• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಿ20 ವಿಶ್ವಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ಕೊಕ್ ಸಾಧ್ಯತೆ

Coastal Times by Coastal Times
March 12, 2024
in ಕ್ರೀಡಾ ಸುದ್ದಿ
ಟಿ20 ವಿಶ್ವಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ಕೊಕ್ ಸಾಧ್ಯತೆ
41
VIEWS
WhatsappTelegramShare on FacebookShare on Twitter

ಮುಂಬೈ ಮಾ.12:  ಭಾರತದಲ್ಲಿ ಇದೀಗ ಐಪಿಎಲ್ ಜ್ವರ ಶುರುವಾಗಿದೆ. ತಂಡಗಳ ಅಭ್ಯಾಸ ಆರಂಭಗೊಂಡಿದೆ. ವರ್ಣರಂಜಿತ ಟೂರ್ನಿಗೆ ಕೆಲ ದಿನಗಳು ಮಾತ್ರ ಬಾಕಿ. ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ಯುವ ಕ್ರಿಕೆಟಿಗರು ಇದೀಗ ಐಪಿಎಲ್ ತಯಾರಿಯಲ್ಲಿ ಮುಳುಗಿದ್ದಾರೆ. ಇದರ ಜೊತೆಗೆ ಬಿಸಿಸಿಐ ಟಿ20 ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸುತ್ತಿದೆ. ಈ ತಯಾರಿ ನಡುವೆ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಗೆ ವಿರಾಟ್ ಕೊಹ್ಲಿ ಆಯ್ಕೆ ಮಾಡಲು ಬಿಸಿಸಿಐ ಆಸಕ್ತಿ ತೋರಿಲ್ಲ. ಕೊಹ್ಲಿಗೆ ಕೊಕ್ ನೀಡಿ ಯುವ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ನಿರ್ಧರಿಸಿದೆ. ಆದರೆ ತಂಡಕ್ಕೆ ಕೊಡುಗೆ ನೀಡಿರುವ ವಿರಾಟ್ ಕೊಹ್ಲಿ ಆಯ್ಕೆಗೆ ಕೊನೆಯ ಒಂದು ಅವಕಾಶ ನೀಡಲು ಬಿಸಿಸಿಐ ನಿರ್ಧರಿಸಿದೆ.ಕೊಹ್ಲಿ ಐಪಿಎಲ್ ಟೂರ್ನಿ ಪ್ರದರ್ಶನ ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಬಿಸಿಸಿಐ ಮುಂದಾಗಿದೆ.

ಟಿ20 ಮಾದರಿಯಲ್ಲಿ ವಿರಾಟ್ ಕೊಹ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ವಿಫಲವಾಗಿದ್ದಾರೆ. ಕೊಹ್ಲಿ ನೈಜ ಪ್ರದರ್ಶನ ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ವಿರಳವಾಗಿದೆ. ಜನವರಿ ತಿಂಗಳಲ್ಲಿ ವಿರಾಟ್ ಕೊಹ್ಲಿ ಆಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿ ಆಡಿದ್ದರು. ಇದಾದ ಬಳಿಕ ಟೆಸ್ಟ್, ಏಕದಿನ ಹಾಗೂ ಟಿ20 ಯಾವುದರಲ್ಲೂ ಕಾಣಿಸಿಕೊಂಡಿಲ್ಲ. ಮತ್ತೊಂದೆಡೆ ಶಾರ್ಟ್ ಮಾದರಿಯಲ್ಲಿ ಕೊಹ್ಲಿ ಪ್ರದರ್ಶನ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನೇರವಾಗಿ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆ ಮಾಡದಿರಲು ಬಿಸಿಐ ಮುಂದಾಗಿದೆ.

ಆಫ್ಘಾನಿಸ್ತಾನ ವಿರುದ್ಧದ ಸರಣಿ ಮೊದಲು 14 ತಿಂಗಳು ಕೊಹ್ಲಿ ಯಾವುದೇ ಟಿ20 ಪಂದ್ಯ ಆಡಿಲ್ಲ. ಬರೋಬ್ಬರಿ ಒಂದು ವರ್ಷ 2 ತಿಂಗಳ ಬಳಿಕ ಆಫ್ಘಾನಿಸ್ತಾನ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಕಳೆದೆರಡು ವರ್ಷದಲ್ಲಿ ಕೊಹ್ಲಿ ಬೆರೆಳೆಣಿಕೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದಾರೆ. ಆಡಿದ ಪಂದ್ಯದಲ್ಲೂ ಸ್ಫೋಟಕ ಬ್ಯಾಟಿಂಗ್ ಮಾಡುವಲ್ಲಿ ವಿಫಲವಾಗಿದ್ದಾರೆ ಅನ್ನೋದು ಬಿಸಿಸಿಐ ಪರಾಮರ್ಶೆಯಾಗಿದೆ.

ಐಪಿಎಲ್ 2024 ಟೂರ್ನಿಯಲ್ಲಿ ಕೊಹ್ಲಿ ಪ್ರದರ್ಶನ ಆಧರಿಸಿ ಅಂತಿಮ ನಿರ್ಧಾರ ಕೈಗೊಲ್ಳಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕೊಹ್ಲಿ ಸ್ಫೋಟಕ ಪ್ರದರ್ಶನದ ಮೂಲಕ ಅಬ್ಬರಿಸಿದರೆ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಇತ್ತ ಕೊಹ್ಲಿ ಚೊಚ್ಚಲ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಲು ಉತ್ಸುಕರಾಗಿದ್ದಾರೆ. ಎಲ್ಲಾ ಆವೃತ್ತಿಗಳಲ್ಲಿ ಆರ್‌ಸಿಬಿಗೆ ಪ್ರಶಸ್ತಿ ಮಿಸ್ ಆಗಿದೆ. ಈ ಬಾರಿ ಪ್ರಶಸ್ತಿ ಒಲಿಸಿಕೊಳ್ಳುವ ಮೂಲಕ ಟಿ20 ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗಲು ಕೊಹ್ಲಿ ತಯಾರಿ ಮಾಡಿಕೊಳ್ಳಬೇಕಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಟಿಕೆಟ್ ಕೈತಪ್ಪುವ ಸುಳಿವು- ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ, ಗುಡಿಸಿ ಅಂದ್ರೆ ಗುಡಿಸುತ್ತೇನೆ, ಒರೆಸು ಅಂದ್ರೆ ಒರೆಸುತ್ತೇನೆ ; ಸಂಸದ ನಳಿನ್ ಕಟೀಲ್ ಭಾವುಕ

Next Post

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್

Related Posts

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ
ಕ್ರೀಡಾ ಸುದ್ದಿ

ಮಂಗಳೂರು ಶೀಘ್ರದಲ್ಲೇ ಫುಟ್ಬಾಲ್‌ ಆಟಗಾರರಿಗೆ ಸಿಗಲಿದೆ ಸುಸಜ್ಜಿತ ಟರ್ಫ್‌ ಕ್ರೀಡಾಂಗಣ

July 7, 2025
39
ಎನ್‌ಸಿ‌ ಕ್ಲಾಸಿಕ್’ ಜಾವೆಲಿನ್ ಸ್ಪರ್ಧೆಯಲ್ಲಿ ‘ನೀರಜ್ ಚೋಪ್ರಾ ಚಾಂಪಿಯನ್
ಕ್ರೀಡಾ ಸುದ್ದಿ

ಎನ್‌ಸಿ‌ ಕ್ಲಾಸಿಕ್’ ಜಾವೆಲಿನ್ ಸ್ಪರ್ಧೆಯಲ್ಲಿ ‘ನೀರಜ್ ಚೋಪ್ರಾ ಚಾಂಪಿಯನ್

July 6, 2025
13
Next Post
ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
19
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d