ಮಂಗಳೂರು, ನ.11: ನವ ಮಂಗಳೂರು ಬಂದರು ಪ್ರಾಧಿಕಾರ ಎನ್ಎಂಪಿಎ ಯ 50ನೇ ವರ್ಷಾಚರಣೆ ಪಣಂಬೂರಿನ ಡಾ.ಬಿ.ಆರ್. ಅಂಬೇಡ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸುವರ್ಣ ಮಹೋತ್ಸವದ ಅಂಗವಾಗಿ ಎನ್ಎಂಪಿಎಯ ಬೆಳವಣಿಗೆಯ ಹಾದಿಯ ಪ್ರದರ್ಶನ ವಿಶೇಷ ಆಕರ್ಷಣೆಯಾಗಿರಲಿದೆ ಎಂದು ಎನ್ಎಂಪಿಎಯ ಉಪಾಧ್ಯಕ್ಷೆ ಶಾಂತಿಯವರು ತಿಳಿಸಿದರು.
ಮಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕಾರ್ಯಕ್ರಮದಲ್ಲಿ 20 ವಿವಿಧ ಯೋಜನೆಗಳಿಗೆ ಚಾಲನೆಯನ್ನು ಕೂಡಾ ಈ ಸಂದರ್ಭದಲ್ಲಿ ನೀಡಲಾಗುವುದು. ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೊನೋವಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯದ ಮೀನುಗಾರಿಕಾ, ಬಂದರು, ಜಲ ಸಾರಿಗೆ ಸಚಿವ ಮಾಂಕಾಳ ವೈದ್ಯ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ — ಇದರಲ್ಲಿ ಬಂದರು ನೌಕರರು, ಅಧಿಕಾರಿಗಳು, ಹಿತಾಸಕ್ತರು, ಬಂದರು ಬಳಕೆದಾರರು, ವ್ಯಾಪಾರ ಸಂಘಟನೆಗಳು, ಯೂನಿಯನ್ ಸದಸ್ಯರು, ನಿವೃತ್ತ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಎನ್ಎಂಪಿಎ ಯ ಉಪಾಧ್ಯಕ್ಷೆ ಶ್ರೀಮತಿ ಎಸ್. ಶಾಂತಿ ಮತ್ತು ಎನ್ಎಂಪಿಎ ಯ ಉಪ ಸಂರಕ್ಷಕ ಕ್ಯಾಪ್ಟನ್ ಮನೋಜ್ ಜೋಶಿ ಅವರು ಇಂದು ನಗರದ ಹೋಟೆಲ್ ತಾಜ್ ವಿವಾಂಟಾ ದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.
ಸಮಾರಂಭದಲ್ಲಿ ಎನ್ಎಂಪಿಎಯ 50 ವರ್ಷಗಳ ಸೇವೆ, ಬೆಳವಣಿಗೆ ಹಾದಿಯ ಪಯಣದಲ್ಲಿನ ಪ್ರಮುಖ ಮೈಲಿಗಲ್ಲುಗಳು, ಅಭಿವೃದ್ಧಿ ಯೋಜನೆಗಳು ಮತ್ತು ಸಮುದ್ರಯಾನ ವಿಭಾಗದಲ್ಲಿನ ಕೊಡುಗೆಗಳ ಕುರಿತಾದ ಪ್ರದರ್ಶನವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಸುರಕ್ಷತೆಯ ಹಿನ್ನೆಲೆಯಲ್ಲಿ ಎನ್ಎಂಪಿಎ ಒಳಗಡೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿರುವ ಕಾರಣ, ಎನ್ಎಂಪಿಎಯ ಕಾರ್ಯಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ‘ಜನರ ಬಳಿಗೆ ಬಂದರು’ ಎಂಬ ಪರಿಕಲ್ಪನೆಯಡಿ ಈ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಎನ್ಎಂಪಿಎ ಉಪ ಸಂರಕ್ಷಕ ಮನೋಜ್ ಜೋಶಿ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post