ಸುಬ್ರಹ್ಮಣ್ಯ : ಪ್ರಸಿದ್ದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತೀಯ ಚಿತ್ರರಂಗದ ಬಹುಬೇಡಿಕೆ ನಟಿ ಕತ್ರಿನಾ ಕೈಫ್ ಅವರಿಂದು ಭೇಟಿ ಕೊಟ್ಟಿದ್ದಾರೆ. ಇಂದು ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು.
ಸರ್ಪಸಂಸ್ಕಾರ ಪೂಜೆಯಲ್ಲಿ ಕತ್ರಿನಾ ಭಾಗಿ: ಬಾಲಿವುಡ್ನಲ್ಲಿ ತಮ್ಮದೇ ಬೇಡಿಕೆ ಹೊಂದಿರುವ ಕತ್ರಿನಾ ಇಂದು ರಾಜ್ಯದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾದರು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಇಲ್ಲಿಗೆ ಆಗಮಿಸಿರುವ ನಟಿ, ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಉಳಿದುಕೊಂಡು ನಾಳೆಯೂ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಧರಿಸಿ, ದುಪ್ಪಟ್ಟ ಹಾಕಿ ದೇವಸ್ಥಾನದೊಳಗೆ ಆಗಮಿಸಿದರು.
ಮಾಧ್ಯಮಗಳ ಕಣ್ಣಿಗೆ ಬೀಳದಂತೆ ಜಾಗ್ರತೆ ವಹಿಸಿದ ನಟಿ: ಆದಿ ಸುಬ್ರಹ್ಮಣ್ಯ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಕೆಲ ಪುರೋಹಿತರು ಮತ್ತು ತಮ್ಮ ಜೊತೆಗೆ ಬಂದ ಕೆಲ ನಿಕಟವರ್ತಿಗಳ ಜೊತೆ ಮಾತ್ರ ಕಾಣಿಸಿಕೊಂಡ ಕತ್ರಿನಾ, ಇಂದು ಮತ್ತು ನಾಳೆ ಸರ್ಪಸಂಸ್ಕಾರ ಸೇವೆಯನ್ನು ನೆರವೇರಿಸಲಿದ್ದಾರೆ. ಮಹಿಳಾ ಪೊಲೀಸರ ರಕ್ಷಣೆಯಲ್ಲಿದ್ದ ಅವರು ಮಾಧ್ಯಮಗಳ ಕ್ಯಾಮರಾ ಕಣ್ಣಲ್ಲಿ ಸೆರೆಯಾಗದಂತೆ ಜಾಗೃತೆ ವಹಿಸಿದ್ದು ಕಂಡುಬಂತು.
Discover more from Coastal Times Kannada
Subscribe to get the latest posts sent to your email.
Discussion about this post