• About us
  • Contact us
  • Disclaimer
Saturday, May 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತೌಳವ ನೆಲದ ವೀರರಾಣಿ ಅಬ್ಬಕ್ಕ: ಸ್ವಾತಂತ್ರ್ಯ ಸ್ವಾಭಿಮಾನದ ‘ಅಪ್ಪೆ’ ಕುರಿತು ಉಪನ್ಯಾಸ ಕಾರ್ಯಕ್ರಮ

Coastal Times by Coastal Times
August 11, 2022
in ಕರಾವಳಿ
ತೌಳವ ನೆಲದ ವೀರರಾಣಿ ಅಬ್ಬಕ್ಕ: ಸ್ವಾತಂತ್ರ್ಯ ಸ್ವಾಭಿಮಾನದ ‘ಅಪ್ಪೆ’ ಕುರಿತು ಉಪನ್ಯಾಸ ಕಾರ್ಯಕ್ರಮ
27
VIEWS
WhatsappTelegramShare on FacebookShare on Twitter

ಉಳ್ಳಾಲ: ಅಬ್ಬಕ್ಕಳ ವಿಷಯವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡುವುದು ನಮ್ಮ ಕೆಲಸ. ರಾಣಿ ಅಬ್ಬಕ್ಕ ಸ್ವಾತಂತ್ರ್ಯ ಹೋರಾಟ ದಲ್ಲಿ ಮುಂಚೂಣಿಯಲ್ಲಿ ಇದ್ದರು  ಎಂದು ಮಾಜಿ ಶಾಸಕ ಜಯರಾಮ ಶೆಟ್ಟಿ  ಹೇಳಿದರು . ಅವರು ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅನುದಾನಿತ ಭಾರತ್ ಪ.ಪೂ.ಕಾಲೇಜು ಮಾಸ್ತಿಕಟ್ಟೆ ಇದರ ಸದುಪಯೋಗದಲ್ಲಿ  ಉಳ್ಳಾಲ ಭಾರತ್ ಪ.ಪೂ.ಕಾಲೇಜೀನಲ್ಲಿ ಬುಧವಾರ ನಡೆದ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ದ ಪ್ರಯುಕ್ತ  ಭಾರತದ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರು ವಿವಿ ರಾಣಿ ಅಬ್ಬಕ್ಕ ಪೀಠದ ಸಂಯೋಜಕ ಡಾ.ಗಣೇಶ್ ಸಂಕಮಾರ್  ಉಪನ್ಯಾಸ ನೀಡಿದರು. ಧನಲಕ್ಷ್ಮಿ ಗಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೊಗವೀರ ಸಂಘ ಉಳ್ಳಾಲ ಇದರ ಅಧ್ಯಕ್ಷ ಮನೋಜ್ ಸಾಲ್ಯಾನ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.

‘ಸಿಪಾಯಿ ದ‌ಂಗೆ’ ದೇಶದ ಪ್ರಥಮ‌ ಸ್ವಾತಂತ್ರ್ಯಹೋರಾಟ ಎಂದು ಪರಿಗಣಿಸಿದ್ದರೆ, ಅದಕ್ಕಿಂತಲೂ ಮೊದಲು ತುಳುನಾಡಿನ ವೀರರಾಣಿ ಅಬ್ಬಕ್ಕ ಪೋರ್ಚುಗೀಸರ ವಿರುದ್ಧ ನಡೆಸಿದ ಹೋರಾಟವು ಯುರೋಪಿನಾದ್ಯಂತ ಸುದ್ದಿಯಾಗಿತ್ತು. ಭಾರತದಲ್ಲಿ ‘ಸ್ವಾತಂತ್ರ್ಯ’ದ ಕಿಚ್ಚಿನ ಬಗ್ಗೆ ಅವರಿಗೆ ಬಿಸಿ ಮುಟ್ಟಿಸಿತ್ತು. 1510ರಲ್ಲಿ ಗೋವಾವನ್ನು ಆಕ್ರಮಿಸಿದ ಪೋರ್ಚುಗಿಸರು, 1525ರಲ್ಲಿ ಮಂಗಳೂರಿನ ಮೇಲೆ ಆಕ್ರಮಣ ಮಾಡಿದರು.  ಉಳ್ಳಾಲದ ಬಂದರನ್ನು ವಶಪಡಿಸಿಕೊಳ್ಳುವುದು ಅವರ ಗುರಿಯಾಗಿತ್ತು. ಅದಕ್ಕಾಗಿ ಇಲ್ಲಿನ ಸಮುದ್ರದ ಮೂಲಕ ವ್ಯಾಪಾರ ಮಾಡುವ ಎಲ್ಲರನ್ನೂ ಹಿಡಿತದಲ್ಲಿಡುವ ಪ್ರಯತ್ನ ಮಾಡಿದರು. ಇದು ಅಬ್ಬಕ್ಕ ರಾಣಿಗೆ ಹಿಡಿಸಲಿಲ್ಲ. ‍ಪೋರ್ಚಿಗೀಸರಿಗೆ ಕಪ್ಪ ಕಾಣಿಕೆಗಳನ್ನು ನೀಡುವುದನ್ನು ನಿರಾಕರಿಸಿ, ಅವರನ್ನು ಎದುರಿಸಲು ಸಿದ್ಧತೆ ಮಾಡಿಕೊಂಡರು. ಅಬ್ಬಕ್ಕ ಉಳ್ಳಾಲದಲ್ಲಿ ಕೋಟೆಯನ್ನು ಕಟ್ಟಿಸಿದರು.1556 ರಲ್ಲಿ ಪೋರ್ಚುಗೀಸರು‌ ಉಳ್ಳಾಲದ ಮೇಲೆ ದಂಡೆತ್ತಿ ಬಂದಾಗ,  ಎದುರಿಸಿದರು. ಕೋಟೆ ನಾಶವಾಯಿತು. ಸಂಧಾನಕ್ಕೆ ಒಪ್ಪಿಕೊಂಡ ಅಬ್ಬಕ್ಕ, ಮತ್ತೆ ಸ್ವತಂತ್ರ ವ್ಯಾಪಾರಕ್ಕೆ ತೊಡಗಿಸಿಕೊಂಡರು. ಕ್ರಿ.ಶ.1558ರಲ್ಲಿ ಪೋರ್ಚುಗೀಸರ ಎರಡನೇ ದಾಳಿಯನ್ನು ಎದುರಿಸಿದ ರಾಣಿ ಅಬ್ಬಕ್ಕಗೆ ಸಾಕಷ್ಟು ನಷ್ಟವಾಯಿತು. ಕೊನೆಗೆ ಒಪ್ಪಂದ ಮಾಡಿಕೊಂಡು ಮತ್ತೆ ಉಳ್ಳಾಲದ ಕೋಟೆಯನ್ನು ಕಟ್ಟಿಸಿದರು ಎಂಬುದು ಪೋರ್ಚುಗೀಸ್ ಇತಿಹಾಸಕಾರ ಕುಟೋ ದಾಖಲಿಸಿದ್ದಾರೆ. 1567ರಲ್ಲಿ ಮತ್ತೆ ಪೋರ್ಚುಗೀಸ್ ದಾಳಿ ನಡೆಸಿದಾಗ, ಅವರ ಸೇನಾಧಿಕಾರಿಯನ್ನು ರಾಣಿ ಅಬ್ಬಕ್ಕ ಕೊಂದರು.  ಇಲ್ಲಿಯ ಪ್ರಾದೇಶಿಕ ವೈಶಿಷ್ಟ್ಯಗಳನ್ನು ಬಳಕೆ ಮಾಡಿಕೊಂಡು ವೈರಿಗಳನ್ನು ಹಿಮ್ಮೆಟ್ಟಿದ್ದರು. ಉಳ್ಳಾಲ ನದಿಯಿಂದ ಸಮುದ್ರಕ್ಕೆ ಹೋಗುವ ಮಾರ್ಗವನ್ನು ತಡೆಗಟ್ಟಿ ಪೋರ್ಚುಗೀಸರನ್ನು ದಿಗ್ಭಂಧಿಸಿದ್ದಲ್ಲದೇ, ಅಬ್ಬಕ್ಕ ಅವರ ಸೈನಿಕರು ಪೋರ್ಚುಗೀಸ್ ನಾವೆಗಳ ಮೇಲೆ ತೆಂಗಿನ ಸೂಟೆಗಳನ್ನು ಎಸೆದು, ಗಲಿಬಿಲಿಗೊಳಿಸಿದರು. ವೈರಿ ಸೈನಿಕರು ಅಪಾರ ಪ್ರಮಾಣದಲ್ಲಿ ಸಾವನ್ನಪ್ಪಿದರು.

ಅಬ್ಬಕ್ಕ ಸೇನೆ ಕೈ ಮೇಲಾಗುವ ವೇಳೆಗೆ ಉಳ್ಳಾಲಕ್ಕೆ ಹೊಸ ಪೋರ್ಚುಗೀಸ್ ಸೈನಿಕ ಪಡೆ ಬಂತು. ಅಬ್ಬಕ್ಕ ತಮ್ಮ ಸೈನಿಕರೊಂದಿಗೆ ಅವಿತುಕೊಳ್ಳಬೇಕಾಗಿ ಬಂದರೂ, ಪ್ರಜೆಗಳ ಹಿತರಕ್ಷಣೆಗಾಗಿ ಮತ್ತೆ ಹೊರಬಂದು ಒಪ್ಪಂದ ಮಾಡಿಕೊಳ್ಳಬೇಕಾಯಿತು. ಪೋರ್ಚುಗೀಸರನ್ನು ಭಾರತದಿಂದ ಓಡಿಸುವ ಉದ್ದೇಶದಿಂದ ಆದಿಲ್ ಷಾಹಿ, ಕಲ್ಲಿಕೋಟೆಯ ಜಾಮೋರಿನ್ ಮತ್ತು ಇತರರ ಪ್ರಯತ್ನದಲ್ಲಿ ರಾಣಿ ಅಬ್ಬಕ್ಕ ಪಾಲ್ಗೊಂಡಿದ್ದರು. ರಾಣಿ ಅಬ್ಬಕ್ಕ ಮಲಬಾರಿ‌ನ ನೌಕದಳದ ಅಧಿಕಾರಿಯನ್ನು ಉಳ್ಳಾಲಕ್ಕೆ ಕರೆಸಿದ್ದು ಪೋರ್ಚುಗೀಸರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ವಿಚಾರ ಹಾಗೂ ಕಪ್ಪ ನಿರಾಕರಣೆಯಿಂದ ಸಿಟ್ಟಿಗೆದ್ದ ಪೋರ್ಚುಗೀಸರು ಮತ್ತೆ ದಾಳಿ ನಡೆಸಿ, ಉಳ್ಳಾಲದ ಪೇಟೆ, ಗೋದಾಮುಗಳನ್ನು ಸುಟ್ಟು ಹಾಕಿದರು.

ಕಾರ್ಯಕ್ರಮ ದಲ್ಲಿ ಆನಂದ ಅಸೈಗೋಳಿ, ಜಯರಾಂ, ಜಯರಾಮ ಶೆಟ್ಟಿ, ಧನಲಕ್ಷ್ಮಿ ಗಟ್ಟಿ, ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಉಪಾಧ್ಯಕ್ಷ ಸದಾನಂದ ಬಂಗೇರ, ಸಂಚಾಲಕ  ರೋಹಿದಾಸ್ ಬಂಗೇರ, ಭಾರತ್ ಪಿ ಯು ಕಾಲೇಜು ಪ್ರಾಂಶುಪಾಲ ಕಲಾವತಿ ಭಾರತ ಪ್ರೌಢ ಶಾಲೆ ಮುಖ್ಯೋಪಾಧ್ಯಾಯಿನಿ ವಿನಯ ಕುಮಾರಿ, ದೇವಕಿ ಉಳ್ಳಾಲ  ಮತ್ತಿತರರು ಉಪಸ್ಥಿತರಿದ್ದರು. ದಿನಕರ್ ಉಳ್ಳಾಲ ಸ್ವಾಗತಿಸಿದರು. ಅಬ್ದುಲ್ ಅಝೀಝ್ ಹಕ್ ವಂದಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೈಕ್​ನಲ್ಲೇ ದೇಶ-ವಿದೇಶ ಸುತ್ತಿ ನಾರಿ ಶಕ್ತಿ ಸಾಬೀತುಪಡಿಸಿದ್ದಾರೆ ಕಾಸರಗೋಡು ಮೂಲದ ಬೈಕ್ ರೈಡರ್ ಅಮೃತಾ ಜೋಷಿ.

Next Post

ಪ್ರವೀಣ್ ನೆಟ್ಟಾರು ಹತ್ಯೆಗೈದ ಪ್ರಮುಖ ಮೂವರು ಆರೋಪಿಗಳು ಅರೆಸ್ಟ್ , ನೆರವು ನೀಡಿದವರನ್ನೂ ಬಂಧಿಸ್ತೇವೆ, ಸ್ಕೆಚ್ ಹಾಕಿದ್ದೇ ಶಿಹಾಬುದ್ದೀನ್ ; ಎಡಿಜಿಪಿ ಅಲೋಕ್ ಕುಮಾರ್

Related Posts

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು
ಕರಾವಳಿ

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
65
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್
ಕರಾವಳಿ

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
44
Next Post
ಪ್ರವೀಣ್ ನೆಟ್ಟಾರು ಹತ್ಯೆಗೈದ ಪ್ರಮುಖ ಮೂವರು ಆರೋಪಿಗಳು ಅರೆಸ್ಟ್ , ನೆರವು ನೀಡಿದವರನ್ನೂ ಬಂಧಿಸ್ತೇವೆ, ಸ್ಕೆಚ್ ಹಾಕಿದ್ದೇ ಶಿಹಾಬುದ್ದೀನ್ ; ಎಡಿಜಿಪಿ ಅಲೋಕ್ ಕುಮಾರ್

ಪ್ರವೀಣ್ ನೆಟ್ಟಾರು ಹತ್ಯೆಗೈದ ಪ್ರಮುಖ ಮೂವರು ಆರೋಪಿಗಳು ಅರೆಸ್ಟ್ , ನೆರವು ನೀಡಿದವರನ್ನೂ ಬಂಧಿಸ್ತೇವೆ, ಸ್ಕೆಚ್ ಹಾಕಿದ್ದೇ ಶಿಹಾಬುದ್ದೀನ್ ; ಎಡಿಜಿಪಿ ಅಲೋಕ್ ಕುಮಾರ್

Discussion about this post

Recent News

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
65
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

May 9, 2026
ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

ವಿಜಯ್‌ಗೆ ಬೆಂಬಲ ನೀಡಿದ ಸಿಪಿಐ, ಸಿಪಿಐ(ಎಂ), ವಿಸಿಕೆ; ನಾಳೆ ಬೆಳಗ್ಗೆ 11 ಗಂಟೆಗೆ ತಮಿಳುನಾಡಿನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸಾಧ್ಯತೆ

May 8, 2026
ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

ಮಂಗಳೂರು- ತಣ್ಣೀರುಬಾವಿಗೆ ಸಂಪರ್ಕಿಸುವ ನೂತನ ಸೇತುವೆ ಸೆಪ್ಟೆಂಬರ್ ಅಂತ್ಯಕ್ಕೆ ಲೋಕಾರ್ಪಣೆ – ಸಚಿವ ದಿನೇಶ್ ಗುಂಡೂರಾವ್

May 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d