• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

Coastal Times by Coastal Times
September 11, 2026
in ರಾಷ್ಟ್ರೀಯ ಸುದ್ದಿ
ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
12
VIEWS
WhatsappTelegramShare on FacebookShare on Twitter

ನವದೆಹಲಿ: ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ಇಂಧನ ಸಹಕಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಹಾಗೂ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಮೂರು ದಿನಗಳ ಭೇಟಿಗಾಗಿ ಭಾರತಕ್ಕೆ ಬಂದಿಳಿದರು.

”18ನೇ ಬ್ರಿಕ್ಸ್ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೆ.ವಿ.ಸಿಂಗ್ ಅವರು ಪುಟಿನ್​ರನ್ನು ಬರಮಾಡಿಕೊಂಡರು. ಭಾರತ ಮತ್ತು ರಷ್ಯಾ ನಡುವೆ ‘ವಿಶೇಷ ಅಧಿಕಾರಯುತ ಕಾರ್ಯತಂತ್ರದ ಪಾಲುದಾರಿಕೆ’ಯ ಆಧಾರದ ಮೇಲೆ ಬಹುಮುಖಿ ಮತ್ತು ದೀರ್ಘಕಾಲೀನ ಸಂಬಂಧಗಳಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 2022ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ಬಳಿಕ, ರಷ್ಯಾದಿಂದ ಹೊರಗಡೆ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಇದೇ ಮೊದಲ ಬಾರಿಗೆ ಪುಟಿನ್ ಅವರು ಖುದ್ದು ಭಾಗವಹಿಸುತ್ತಿದ್ದಾರೆ. ಪುಟಿನ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವೊಂದು ಆಗಮಿಸಿದೆ.

ಶನಿವಾರದಿಂದ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಎರಡು ದಿನಗಳ ಬ್ರಿಕ್ಸ್ ಶೃಂಗಸಭೆಯು ಆಹಾರ, ಇಂಧನ, ಆರೋಗ್ಯ, ವಿಪತ್ತು ತಗ್ಗಿಸುವಿಕೆ ಮತ್ತು ಪ್ರಮುಖ ಪೂರೈಕೆ ಸರಪಳಿಗಳಲ್ಲಿ ಸಾಮೂಹಿಕ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವತ್ತ ಗಮನಹರಿಸಲಿದೆ. ಅಲ್ಲದೆ, ಭೌಗೋಳಿಕ-ರಾಜಕೀಯ ಪರಿಸ್ಥಿತಿಯನ್ನು ನಿಭಾಯಿಸಲು ಈ ಒಕ್ಕೂಟವನ್ನು ಪರಿಣಾಮಕಾರಿ ವೇದಿಕೆಯನ್ನಾಗಿ ರೂಪಿಸಲು ನವದೆಹಲಿಯು ಮುಂದಾಗಿದೆ.

ಕ್ರೆಮ್ಲಿನ್ ನೀಡಿರುವ ಹೇಳಿಕೆಯ ಪ್ರಕಾರ, ಬ್ರಿಕ್ಸ್ (BRICS) ಒಕ್ಕೂಟದ 20ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪುಟಿನ್ ಭಾರತಕ್ಕೆ ಕಾರ್ಯನಿಮಿತ್ತ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 11ರಂದು ನಡೆಯಲಿರುವ ವಾರ್ಷಿಕ ‘ಬ್ರಿಕ್ಸ್ ಬಿಸಿನೆಸ್ ಫೋರಂ’ನ ಸರ್ವಸದಸ್ಯರ ಅಧಿವೇಶನವನ್ನು ಪುಟಿನ್ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇದಿಕೆಯು ಸಾಂಪ್ರದಾಯಿಕವಾಗಿ ನಾಯಕರ ಶೃಂಗಸಭೆಗೆ ಮುನ್ನ ನಡೆಯಲಿದ್ದು, ಬ್ರಿಕ್ಸ್ ರಾಷ್ಟ್ರಗಳ ವ್ಯಾಪಾರ ಪ್ರತಿನಿಧಿಗಳನ್ನು ಒಗ್ಗೂಡಿಸಲಿದೆ.

ರಷ್ಯಾ-ಉಕ್ರೇನ್ ಯುದ್ಧ, ಪಶ್ಚಿಮ ಏಷ್ಯಾದ ಬಿಕ್ಕಟ್ಟು (ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನ) ಮತ್ತು ಟ್ರಂಪ್ ಆಡಳಿತದ ವ್ಯಾಪಾರ ಹಾಗೂ ಸುಂಕ ನೀತಿಗಳ ಪ್ರತಿಕೂಲ ಪರಿಣಾಮಗಳನ್ನು ಎದುರಿಸುತ್ತಿರುವ ಜಾಗತಿಕ ಆರ್ಥಿಕತೆಯ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಈ ಶೃಂಗಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ.

ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ, ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಅಬುಧಾಬಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಇಥಿಯೋಪಿಯಾ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಮತ್ತು ವಿಯೆಟ್ನಾಂ ಪ್ರಧಾನಿ ಲೆ ಮಿನ್ ಹಂಗ್ ಅವರು ಭಾಗವಹಿಸುತ್ತಿದ್ದಾರೆ.

ಶುಕ್ರವಾರ ಮಧ್ಯಾಹ್ನ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಪ್ರಮುಖ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಈ ಸಭೆಯು ರಕ್ಷಣೆ, ಇಂಧನ, ತಂತ್ರಜ್ಞಾನ, ಔಷಧೀಯ ಮತ್ತು ಜನರ ನಡುವಿನ ವಿನಿಮಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವತ್ತ ಗಮನಹರಿಸುವ ನಿರೀಕ್ಷೆಯಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

Next Post

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

Related Posts

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ
ರಾಜಕೀಯ

ನಿತಿನ್ ನಬಿನ್ ಅವರ ನೇತೃತ್ವದ ಬಿಜೆಪಿಯ ಹೊಸ ತಂಡ ರೆಡಿ: ರಾಮ್ ಮಾಧವ್, ಸ್ಮೃತಿ ಇರಾನಿಗೆ ಪ್ರಮುಖ ಹೊಣೆ, ಯುವಮೋರ್ಚಾಕ್ಕೆ ಹೊಸ ಸಾರಥಿ ನೇಮಕ

August 18, 2026
35
Next Post
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
36
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d