• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ʻಪಯಣ್‌ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್‌ ಅನಾವರಣ

Coastal Times by Coastal Times
February 12, 2024
in ಸಿನಿಮಾ
ʻಪಯಣ್‌ʼ ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಟೈಟಲ್‌ ಅನಾವರಣ
35
VIEWS
WhatsappTelegramShare on FacebookShare on Twitter

ಕಳೆದ 55 ವರ್ಷಗಳಿಂದ ದೇಶ–ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಶ್ರೀ ಮೆಲ್ವಿನ್‌ ಪೆರಿಸ್‌ರವರ ಚೊಚ್ಚಲ ಕೊಂಕಣಿ ಚಲನಚಿತ್ರ ʻಪಯಣ್‌ʼ (ಪ್ರಯಾಣ) ಇದರ ಮುಹೂರ್ತವು ಫೆಬ್ರವರಿ 11ರಂದು ಭಾನುವಾರ ಸಂಜೆ 4 ಘಂಟೆಗೆ ಕುಲಶೇಖರ ಚರ್ಚಿನ ಮಿನಿ ಸಭಾಂಗಣದಲ್ಲಿ ನೆರವೇರಿತು. ʻಸಂಗೀತ್‌ ಘರ್‌ ಪ್ರೊಡಕ್ಶನ್ಸ್‌ʼ ಬ್ಯಾನರಿನಡಿಯಲ್ಲಿ ನಿರ್ಮಾಣವಾಗುವ ಈ ಚಲನಚಿತ್ರದ ಶಿರೋನಾಮೆಯನ್ನು ದಾಯ್ಜಿವರ್ಲ್ಡ್‌ ಮಿಡಿಯಾ ಪ್ರೈ.ಲಿ. ಇದರ ಸ್ಥಾಪಕ ನಿರ್ಧೇಶಕ, ಖ್ಯಾತ ನಟ, ಕಲಾವಿದ ಶ್ರೀ ವಾಲ್ಟರ್‌ ನಂದಳಿಕೆ ಅವರು ಅನಾವರಣ ಗೊಳಿಸಿದರು. ಈ ಸಂದರ್ಭದಲ್ಲಿ ಕೊಂಕಣಿ ಸಾಂಸ್ಕೃತಿಕ ಸಂಘಟನೆ ʻಮಾಂಡ್‌ ಸೊಭಾಣ್‌ʼ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಲುವಿ ಪಿಂಟೊ, ಕುಲಶೇಖರ ಚರ್ಚಿನ ಧರ್ಮಗುರುಗಳಾದ ವಂ. ಫಾ. ಕ್ಲಿಪರ್ಡ್‌ ಫೆರ್ನಾಂಡಿಸ್‌, ನಿರ್ಮಾಪಕಿ ಶ್ರೀಮತಿ ನೀಟಾ ಜೆ. ಪೆರಿಸ್‌, ಮೆಲ್ವಿನ್‌ ಪೆರಿಸ್‌ ಹಾಗೂ ಈ ಚಲನಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆ ಹೊತ್ತ ʻಅಸ್ಮಿತಾಯ್‌ʼ ಖ್ಯಾತಿಯ ಶ್ರೀ ಜೊಯೆಲ್‌ ಪಿರೇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿರೋನಾಮೆಯನ್ನು ಅನಾವರಣ ಗೊಳಿಸಿ ಮಾತನಾಡಿದ ಶ್ರೀ ನಂದಳಿಕೆ ಅವರು ʻಒರಿಯಡ್ದೊರಿ ಅಸಲ್‌ʼ ತುಳು ಚಲನಚಿತ್ರವು ತುಳು ಫಿಲ್ಮ್‌ ಇಂಡಸ್ಟ್ರಿಗೆ ಒಂದು ಮೈಲುಗಲ್ಲಾಗಿ, ನಂತರದ ತುಳು ಚಿತ್ರಗಳಿಗೆ ಹೇಗೆ ಪ್ರೇರಣೆಯಾಗಿ ಹೊರಹೊಮ್ಮಿತೋ, ಅದೇ ಮಾದರಿಯಲ್ಲಿ ಮಾಂಡ್‌ ಸೊಭಾಣ್‌ ಸಂಸ್ಥೆಯ ʻಅಸ್ಮಿತಾಯ್‌ʼ ಕೊಂಕಣಿ ಚಲನ ಚಿತ್ರವು ಕೊಂಕಣಿ ಚಲನ ಚಿತ್ರೋಧ್ಯಮದಲ್ಲಿ ಒಂದು ಮೈಲಿಗಲ್ಲಾಗಿಯಿತು ಮಾತ್ರವಲ್ಲ, ಕೊಂಕಣಿ ಫಿಲ್ಮ್‌ ಇಂಡಸ್ಟ್ರಿಗೆ ಭದ್ರ ಬುನಾದಿ ಹಾಕಿಕೊಟ್ಟಿತು. ʻಪಯಣ್‌ʼ ಚಿತ್ರಕ್ಕೆ ಪ್ರೇರಣೆಯಾದ ಈ ಚಲನಚಿತ್ರ ಮುಂದಿನ ವರ್ಷಗಳಲ್ಲಿ ಕಡಿಮೆಯೆಂದರೂ 25 ಕೊಂಕಣಿ ಚಲನಚಿತ್ರಗಳಿಗೆ ಪ್ರೇರಣೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸಂಗೀತ ಕ್ಷೇತ್ರಕ್ಕೆ ಮಾತ್ರವಲ್ಲ ಭಕ್ತಿ ಸಂಗೀತಕ್ಕೂ ಅಪಾರ ಕೊಡುಗೆ ನೀಡಿರುವ ಮೆಲ್ವಿನ್‌ ಪೆರಿಸ್ರವರ ಚೊಚ್ಚಲ ಕಾಣಿಕೆ ʻಪಯಣ್‌ʼ ಚಲನ ಚಿತ್ರವು ಕೂಡಾ ʻಅಸ್ಮಿತಾಯ್‌ʼ ಚಲನಚಿತ್ರದಷ್ಟೇ ಯಶಸ್ಸನ್ನು ಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ಎಲ್ಲರೂ ಸೇರಿ ಮೆಲ್ವಿನ್‌ ಪೆರಿಸ್ ಅವರ ಈ ಪ್ರಯತ್ನವನ್ನು ಯಶಸ್ವಿಗೊಳಿಸೋಣ” ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಥಿತಿಗಳಾದ ಶ್ರೀ ಲುವಿ ಪಿಂಟೊರವರು ಮಾತನಾಡಿ, ʻಮೆಲ್ವಿನ್‌ ಪೆರಿಸ್‌ ಓರ್ವ ಛಲವಾದಿ. ಆರಂಭಿಸಿದ್ದನ್ನು ಗುರಿಮುಟ್ಟಿಸುವವರೆಗೆ ವಿಶ್ರಮಿಸದಿರುವ ಕಲಾವಿದ, ಗಾಯಕ. ಮಾಂಡ್‌ ಸೊಭಾಣ್‌ ಸಂಸ್ಥೆಯು ಎಲ್ಲಾ ವಿಧದಲ್ಲಿಯೂ ಅವರಿಗೆ ಸಂಪೂರ್ಣ ಸಹಕಾರ ನೀಡಲಿದೆ” ಎಂದರು. ಈ ಸಂದರ್ಭದಲ್ಲಿ ʻಅಸ್ಮಿತಾಯ್‌ʼ ಚಲನಚಿತ್ರದ ಯಶಸ್ಸಿಗೆ ಕಾರಣರಾದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದರು.

ʻಅಸ್ಮಿತಾಯ್‌ʼ ಚಲನ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವುದರ ಮೂಲಕ ಸಿನಿಮಾ ಜಗತ್ತಿಗೆ ಕಾಲಿರಿಸಿ ತನ್ನ ಚೊಚ್ಚಲ ಚಲನಚಿತ್ರದಲ್ಲೇ ಜನಮನ ಗೆದ್ದ ಖ್ಯಾತ ಸಂಗೀತ ನಿರ್ದೇಶಕ ಶ್ರೀ ಜೊಯೆಲ್‌ ಪಿರೇರಾ ಚಲನ ಚಿತ್ರದ ಬಗ್ಗೆ ಮಾತನಾಡಿ, ʻ ಜೀವನದ ನಿಜವಾದ ಸಾಮರಸ್ಯಕ್ಕೆ ಸಂಗೀತ ಕಲೆಯ ನಿಪುಣತೆಗಿಂತಲೂ ಹೆಚ್ಚಿನದ್ದು ಬೇಕು ಎಂಬುದನ್ನು ಕಂಡುಹಿಡಿಯುವ ಸಂಗೀತಗಾರನ ಹೋರಾಟದ ಪ್ರಯಾಣ ಕಥೆ ಹೊತ್ತ ʻಪಯಣ್‌ʼ, ಯುವ ಸಂಗೀತಗಾರನೊಬ್ಬ  ಸಂಗೀತ ಉದ್ಯಮದ ಸವಾಲುಗಳನ್ನು ಎದುರಿಸಿ ಮುನ್ನಡೆಯುವಾಗ – ವೈಯಕ್ತಿಕ ಪೈಶಾಚಿಕತೆಯನ್ನು ಎದುರಿಸುವುದರೊಂದಿಗೆ ವಂಚನೆ ಮತ್ತು ಅನಿರೀಕ್ಷಿತ ಜಾಲಗಳನ್ನು ಎದುರಿಸುತ್ತಾ, ಸಂಗೀತ ಕ್ಷೆತ್ರದಲ್ಲಿ ಪಡಿಯಚ್ಚನ್ನು ಒತ್ತಿ, ತನ್ನ ಹಿಂದೆ ಪರಂಪರೆಯೊಂದನ್ನು ಬಿಟ್ಟು ಹೋಗುವ ಮೊದಲು ಸಂಗೀತ ಜೀವನದಲ್ಲಿ ತಾನು ಎದುರಿಸಿದ ಅನಿರೀಕ್ಷಿತ ಸವಾಲುಗಳ ಕಥೆಯನ್ನು ಕೇಂದ್ರಬಿಂದುವಾಗಿಸಿದೆʼ ಎಂದರು 

ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತ ಕೋರಿದ ಶ್ರೀ ಮೆಲ್ವಿನ್‌ ಪೆರಿಸ್‌ರವರು ತನಗೆ ಸಹಕರಿಸಿದ ಆಪ್ತರೆಲ್ಲರಿಗೂ, ತನ್ನ ಸಂಗೀತ ಜೀವನದುದ್ದಕ್ಕೂ ಪ್ರೋತ್ಸಾಹಿಸಿ ಹರಸುತ್ತಿರುವ ಕೊಂಕಣಿ ಜನತೆಗೆ ವಂದಿಸಿ, ʻಪಯಣ್‌ʼ ಚಲನಚಿತ್ರಕ್ಕೆ ಸಂಪೂರ್ಣ ಸಹಕಾರ ಕೋರಿದರು.

ಕಾರ್ಯಕ್ರಮವನ್ನು ವಂ. ಫಾ. ಕ್ಲಿಫರ್ಡ್‌ ಫೆರ್ನಾಂಡಿಸ್‌ ಪ್ರಾರ್ಥನೆಯೊಂದಿಗೆ ಆರಂಭಿಸಿದರು. ಮನು ಬಂಟ್ವಾಳ್‌ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಚಲನಚಿತ್ರದ ಕಲಾವಿದರಿಗೆ ಮತ್ತು ತಾಂತ್ರಿ ವರ್ಗಕ್ಕೆ ಹೂ ನೀಡಿ ಗೌರವಿಸಲಾಯಿತು. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಬ್ರಾಯನ್‌ ಸಿಕ್ವೇರಾ, ಡೊ| ಜಾಸ್ಮಿನ್‌ ಡಿʼಸೋಜಾ, ಕೇಟ್‌ ಪಿರೇರಾ, ಶೈನಾ ಡಿʼಸೋಜ, ರೈನಲ್‌ ಸಿಕ್ವೇರಾ, ಲೆಸ್ಲಿ ರೇಗೊ, ಜೆರಿ ರಸ್ಕಿನ್ಹಾ, ವಾಲ್ಟರ್‌ ನಂದಳಿಕೆ, ಜೀವನ್‌ ವಾಸ್‌, ಜೊಸ್ಸಿ ರೇಗೊ ಮತ್ತು ಇತರರಿದ್ದಾರೆ. ತಾಂತ್ರಿಕ ವರ್ಗ–ಸಂಗೀತ: ರೋಶನ್‌ ಡಿʼಸೋಜಾ, ಆಂಜೆಲೊರ್;‌ ಛಾಯಾಗ್ರಹಣ: ವಿ. ರಾಮಾಂಜನೆಯ; ಸಂಕಲನ: ಮೆವಿಲ್‌ ಜೊಯೆಲ್‌ ಪಿಂಟೊ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು

Next Post

ಬೆಳ್ತಂಗಡಿ : ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Related Posts

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.
ಸಿನಿಮಾ

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
10
“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ
ಸಿನಿಮಾ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
51
Next Post
ಬೆಳ್ತಂಗಡಿ : ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ : ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ; ಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
10
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
50
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d