• About us
  • Contact us
  • Disclaimer
Saturday, May 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ‘ಸಮೋಸ ಅಜ್ಜ’ ಇನ್ನಿಲ್ಲ

Coastal Times by Coastal Times
September 11, 2024
in ಕರಾವಳಿ
ಸಂತ ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ‘ಸಮೋಸ ಅಜ್ಜ’ ಇನ್ನಿಲ್ಲ
89
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.11: ನಗರದ ಸಂತ ಅಲೋಶಿಯಸ್ ಕಾಲೇಜು ಕ್ಯಾಂಪಸ್ ನಲ್ಲಿ ಕಳೆದ ನಲ್ವತ್ತು ವರ್ಷಗಳಿಂದ ಸಮೋಸ ಮಾರುತ್ತಲೇ ವಿದ್ಯಾರ್ಥಿಗಳ ಬಾಯಲ್ಲಿ ‘ಸಮೋಸ ಅಜ್ಜ’ ಎಂದೇ ಹೆಸರು ಪಡೆದಿದ್ದ ಬಾದಾಮಿ ಮೂಲದ ಮದುಕೇಶ್ವರ್ ಮಲ್ಲಿಕಾರ್ಜುನ ಮುಡೆಯಪ್ಪ ಮಳಗಿ(84) ವಯೋಸಹಜ ಅಸೌಖ್ಯದಿಂದ ನಿಧನರಾಗಿದ್ದಾರೆ.

40 ವರ್ಷಗಳ ಹಿಂದೆ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನಿಂದ ಮಳಗಿಯಿಂದ ಇವರು ತನ್ನ ಅಳಿಯನೊಂದಿಗೆ ಮಂಗಳೂರಿಗೆ ಬಂದಿದ್ದರು. ಬಾವುಟಗುಡ್ಡೆಯ ಅಲೋಶಿಯಸ್ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸಮೋಸ ಮಾರಲು ಆರಂಭಿಸಿದ್ದರು. ನಗುಮುಖದೊಂದಿಗೆ ಬಿಸಿ ಬಿಸಿ ಸಮೋಸ ಕೊಡುತ್ತಿದ್ದ ಕಾರಣಕ್ಕೆ ಬಹುಬೇಗನೆ ವಿದ್ಯಾರ್ಥಿಗಳನ್ನು ಆಕರ್ಷಿಸಿದ್ದರು. ಆನಂತರ, ಸಮೋಸ ಜೊತೆಗೆ ಚಿಕ್ಕಿ, ನೆಲಗಡಲೆ, ಜಿಲೇಬಿ, ಬರ್ಫಿಗಳನ್ನೂ ಮಾರತೊಡಗಿದ್ದರು. ದಿನವೂ ಸಂಜೆ, ಮಧ್ಯಾಹ್ನ ಅಲೋಶಿಯಸ್ ಕಾಲೇಜು ಆವರಣದಲ್ಲಿ ತಿಂಡಿಗಳನ್ನು ಮಾರುತ್ತಿದ್ದರಿಂದ ಮಕ್ಕಳಿಗೆ ನೆಚ್ಚಿನ ತಾತನೂ ಆಗಿದ್ದರು.

ಮಲ್ಲಿಕಾರ್ಜುನ ಅವರು ಪತ್ನಿಯೊಂದಿಗೆ ಮಂಗಳೂರು ನಗರದ ಕಾವೂರಿನಲ್ಲಿ ನೆಲೆಸಿದ್ದರು. ಇವರಿಗೆ ನಾಲ್ವರು ಹೆಣ್ಮಕ್ಕಳಿದ್ದು, ಎಲ್ಲರಿಗೂ ಮದುವೆಯಾಗಿದೆ. ಒಬ್ಬ ಮಗನಿದ್ದು, ಆತನೂ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದಾನೆ. ಈ ಅಜ್ಜ ಮಾತ್ರ ದಿನವೂ ಸಮೋಸ ಮಾರುವುದನ್ನೇ ಕೆಲಸ ಮಾಡಿಕೊಂಡಿದ್ದರು. ಹತ್ತು ವರ್ಷಗಳ ಹಿಂದೆ ದೆಹಲಿಯಲ್ಲಿ ಧರಣಿ ಕುಳಿತು ಗಮನಸೆಳೆದಿದ್ದ ಅಣ್ಣಾ ಹಜಾರೆ ರೀತಿಯಲ್ಲೇ ಕಾಣುತ್ತಿದ್ದ ಇವರನ್ನೂ ಅಣ್ಣಾ ಅಜ್ಜಾ ಎಂದೂ ವಿದ್ಯಾರ್ಥಿಗಳು ಕರೆಯತೊಡಗಿದ್ದರು. ತಲೆಗೆ ಗಾಂಧಿ ಟೋಪಿ, ಕನ್ನಡಕ, ಬಿಳಿ ಜುಬ್ಬಾ ಮತ್ತು ಬಿಳಿ ಕಚ್ಚೆಯನ್ನು ಧರಿಸಿ ಅಪ್ಪಟ ಗಾಂಧಿವಾದಿಯಂತೆ ಕಾಣುತ್ತಿದ್ದರು. ಹಣೆಗೊಂದು ನಾಮವೂ ಅವರ ಹೆಗ್ಗುರುತಾಗಿತ್ತು. ಹೀಗಾಗಿ ನೋಡುವುದಕ್ಕೆ ಅಣ್ಣಾ ಹಜಾರೆ ರೀತಿಯಲ್ಲೇ ಇವರಲ್ಲೂ ಆಕರ್ಷಣೆ ಇತ್ತು.

ವಯಸ್ಸು ಮಾಗಿದ್ದರೂ, ಅವರೆಂದೂ ತನ್ನ ವೃತ್ತಿಗೆ ನಿವೃತ್ತಿ ಕೊಟ್ಟಿರಲಿಲ್ಲ. ದಿನವೂ ಮಧ್ಯಾಹ್ನ ಊಟದ ಸಮಯಕ್ಕೆ ಮತ್ತು ಸಂಜೆ ಶಾಲೆ ಬಿಡುವ ಸಮಯದಲ್ಲಿ ತಿಂಡಿಗಳನ್ನು ತಂದು ಕೊಡುತ್ತಿದ್ದರು. ಹೀಗಾಗಿ ಕಳೆದ 40 ವರ್ಷಗಳಲ್ಲಿ ಅಲೋಶಿಯಸ್ ಕಾಲೇಜಿನಲ್ಲಿ ಕಲಿತವರೆಲ್ಲ ಅಜ್ಜನ ನೆನಪನ್ನು ಸ್ಮರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಇವರನ್ನು ಸಮೋಸ ಅಜ್ಜ, ಚಿಕ್ಕಿ ಅಜ್ಜ, ಶೇಂಗಾ ಅಜ್ಜ ಎಂದೂ ಕರೆಯುತ್ತಿದ್ದರು. ಮಲ್ಲಿಕಾರ್ಜುನ ಅಜ್ಜ 2010ರಲ್ಲಿ ಅಲೋಶಿಯಸ್ ಕಾಲೇಜಿನ ಸಾರಂಗ್ ಎಫ್ಎಂ ರೇಡಿಯೋದಲ್ಲಿ ಕಾಣಿಸಿಕೊಂಡಿದ್ದರು. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಪಾಲ್ಗೊಂಡು ಗಾಂಧೀಜಿ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಕೇಳಿದ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಸಿಬಂದಿ ಸರಳ ವ್ಯಕ್ತಿತ್ವಕ್ಕೆ ಮಾರು ಹೋಗಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಿನ್ನಿಗೋಳಿ ರಿಕ್ಷಾ ಢಿಕ್ಕಿ ಪ್ರಕರಣ: ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸಮ್ಮಾನ

Next Post

ಮಂಗಳೂರು: ಹಂಪನಕಟ್ಟೆ ಬಸ್‌ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ

Related Posts

ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ
ಕರಾವಳಿ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
24
ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್
ಕರಾವಳಿ

ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್

May 7, 2025
41
Next Post
ಮಂಗಳೂರು: ಹಂಪನಕಟ್ಟೆ ಬಸ್‌ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ

ಮಂಗಳೂರು: ಹಂಪನಕಟ್ಟೆ ಬಸ್‌ ತಂಗುದಾಣ ತೆರವು ಖಂಡಿಸಿ ಎಬಿವಿಪಿ ಪ್ರತಿಭಟನೆ, ಲಘು ಲಾಠಿಪ್ರಹಾರ

Discussion about this post

Recent News

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
40
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
90
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

May 8, 2025
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

May 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d