• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಆಧಾರ್ ಮಾಹಿತಿ ಸೋರಿಕೆ, ಇದಕ್ಕೆ ರಾಜ್ಯ ಸರಕಾರವೇ ಹೊಣೆ

Coastal Times by Coastal Times
October 11, 2023
in ಕರಾವಳಿ
ಮಂಗಳೂರಿನ ರಿಜಿಸ್ಟ್ರೇಶನ್ ಕಚೇರಿಯಲ್ಲಿ ಆಧಾರ್ ಮಾಹಿತಿ ಸೋರಿಕೆ, ಇದಕ್ಕೆ ರಾಜ್ಯ ಸರಕಾರವೇ ಹೊಣೆ
29
VIEWS
WhatsappTelegramShare on FacebookShare on Twitter

ಮಂಗಳೂರು, ಅ 11 : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಅಲ್ಲಿ ಅಮಾಯಕರ ಮೇಲೆ ಹಲ್ಲೆ ಮನೆಗಳ ಮೇಲೆ ದಾಳಿಗಳು ನಡೆದಿವೆ. ಮುಖ್ಯಮಂತ್ರಿ, ಗೃಹಸಚಿವರು ಏನೂ ನಡೆದೇ ಇಲ್ಲವೆಂಬಂತೆ ಮಾತಾಡುತ್ತಿದ್ದಾರೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಕಿಡಿಕಾರಿದ್ದಾರೆ.

ಜಾಗದ ರಿಜಿಸ್ಟ್ರೇಶನ್ ಉದ್ದೇಶಕ್ಕೆ ಹೋದವರ ಆಧಾರ್ ಮಾಹಿತಿ ಸೋರಿಕೆಯಾಗುತ್ತಿದ್ದು, ಇದಕ್ಕೆ ರಾಜ್ಯ ಸರಕಾರವೇ ಹೊಣೆ. ಇವರು ಖಾಸಗಿ ಕಂಪನಿಗೆ ಸಾಫ್ಟ್ ವೇರ್ ಗುತ್ತಿಗೆ ಕೊಟ್ಟಿದ್ದು, ಅಲ್ಲಿಂದಲೇ ಜನರ ಮಾಹಿತಿ ಸೋರಿಕೆ ಆಗಿರುವ ಶಂಕೆಯಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಹಣ ಕಳಕೊಂಡವರಿಗೆ ಹಣವನ್ನು ರಾಜ್ಯ ಸರಕಾರವೇ ಹಿಂತಿರುಗಿಸಬೇಕು ಎಂದು ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದ್ದಾರೆ.

ತನ್ನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಶಾಸಕರು, ಮಂಗಳೂರಿನ ಉಪ ನೋಂದಣಿ ಕಚೇರಿಯಿಂದ ಆಧಾರ್ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನನ್ನ ಬಳಿ ಹಲವರು ಹಣ ಕಳಕೊಂಡಿದ್ದಾಗಿ ದೂರು ಹೇಳಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರದ ಕಂದಾಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದೇನೆ. ವಂಚನೆ ಆಗಿರುವ ಬಗ್ಗೆ ತಿಳಿದಿದೆ, ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಮಂಗಳೂರು ಕಮಿಷನರ್ ಅವರಿಗೂ ಹೇಳಿದ್ದು ತನಿಖೆ ಮಾಡುವ ಭರವಸೆ ನೀಡಿದ್ದಾರೆ. ಇಷ್ಟೆಲ್ಲ ಎಡವಟ್ಟು ಆಗಿದ್ದರೂ ರಾಜ್ಯದ ಸಚಿವರಾಗಲೀ, ಯಾವುದೇ ವ್ಯಕ್ತಿಯೂ ಈ ಬಗ್ಗೆ ತುಟಿ ಬಿಚ್ಚಿಲ್ಲ. ಆಧಾರ್ ಮಾಹಿತಿ ಸೋರಿಕೆ ಗಂಭೀರ ವಿಚಾರವಾಗಿದ್ದು ಉನ್ನತ ಮಟ್ಟದ ತನಿಖೆಯಾಗಬೇಕಿದೆ ಎಂದು ಹೇಳಿದ್ದಾರೆ.

“ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಬಂಧುಗಳಿಗೆ ಅನ್ಯಾಯವಾಗುತ್ತಿದೆ. ರಾಜ್ಯದೆಲ್ಲೆಡೆ ಆಧಾರ್ ನೋಂದಣಿ ಮತ್ತಿತರ ಕೆಲಸವನ್ನು ಮಾಡಿಕೊಳ್ಳಲು ಜನರು ಸರಕಾರಿ ಕಚೇರಿಗಳಲ್ಲಿ ಕ್ಯೂ ನಿಲ್ಲುವ ಪರಿಸ್ಥಿತಿಯಿದೆ. ಎಲ್ಲಿ ನೋಡಿದರೂ ಸರ್ವರ್ ಸಮಸ್ಯೆ ಎನ್ನುತ್ತಾರೆ. ಇನ್ನು ಕರೆಂಟ್ ಬಿಲ್ ಹೆಚ್ಚಳ, ಲೋಡ್ ಶೆಡ್ಡಿಂಗ್ ಸಮಸ್ಯೆ ಸಾಮಾನ್ಯವಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮ ಜರುಗಿಸುವುದು ಕಾಣುತ್ತಿಲ್ಲ. ಸರಕಾರ ವಿದ್ಯುತ್ ಬಿಲ್ ಏರಿಸಿ ಜನರಿಗೆ ತೊಂದರೆಯನ್ನು ನೀಡುತ್ತಿದೆ” ಎಂದು ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ವಿಜಯ್ ಕುಮಾರ್, ನಿತಿನ್ ಕುಮಾರ್, ಮಾಜಿ ಮೇಯರ್ ಗಳಾದ ಪ್ರೇಮಾನಂದ ಶೆಟ್ಟಿ, ದಿವಾಕರ್ ಪಾಂಡೇಶ್ವರ್, ಪ್ರಧಾನ ಕಾರ್ಯದರ್ಶಿ ರೂಪಾ ಬಂಗೇರ, ಸುರೇಂದ್ರ ಜಪ್ಪಿನಮೊಗರು ಉಪಸ್ಥಿತರಿದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು ಕಂಬಳ-ನಮ್ಮ ಕಂಬಳ’ದ ಕರೆಪೂಜೆಗೆ ಚಾಲನೆ – ರಾಜ್ಯದ 20 ಕಂಬಳಗಳಿಗೆ 1 ಕೋಟಿ ರೂ. ಅನುದಾನ; ಡಿಕೆಶಿ ಘೋಷಣೆ

Next Post

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬಂದಿ ಮೇಲೆ ಕೈ ಮಾಡಿದ ಆರೋಪ ಆಪದ್ಬಾಂಧವ ಆಸೀಫ್‌ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d