• About us
  • Contact us
  • Disclaimer
Friday, September 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

Coastal Times by Coastal Times
September 11, 2026
in ಕ್ರೈಮ್ ನ್ಯೂಸ್
ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ
11
VIEWS
WhatsappTelegramShare on FacebookShare on Twitter

ಉಳ್ಳಾಲ, ಸೆ.11: ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಖದೀಮರು ಕಲ್ಲಾಪುವಿನ ಎಸಿಪಿ ಕಚೇರಿಯ ಕಣ್ಣಳತೆಯ ಮಹಾಲಕ್ಷ್ಮಿ ಗಣಪತಿ ಕ್ಷೇತ್ರಕ್ಕೂ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ದೋಚಿದ್ದರೆಂಬ ವಿಚಾರ ಬೆಳಕಿಗೆ ಬಂದಿದೆ.

ಯಾವುದೇ ಸುಳಿವು ಬಿಟ್ಟುಕೊಡದೆ ಕೃತ್ಯ ಎಸಗಿದ್ದ ಕಳ್ಳರ ಜಾಡು ಸಿಕ್ಕಿರಲಿಲ್ಲ. ಹೀಗಾಗಿ ಮಹಾಲಕ್ಷ್ಮಿ ಕ್ಷೇತ್ರದ ಅರ್ಚಕರು ಕಳ್ಳರ ಶೀಘ್ರ ಪತ್ತೆಗಾಗಿ ಕ್ಷೇತ್ರಪಾಲ ಗುಳಿಗನಿಗೆ ಈಡುಗಾಯಿ ಪ್ರಾರ್ಥನೆಯನ್ನು ಸಲ್ಲಿಸಿದ್ದರು. ಗುಳಿಗನ ಪವಾಡವೋ ಎಂಬಂತೆ ತಿಂಗಳ ಅಂತರದಲ್ಲೇ ಖದೀಮರು ಪೊಲೀಸರ ಕೈಗೆ ಸಿಕ್ಕಿ ಬೀಳುವಂತಾಗಿದೆ.

ಸೆಪ್ಟೆಂಬರ್ 01ರ ಮಧ್ಯರಾತ್ರಿ, ಮುಲ್ಕಿ ಬಳಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಾದ ಹೆಜಮಾಡಿಯ ಜಾಹೀದ್ ಸಿನಾನ್(36), ಕಾರ್ಕಳದ ಯಾಸೀನ್(36), ದಾವಣಗೆರೆ ನಿವಾಸಿಗಳಾದ ಮಹಮ್ಮದ್ ಅಫ್ರಿದಿ(26) ಮತ್ತು ಎಸ್.ಕೆ. ಅಬ್ದುಲ್ ಜುಮ್ಮಾನ್(26) ಎಂಬವರನ್ನ ಬಂಧಿಸಿ, ಸುಮಾರು 11,20,000/- ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ವಶಪಡಿಸಿದ್ದಾರೆ.

ಕಳೆದ ಆಗಸ್ಟ್ 19ರಂದು ರಾತ್ರಿ ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ(ಎಸಿಪಿ) ಕಲ್ಲಾಪು ಕಚೇರಿಯ ಎದುರಲ್ಲೇ ಇರುವ ಶ್ರೀ ಮಹಾಲಕ್ಷ್ಮಿ ಗಣಪತಿ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳರು ದೇವಿಯ ವಿಗ್ರಹದ ಲಕ್ಷಾಂತರ ರೂಪಾಯಿ ಬೆಲೆಯ ಚಿನ್ನಾಭರಣ, ಬೆಳ್ಳಿ ಕವಚ ದೋಚಿದ್ದರು. ಕಳ್ಳತನ ಪ್ರಕರಣದ ಜಾಡು ಹಿಡಿಯಲು ಪೊಲೀಸರಿಗೆ ಯಾವುದೇ ಸುಳಿವನ್ನೂ ಕಳ್ಳರು ಬಿಟ್ಟು ಹೋಗಿರಲಿಲ್ಲ. ಇಷ್ಟಲ್ಲದೆ ಮಹಾಲಕ್ಷ್ಮಿ ಕ್ಷೇತ್ರವಾಗಲಿ, ಪಕ್ಕದ ಎಸಿಪಿ ಕಚೇರಿಯಲ್ಲಾಗಲಿ ತನಿಖೆಗೆ ಪ್ರಮುಖವಾಗಿರುವ ಸಿಸಿ ಕ್ಯಾಮೆರಾಗಳೇ ಇರಲಿಲ್ಲ. ಹೀಗಾಗಿ ಈ ಕಳ್ಳತನ ಪ್ರಕರಣವು ಎಸಿಪಿ ಕಚೇರಿಯನ್ನೇ ಅಣಕಿಸಿದಂತಿತ್ತು.

ಘಟನೆಯಿಂದ ತೀವ್ರ ಬೇಸತ್ತ ಕ್ಷೇತ್ರದ ಹಿರಿಯ ಅರ್ಚಕರಾದ ಬಾಲಕೃಷ್ಣ ಭಟ್ ಅವರು ಕಳ್ಳತನ ಕೃತ್ಯ ನಡೆಸಿದ ಕಿಡಿಗೇಡಿಗಳ ಶೀಘ್ರ ಪತ್ತೆಗಾಗಿ ಪ್ರಾರ್ಥಿಸಿ ಇತ್ತೀಚೆಗೆ ಕ್ಷೇತ್ರಪಾಲ ಗುಳಿಗನ ಸನ್ನಿಧಿಯಲ್ಲಿ ಈಡುಗಾಯಿ ಒಡೆದಿದ್ದರು. ಗುಳಿಗನ ಪವಾಡವೆಂಬಂತೆ ಇದೀಗ ನಾಲ್ಕು ಜನ ಅಂತರ್ ಜಿಲ್ಲಾ ಕಳ್ಳರು ಆದಿ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದ ಕಳ್ಳತನ ಪ್ರಕರಣದಲ್ಲಿ ಪೊಲೀಸರ ಕೈಗೆ ತಗ್ಲಾಕ್ಕೊಂಡಿದ್ದಾರೆ. ಉಳ್ಳಾಲ ಪೊಲೀಸರು ಶೀಘ್ರವೇ ಆರೋಪಿಗಳನ್ನ ತಮ್ಮ ಕಸ್ಟಡಿಗೆ ತೆಗೆದು ವಿಚಾರಣೆ ನಡೆಸಲಿದ್ದಾರೆಂಬ ಮಾಹಿತಿ ಲಭಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

Related Posts

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
44
ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

September 11, 2026
18

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
11
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d