ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.
ಕೃತ್ಯ ಎಸಗಿರುವ ಕುರಿತು ಸಾಕ್ಷಿ ಸಮೇತವಾಗಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡುತ್ತಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ನ್ಯಾಯವಾದಿಗಳಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್.ದೇಶಪಾಂಡೆ ಅವರ ಮೂಲಕ ದೂರು ನೀಡಿದ್ದ.
ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಮುಂದೆ ಹೇಳಿಕೆ ನೀಡುತ್ತಿದ್ದಾನೆ. ಇನ್ನೋವಾ ಕಾರಿನಲ್ಲಿ ಸಂಪೂರ್ಣ ಮುಸುಕುದಾರಿಯಾಗಿ ನ್ಯಾಯಾಲಯಕ್ಕೆ ವಕೀಲರೊಂದಿಗೆ ಜು.11 ರಂದು ಸಂಜೆ 4.30 ಕ್ಕೆ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.
Discover more from Coastal Times Kannada
Subscribe to get the latest posts sent to your email.
Discussion about this post