• About us
  • Contact us
  • Disclaimer
Friday, October 17, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನಿಂದ 35 ಮಂದಿ ಉಮ್ರಾ ಯಾತ್ರೆ ತೆರಳಿದ್ದ ತಂಡದ 26,432 ಸೌದಿ ರಿಯಾಲ್ ಕರೆನ್ಸಿ ಕಳವು , ಬಜ್ಪೆ ಠಾಣೆಗೆ ದೂರು

Coastal Times by Coastal Times
May 12, 2024
in ಕ್ರೈಮ್ ನ್ಯೂಸ್
ಮಂಗಳೂರಿನಿಂದ 35 ಮಂದಿ ಉಮ್ರಾ ಯಾತ್ರೆ ತೆರಳಿದ್ದ ತಂಡದ 26,432 ಸೌದಿ ರಿಯಾಲ್ ಕರೆನ್ಸಿ ಕಳವು , ಬಜ್ಪೆ ಠಾಣೆಗೆ ದೂರು
93
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 11: ಮಂಗಳೂರಿನಿಂದ 35 ಮಂದಿ ಉಮ್ರಾ ಯಾತ್ರೆ ಕೈಗೊಂಡಿದ್ದು ತಮ್ಮ ಖರ್ಚಿಗಾಗಿ ಬ್ಯಾಗಿನಲ್ಲಿ ಇಟ್ಟುಕೊಂಡಿದ್ದ 26432 ಸೌದಿ ರಿಯಾಲ್ ಕರೆನ್ಸಿ (ಅಂದಾಜು 5.88 ಲಕ್ಷ ರೂ.) ಮಂಗಳೂರಿನಿಂದ ಸೌದಿಯ ಜೆದ್ದಾ ತಲುಪುವಷ್ಟರಲ್ಲಿ ಅವರ ಬ್ಯಾಗಿನಿಂದ ಯಾರೋ ಕಳವುಗೈದ ಘಟನೆ ನಡೆದಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರಿನಲ್ಲಿ ಟ್ರಾವೆಲ್ ಏಜನ್ಸಿ ಹೊಂದಿರುವ ಅಹ್ಮದ್ ಇಕ್ಬಾಲ್ ಎಂಬವರು, ಇತರ 35 ಮಂದಿಯ ಜೊತೆಗೆ ಉಮ್ರಾ ಯಾತ್ರೆ ಕೈಗೊಂಡಿದ್ದರು. ಎಪ್ರಿಲ್ 30ರಂದು ಮಂಗಳೂರು ಏರ್ಪೋರ್ಟ್ ಮೂಲಕ ಇವರ ತಂಡ ಹೊರಟಿದ್ದರು. ಈ ವೇಳೆ, ಜೊತೆಗಿದ್ದವರು ಕೈಯಲ್ಲಿ ಹಣ ಇಟ್ಟುಕೊಳ್ಳುವುದು ಬೇಡ ಎಂದು ಗ್ರೂಪಿನಲ್ಲಿದ್ದ ಮಹಮ್ಮದ್ ಬದ್ರುದ್ದೀನ್ ಅವರಲ್ಲಿದ್ದ ಬ್ಯಾಗಿನಲ್ಲಿಯೇ ಎಲ್ಲ ಹಣ ಇಟ್ಟುಕೊಳ್ಳುವಂತೆ ತಮ್ಮಲ್ಲಿದ್ದ ಸೌದಿ ರಿಯಾಲ್ ನಗದನ್ನು ಕೊಟ್ಟಿದ್ದರು. ಮಂಗಳೂರು ಏರ್ಪೋರ್ಟ್ ನಲ್ಲಿ ಒಂದೇ ಬ್ಯಾಗಿನಲ್ಲಿ ತಂಡದಲ್ಲಿದ್ದವರು ಸೇರಿ ಕರೆನ್ಸಿಯನ್ನು ಹಾಕುತ್ತಿದ್ದುದನ್ನು ಅಲ್ಲಿನ ಸಿಬಂದಿಯೂ ನೋಡಿದ್ದರು. ಅದು ಯಾಕೆ ಅಷ್ಟೊಂದು ಹಣ ಎಂದು ಪ್ರಶ್ನೆ ಮಾಡಿದ್ದಾಗ ಇವರು ಸ್ಪಷ್ಟನೆ ನೀಡಿದ್ದರು.

ಆನಂತರ, ಹಣ ಇಟ್ಟು ಬ್ಯಾಗನ್ನು ಲಾಕ್ ಮಾಡಿ ಸಿಬಂದಿ ವಶಕ್ಕೆ ಒಪ್ಪಿಸಲಾಗಿತ್ತು. ಆನಂತರ, ಇವರ ತಂಡ ಮಂಗಳೂರಿನಿಂದ ಮುಂಬೈ ಮೂಲಕ ತೆರಳಿದ್ದು, ಮರುದಿನ ಮೇ 1ರಂದು ಜೆದ್ದಾ ತಲುಪಿತ್ತು. ಆದರೆ ಅಲ್ಲಿ ತಲುಪಿ ಬ್ಯಾಗ್ ಪರಿಶೀಲನೆ ನಡೆಸಿದಾಗ ಹಣ ಇದ್ದ ಬ್ಯಾಗಿನ ಜಿಪ್ ಅನ್ನು ಕಟ್ ಮಾಡಿ ಕರೆನ್ಸಿ ಕಳವು ಮಾಡಲಾಗಿತ್ತು. ಲಾಕ್ ಒಡೆದು ಹಾಕಿದ್ದು ಒಳಗಿದ್ದ 26,432 ಸೌದಿ ರಿಯಾಲ್ ಕರೆನ್ಸಿಯನ್ನು ಕಳವು ಮಾಡಿರುವುದು ಕಂಡುಬಂದಿತ್ತು.

ಇಕ್ಬಾಲ್ ಮತ್ತು ತಂಡವು ಮೇ 13ರಂದು ಹಿಂತಿರುಗುವುದಕ್ಕೆ ಟಿಕೆಟ್ ಆಗಿದೆ. ಆದರೆ ಮಂಗಳೂರು ಏರ್ಪೋರ್ಟ್ ನಲ್ಲಿ ಹಣ ಕಳವಾಗಿರುವ ಬಗ್ಗೆ ಅದಕ್ಕೂ ಮೊದಲೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಇಕ್ಬಾಲ್ ಅವರ ಪತ್ನಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ದಿನೇಶ್ ಮಾಧ್ಯಮ ಗ್ರೂಪಿನಲ್ಲಿ ಪ್ರತಿಕ್ರಿಯಿಸಿದ್ದು, ಪೊಲೀಸರು ಮಂಗಳೂರು ಏರ್ಪೋರ್ಟ್ ನಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಯಾವುದೇ ಸುಳಿವು ಸಿಕ್ಕಿಲ್ಲ. ಪ್ರವಾಸಿ ತಂಡವು ಮಂಗಳೂರಿನಿಂದ ಮುಂಬೈ, ಜೆದ್ದಾ ತಲುಪಿದ ಬಳಿಕ ಕಳವಾಗಿರುವುದನ್ನು ನೋಡಿದೆ. ಹೀಗಾಗಿ ಈ ನಡುವಲ್ಲಿ ಯಾವುದೇ ಕಡೆ ಕಳವು ಆಗಿರುವ ಸಾಧ್ಯತೆಯಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಾಲಕನಿಗೆ ಲೈಂಗಿಕ ಕಿರುಕುಳ ,ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ನೋವು ಹೇಳಿಕೊಂಡ ಬಾಲಕ, ಪೋಕ್ಸೊ ಪ್ರಕರಣ ದಾಖಲು

Next Post

ಉಪ್ಪಿನಂಗಡಿ ‌: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

Related Posts

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ
ಕ್ರೈಮ್ ನ್ಯೂಸ್

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
59
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು
ಕ್ರೈಮ್ ನ್ಯೂಸ್

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
81
Next Post
ಉಪ್ಪಿನಂಗಡಿ ‌: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

ಉಪ್ಪಿನಂಗಡಿ ‌: ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

Discussion about this post

Recent News

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
59
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
156
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

6 ತಿಂಗಳ ಹಿಂದೆ ನಡೆದ ವೈದ್ಯೆಯ ಸಾವಿನ ಪ್ರಕರಣಕ್ಕೆ ಭಯಾನಕ ಟ್ವಿಸ್ಟ್​: ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿ

October 16, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ ಹಾರಿ ಆತ್ಮಹತ್ಯೆ

October 14, 2025
ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

ಕೇರಳದ ಯುವಕನಿಗೆ ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ 45 ಲಕ್ಷ ಪೀಕಿದ ವಿಟ್ಲ ಗ್ಯಾಂಗ್: ಪ್ರಕರಣ ದಾಖಲು

October 14, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d