• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬೈಕ್​ನಲ್ಲೇ ದೇಶ-ವಿದೇಶ ಸುತ್ತಿ ನಾರಿ ಶಕ್ತಿ ಸಾಬೀತುಪಡಿಸಿದ್ದಾರೆ ಕಾಸರಗೋಡು ಮೂಲದ ಬೈಕ್ ರೈಡರ್ ಅಮೃತಾ ಜೋಷಿ.

Coastal Times by Coastal Times
August 11, 2022
in ರಾಷ್ಟ್ರೀಯ ಸುದ್ದಿ
ಬೈಕ್​ನಲ್ಲೇ ದೇಶ-ವಿದೇಶ ಸುತ್ತಿ ನಾರಿ ಶಕ್ತಿ ಸಾಬೀತುಪಡಿಸಿದ್ದಾರೆ ಕಾಸರಗೋಡು ಮೂಲದ ಬೈಕ್ ರೈಡರ್ ಅಮೃತಾ ಜೋಷಿ.
89
VIEWS
WhatsappTelegramShare on FacebookShare on Twitter

ಮಂಗಳೂರು: ಪ್ರಸ್ತುತ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಪ್ರತಿದಿನ ಯಾವುದಾದರೊಂದು ವಿಷಯಗಳ ಮೂಲಕ ಮಹಿಳಾ ಸಾಧಕಿಯರು ತಮ್ಮ ಪ್ರತಿಭೆ ಅನಾವರಣಗೊಳಿಸುತ್ತ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಅದರಂತೆ ಬೈಕ್​ನಲ್ಲೇ ದೇಶ-ವಿದೇಶ ಸುತ್ತಿ ನಾರಿ ಶಕ್ತಿ ಸಾಬೀತುಪಡಿಸಿದ್ದಾರೆ ಕಾಸರಗೋಡು ಮೂಲದ ಯುವತಿ ಅಮೃತಾ ಜೋಷಿ. ಹೌದು, 21 ವರ್ಷ ವಯಸ್ಸಿನ ಅಮೃತಾ ಜೋಷಿ ಬೈಕ್ ಓಡಿಸುವುದನ್ನು ಕಲಿತು ಅದರಲ್ಲೇ ದೇಶ-ವಿದೇಶ ಸುತ್ತಿ ಬರುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆ ಕೇರಳ ಸೇರಿದಂತೆ ಇಡೀ ದೇಶಕ್ಕೆ ಮಾದರಿಯಾಗಿದೆ.  ಇವರು ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯವರು. ಮಂಗಳೂರಿನ ಕೆನರಾ ಹೈಸ್ಕೂಲ್​ನ ಹಳೇ ವಿದ್ಯಾರ್ಥಿನಿ ಕೂಡ ಹೌದು. ಇವರು ತಮ್ಮ ತಂದೆಯ ಇಚ್ಛೆಯಂತೆ ಬೈಕ್ ರೈಡಿಂಗ್​ಅನ್ನು ಹವ್ಯಾಸ ಮಾಡಿಕೊಂಡಿದ್ದಾರೆ.  ನಾಲ್ಕು ತಿಂಗಳ ಹಿಂದೆ ಕೇರಳದ ಕ್ಯಾಲಿಕಟ್​ನಿಂದ ತಮ್ಮ ಪಯಣ ಆರಂಭಿಸಿದ್ದರು. ಇದೀಗ 23 ಸಾವಿರ ಕಿ.ಮೀ ಸುತ್ತಿ ಬಂದು ತಮ್ಮ ಪಯಣವನ್ನು ಕೊನೆಗೊಳಿಸಿದ್ದಾರೆ. ಇಂದು ಮಂಗಳೂರಿನಲ್ಲಿ ತಾವು ಕಲಿತ ಡೊಂಗರಕೇರಿಯ ಕೆನರಾ ಹೈಸ್ಕೂಲ್​ಗೆ ಭೇಟಿ ನೀಡಿದ್ದು, ಅವರನ್ನು ಗೌರವಯುತವಾಗಿ ಸ್ವಾಗತಿಸಲಾಯಿತು.  ಅಮೃತಾ ಜೋಷಿ ಫೆ.4 ರಂದು ಕ್ಯಾಲಿಕಟ್​ನಿಂದ ಪಯಣ ಆರಂಭಿಸಿದ್ದರು. ತಮಿಳುನಾಡು, ಆಂಧ್ರಪ್ರದೇಶ ಸುತ್ತಿದ ಬಳಿಕ ಈಶಾನ್ಯ ದೇಶಗಳಿಗೆ ತಲುಪಿದ್ದೆರು. ಚೀನಾ ಬಾರ್ಡರ್ ತವಾಂಗ್​ನಲ್ಲಿ ಪಯಣ ಕೊನೆಗೊಳಿಸುವ ಗುರಿ ಹೊಂದಿದ್ದ ಅಮೃತಾ ಅಲ್ಲಿ ತಲುಪಿದ ಎಪ್ರಿಲ್ 8ರಂದು ಮತ್ತೆ ಪಯಣ ಮುಂದುವರಿಸುವ ನಿರ್ಧಾರ ಮಾಡಿದರು. ಅಲ್ಲಿಂದ ನೇಪಾಳ, ಮ್ಯಾನ್ಮಾರ್​ ದೇಶಗಳಿಗೂ ತೆರಳಿದ್ದರು.

ಪಯಣದಲ್ಲಿ ಅಪಘಾತ: ಅಲ್ಲಿಂದ ವಾಪಸ್ ಬರುವ ವೇಳೆ ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತಕ್ಕೀಡಾದರು. ಆ ವೇಳೆ ಕೆಟಿಎಂ ಬೈಕ್ ಸಂಪೂರ್ಣ ಹಾಳಾಗಿದೆ. ಅಮೃತಾ ಚಿಕಿತ್ಸೆ ಪಡೆದುಕೊಂಡು ವೈದ್ಯರ ಸಲಹೆಯಂತೆ ಒಂದು ತಿಂಗಳು ಊರಿಗೆ ಬಂದು ವಿಶ್ರಾಂತಿ ತೆಗೆದುಕೊಂಡ ನಂತರ ಮತ್ತೆ ಅಪಘಾತ ನಡೆದ ಸ್ಥಳಕ್ಕೆ ಬೇರೊಂದು ಬೈಕ್ ತೆಗೆದುಕೊಂಡು ಹೋಗಿ ಅಲ್ಲಿಂದ ಪಯಣ ಮುಂದುವರಿಸಿದ್ದರು. ಲಡಾಖ್​, ಪಂಜಾಬ್, ರಾಜಸ್ಥಾನ ಜರ್ನಿ ಮುಗಿಸಿ ಇಂದು ಕರ್ನಾಟಕಕ್ಕೆ ಬಂದಿರುವ ಅಮೃತಾ ಅವರು ಇಂದೇ ಕೇರಳ ತಲುಪಿ ಪಯಣ ಕೊನೆಗೊಳಿಸಲಿದ್ದಾರೆ.

ಕೆಟಿಎಂ, ಬಿಎಂಡಬ್ಲ್ಯು ಬೈಕ್​​ನಲ್ಲಿ ರೈಡ್: ಅಮೃತಾ ಅವರು ತಮ್ಮ ಪಯಣವನ್ನು ಕ್ಯಾಲಿಕೆಟ್​ನಿಂದ ಆರಂಭಿಸಿದ್ದು ಕೆಟಿಎಂ ಬೈಕ್​ನಲ್ಲಿ. ಈ ಬೈಕ್ ಉತ್ತರ ಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ನುಜ್ಜುಗುಜ್ಜಾಗಿತ್ತು. ಬಳಿಕ ಹುಟ್ಟೂರಿಗೆ ಬಂದು ವಿಶ್ರಾಂತಿ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅಮೃತಾ ತಮ್ಮ ಭಾವಿ ಪತಿ ನೀಡಿದ ಬಿಎಂಡಬ್ಲ್ಯು ಬೈಕನ್ನು ಅಪಘಾತ ನಡೆದ ಸ್ಥಳಕ್ಕೆ ತಲುಪಿಸಿ ಅಲ್ಲಿಂದ ಮತ್ತೆ ಪಯಣ ಆರಂಭಿಸಿದ್ದರು. ಪ್ರಾದೇಶಿಕ ಸಮಾನತೆ ಮತ್ತು ದೇಶದ ಸೈನಿಕರಿಗೆ ಗೌರವ ಕೊಡುವ ಉದ್ದೇಶದಿಂದ ಅಮೃತಾ ಈ ಪ್ರಯಾಣವನ್ನು ಮಾಡಿದ್ದಾರೆ. ಪಯಣದುದ್ದಕ್ಕೂ ಜನರು ಮನೆ ಮಗಳಂತೆ ಪ್ರೀತಿಯನ್ನು ತೋರ್ಪಡಿಸಿದ್ದರು. ಈ ಪಯಣ ನನಗೆ ಬಹಳ ಖುಷಿ ನೀಡಿದೆ ಎಂದು ಅಮೃತಾ ತಮ್ಮ ಅಭಿಪ್ರಾಯವನ್ನು  ಹಂಚಿಕೊಂಡಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು; ಒಂದೇ ಕುಟುಂಬದ ನಾಲ್ವರ ಹಂತಕ ಪ್ರವೀಣ್‌ಗೆ ಬಿಡುಗಡೆ ಭಾಗ್ಯ ಬೇಡ ಎಂದು ಪತ್ನಿ ಮನವಿ!

Next Post

ತೌಳವ ನೆಲದ ವೀರರಾಣಿ ಅಬ್ಬಕ್ಕ: ಸ್ವಾತಂತ್ರ್ಯ ಸ್ವಾಭಿಮಾನದ ‘ಅಪ್ಪೆ’ ಕುರಿತು ಉಪನ್ಯಾಸ ಕಾರ್ಯಕ್ರಮ

Related Posts

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
ರಾಷ್ಟ್ರೀಯ ಸುದ್ದಿ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ
ಕ್ರೈಮ್ ನ್ಯೂಸ್

ರೆಡ್ ಹ್ಯಾಂಡ್ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗಣಿ ಅಧಿಕಾರಿಯ ಮನೆ ತಪಾಸಣೆ ವೇಳೆ 4 ಕೋಟಿ ರೂಪಾಯಿ ಹಣ ಪತ್ತೆ

February 25, 2026
49
Next Post
ತೌಳವ ನೆಲದ ವೀರರಾಣಿ ಅಬ್ಬಕ್ಕ: ಸ್ವಾತಂತ್ರ್ಯ ಸ್ವಾಭಿಮಾನದ ‘ಅಪ್ಪೆ’ ಕುರಿತು ಉಪನ್ಯಾಸ ಕಾರ್ಯಕ್ರಮ

ತೌಳವ ನೆಲದ ವೀರರಾಣಿ ಅಬ್ಬಕ್ಕ: ಸ್ವಾತಂತ್ರ್ಯ ಸ್ವಾಭಿಮಾನದ ‘ಅಪ್ಪೆ’ ಕುರಿತು ಉಪನ್ಯಾಸ ಕಾರ್ಯಕ್ರಮ

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
68
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d