪದ ಬಳಸಿದ್ದಕ್ಕೆ ಕೆಲವು ವಿದ್ಯಾರ್ಥಿಗಳಿಂದ ಪ್ರಾಂಶುಪಾಲರು ಕ್ಷಮಾಪಣೆ ಪತ್ರ ಬರೆಸಿಕೊಂಡಿದ್ದಾರೆ. ಈ ರೀತಿ ತಾರತಮ್ಯದಿಂದ ವರ್ತಿಸುವ ಪ್ರಾಂಶುಪಾಲರನ್ನು ಅಮಾನತು ಮಾಡಬೇಕು. ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ‘ಎಬಿವಿಪಿ ಗೂಂಡಾಗಳೇ ನಿಮಗಿದೋ ಎಚ್ಚರಿಕೆ. ವಿದ್ಯೆ ಕಲಿಸುವ ಪವಿತ್ರ ಸ್ಥಳದಲ್ಲಿ ಬ್ರಿಟೀಷರ ಬೂಟು ನೆಕ್ಕಿದ ಹೇಡಿ ಸಾವರ್ಕರ್‌ ಭಾವಚಿತ್ರ ಅಳವಡಿಸಲು ಯಾವತ್ತೂ ಬಿಡುವುದಿಲ್ಲ’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಯೆನೆಪೋಯ ವಿಶ್ವವಿದ್ಯಾಲಯವು ಟಾಟಾ ಟ್ರಸ್ಟ್‌ ಸಹಯೋಗದಲ್ಲಿ ಕ್ಯಾನ್ಸರ್‌ಗೆ ಆಧುನಿಕ ಚಿಕಿತ್ಸೆ

Next Post

ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
53
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
38
Next Post
ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!

ನಾನು ಯಾರ ಮಗಳೆಂದು ಗೊತ್ತಾ?: ರಾಶ್ ಡ್ರೈವಿಂಗ್ ಮಾಡಿ ಟ್ರಾಫಿಕ್ ಪೊಲೀಸ್ ಜೊತೆ ಮಾಜಿ ಸಚಿವರ ಪುತ್ರಿ ವಾಗ್ವಾದ!

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
53
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d