• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ

Coastal Times by Coastal Times
March 12, 2024
in ಕ್ರೈಮ್ ನ್ಯೂಸ್
ಮಂಗಳೂರು: ಕರ್ಣಾಟಕ ಬ್ಯಾಂಕ್​ನಲ್ಲಿ ಕೋಟ್ಯಂತರ ನಗದು, ಚಿನ್ನಾಭರಣ ದೋಚಿದ್ದ ಮೂವರ ಬಂಧನ
71
VIEWS
WhatsappTelegramShare on FacebookShare on Twitter

ಮಂಗಳೂರು, ಮಾರ್ಚ್​ 11: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಭಾರೀ ಕಳ್ಳತನ ನಡೆದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್ಯಂತರ ನಗದು ಮತ್ತು ಚಿನ್ನಾಭರಣ ದೋಚಿದ್ದ ಮೂವರವನ್ನು ಪುತ್ತೂರು ಉಪವಿಭಾಗದ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳದ ಮಹಮ್ಮದ್ ರಫೀಕ್ ( 35 ), ಮಂಜೇಶ್ವರದ ಇಬ್ರಾಹಿಂ ಕಲಂದರ್ (41) ಹಾಗೂ ಮಂಜೇಶ್ವರದ ದಯಾನಂದ ಎಸ್ (37) ಬಂಧಿತರು. ಘಟನೆ ನಡೆದು ಒಂದು ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 20 ವರ್ಷ ಹಳೇ ಕಟ್ಟಡದಲ್ಲಿ ಕರ್ನಾಟಕ ಬ್ಯಾಂಕ್ ಶಾಖೆ ಕಾರ್ಯನಿರ್ವಹಿಸುತ್ತಿತ್ತು. ಬ್ಯಾಂಕ್ ಸುತ್ತಲೂ ಪೊದೆಯಿದ್ದರಿಂದ ಕಿಟಕಿ ಮುರಿದು ಒಳನುಗ್ಗಿ ಕಳವು ಮಾಡಲಾಗಿತ್ತು.

ಬ್ರಿಜಾ ಕಾರಿನ ಮೂಲಕ ಆಗಮಿಸಿದ ಕಳ್ಳರು ಬ್ಯಾಂಕ್ ಕಿಟಕಿಯ ಸರಳು ತುಂಡರಿಸಿ, ಸೇಫ್ ಲಾಕರ್ ನ್ನು ಗ್ಯಾಸ್ ಕಟ್ಟರ್ ಮೂಲಕ ಕೊರೆದು ಲಾಕರ್ ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ದೋಚಿದ್ದರು. ಆ ಬಳಿಕ ಕದ್ದ ಮಾಲನ್ನು ನಾಲ್ಕು ಪಾಲು ಮಾಡಿಕೊಂಡ ಕಳ್ಳರು ಒಂದು ಪಾಲನ್ನು ಬಾಯಾರಿನ ಪೊಸಡಿ ಗುಂಪೆ ಗುಡ್ಡದ ತಪ್ಪಲಿನ ಸಜಂಕಿಲ ಸಮೀಪ ನಿರ್ಜನ ಪ್ರದೇಶದಲ್ಲಿರುವ ಆಟದ ಮೈದಾನವೊಂದರಲ್ಲಿ ಇದನ್ನು ಅಡಗಿಸಿಟ್ಟಿರುವ ವಿಚಾರವನ್ನು ವಿಚಾರಣೆ ವೇಳೆ ಬಹಿರಂಗ ಪಡಿಸಿದ್ದರು.

ಕುಡಿದ ಮತ್ತಿನಲ್ಲಿ ಬಾಯಿಬಿಟ್ಟಿದ್ದ ವೆಲ್ಡರ್: ಈ ನಡುವೆ, ವೃತ್ತಿಯಲ್ಲಿ ವೆಲ್ಡರ್ ಆಗಿದ್ದ ವ್ಯಕ್ತಿಯೊಬ್ಬ ಇತ್ತೀಚೆಗೆ ಕುಡಿದ ಮತ್ತಿನಲ್ಲಿ ಬ್ಯಾಂಕ್ ಕಳವಿನ ಬಗ್ಗೆ ತನ್ನ ಸ್ನೇಹಿತರಲ್ಲಿ ಹೇಳಿಕೊಂಡಿದ್ದ. ಕೈಯಲ್ಲಿ ಅಷ್ಟೇನೂ ಹಣ ಇಲ್ಲದೇ ಇದ್ದ ಆ ವ್ಯಕ್ತಿ ಜಾಗ ಖರೀದಿಯ ಬಗ್ಗೆಯೂ ಮಾತನಾಡಿದ್ದ. ಬ್ಯಾಂಕಿನಿಂದ ಹಣ ಎಗರಿಸಿದ್ದು ಯಾರಿಗೂ ಗೊತ್ತೇ ಆಗಿಲ್ಲ ಎಂದು ಕೊಚ್ಚಿಕೊಂಡಿದ್ದ ವಿಚಾರವನ್ನು ಅಲ್ಲಿ ಕೇಳಿಸಿಕೊಂಡಿದ್ದವರು ಪೊಲೀಸರ ಗಮನಕ್ಕೆ ತಂದಿದ್ದರು. ಆ ವ್ಯಕ್ತಿಯನ್ನು ಪೊಲೀಸರು ಕರೆದು ಬೆಂಡೆತ್ತಿದಾಗ ಕಳವು ಕೃತ್ಯದ ಸುಳಿವು ಸಿಕ್ಕಿತ್ತು.

ಲಾಕರ್ ಒಡೆಯಲು ಗ್ಯಾಸ್ ಕಟ್ಟರ್ ಬಳಕೆ : ವೆಲ್ಡಿಂಗ್ ವೃತ್ತಿಯಲ್ಲಿ ಪಳಗಿದ್ದ ದಯಾನಂದ ಈ ಹಿಂದೆ ಯಾವತ್ತೂ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದವನಲ್ಲ. ಆದರೆ, ಕತರ್ನಾಕ್ ಕಳ್ಳರಾಗಿದ್ದ ಉಳಿದ ನಾಲ್ವರು ದಯಾನಂದ್ ನನ್ನು ಬ್ಯಾಂಕ್ ಲಾಕರ್ ಒಡೆಯಲು ಕರೆದೊಯ್ದಿದ್ದರು. ಬ್ಯಾಂಕ್ ಶಾಖೆಯ ಹಿಂಭಾಗದಲ್ಲಿ ಪೊದೆಗಳು ತುಂಬಿರುವುದು ಮತ್ತು ಕಬ್ಬಿಣದ ಸರಳುಗಳಿದ್ದ ಕಿಟಕಿಯ ಮೂಲಕ ಒಳಹೊಕ್ಕಲು ಪ್ಲಾನ್ ಹಾಕಿದ್ದರು. ವಾರದ ಮೊದಲೇ ಈ ಬಗ್ಗೆ ಪ್ಲಾನ್ ಹಾಕಿದ್ದ ಆರೋಪಿಗಳು ಅದಕ್ಕಾಗಿ ವೆಲ್ಡರ್ ದಯಾನಂದನನ್ನು ಪುಸಲಾಯಿಸಿ ಕರೆದೊಯ್ದು ಕೃತ್ಯ ಎಸಗಿದ್ದರು.

ಮೂಲಗಳ ಪ್ರಕಾರ, ಎರಡು ಕೋಟಿಗೂ ಹೆಚ್ಚು ಮೌಲ್ಯದ ಕೇಜಿಗಟ್ಟಲೆ ಚಿನ್ನಾಭರಣ ಕಳವಾಗಿತ್ತು ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರ ಪತ್ತೆಗೆ ಬಾಕಿಯಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಕೇರಳದ ಗಡಿಭಾಗಕ್ಕೆ ಹೊಂದಿಕೊಂಡ ಬಂಟ್ವಾಳ ತಾಲೂಕು ವ್ಯಾಪ್ತಿಯ ಅಡ್ಯನಡ್ಕದ ಬ್ಯಾಂಕ್ ಶಾಖೆಯಲ್ಲಿ ಭದ್ರತಾ ಲೋಪ ಆಗಿದ್ದೇ ಕಳವು ಕೃತ್ಯಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಲಾಕರ್, ಎಟಿಎನಂತಹ ಸೌಲಭ್ಯಗಳಿದ್ದಾಗ ಭದ್ರತಾ ಸಿಬಂದಿ, ಸಿಸಿಟಿವಿ ಇರಬೇಕಿತ್ತು. ಅಲ್ಲದೆ, ಬ್ಯಾಂಕ್ ಕಟ್ಟಡವೂ ಸುಸಜ್ಜಿತವಾಗಿರಬೇಕಿತ್ತು. ಸಿಸಿಟಿವಿ ಇಲ್ಲದಿರುವುದು ಮತ್ತು ಬ್ಯಾಂಕ್ ಕಟ್ಟಡದ ಆವರಣದಲ್ಲಿ ಪೊದೆಗಳು ಬೆಳೆದಿದ್ದು ಆರೋಪಿಗಳಿಗೆ ಒಳಹೊಕ್ಕಲು ರಹದಾರಿ ಮಾಡಿಕೊಟ್ಟಂತಿತ್ತು. ಆರೋಪಿಗಳ ಪೈಕಿ ಖಲಂದರ್ ಮತ್ತು ರಫೀಕ್ ಮಂಗಳೂರು, ಬಂಟ್ವಾಳ ಸೇರಿ ಹಲವು ಕಡೆ ಮನೆ ಕಳ್ಳತನದ ಕೇಸುಗಳನ್ನು ಹೊಂದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೆಕ್‌ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ಮುಡಿಗೇರಿದ ವಿಶ್ವ ಸುಂದರಿ ಕಿರೀಟ

Next Post

ಬೈಕಿನಲ್ಲಿ ವಿಶ್ವ ಪರ್ಯಟನೆ ; ಜಾರ್ಖಂಡಿನಲ್ಲಿ ರಾತ್ರಿ ತಂಗಿದ್ದ ಸ್ಪೇನ್ ಮೂಲದ ಬ್ಲಾಗರ್ ಯುವತಿ ಮೇಲೆ ಗ್ಯಾಂಗ್-ರೇಪ್- ನಾಲ್ವರ ಬಂಧನ

Related Posts

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ಕ್ರೈಮ್ ನ್ಯೂಸ್

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
59
Next Post
ಬೈಕಿನಲ್ಲಿ ವಿಶ್ವ ಪರ್ಯಟನೆ ; ಜಾರ್ಖಂಡಿನಲ್ಲಿ ರಾತ್ರಿ ತಂಗಿದ್ದ ಸ್ಪೇನ್ ಮೂಲದ ಬ್ಲಾಗರ್ ಯುವತಿ ಮೇಲೆ ಗ್ಯಾಂಗ್-ರೇಪ್- ನಾಲ್ವರ ಬಂಧನ

ಬೈಕಿನಲ್ಲಿ ವಿಶ್ವ ಪರ್ಯಟನೆ ; ಜಾರ್ಖಂಡಿನಲ್ಲಿ ರಾತ್ರಿ ತಂಗಿದ್ದ ಸ್ಪೇನ್ ಮೂಲದ ಬ್ಲಾಗರ್ ಯುವತಿ ಮೇಲೆ ಗ್ಯಾಂಗ್-ರೇಪ್- ನಾಲ್ವರ ಬಂಧನ

Discussion about this post

Recent News

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
30
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d