ಮಂಗಳೂರು: ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ ದಿನಾಂಕ 10.05.2024ರಂದು ನೆರವೆರಿತು.ನೂತನ ಸುಸಜ್ಜಿತ ಆಡಳಿತ ಕಛೇರಿಯನ್ನು ಬ್ಯಾಂಕಿನ ಅಧ್ಯಕ್ಷ ಸಹಕಾರರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು.ಅವರ್ ಲೇಡಿ ಆಫ್ ಮಿರಾಕಲ್ಸ್ ಮಿಲಾಗ್ರಿಸ್ ಚರ್ಚ್ನಧರ್ಮಗುರು ವಂ.ಬೊನವೆಂಚರ್ ನಜರೆತ್ ನೂತನ ಕಛೇರಿಯನ್ನು ಆಶಿರ್ವಚಿಸಿದರು.

ನಂತರ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರರತ್ನ ಅನಿಲ್ ಲೋಬೊ ವಹಿಸಿದ್ದರು.ಅವ ಲೇಡಿ ಅಫ್ ಮಿರಾಕಲ್ಸ್ ಮಿಲಾಗ್ರಿಸ್ ಚರ್ಚ್ನಧರ್ಮಗುರು ವಂ.ಬೊನವೆಂಬರ್ ನಜರೆತ್, ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ನ ಪ್ರಾಂಶುಪಾಲ ವಂ.ರೋಬರ್ಟ್ಡಿಸೋಜ, ಹಿರಿಯ ನ್ಯಾಯವಾದಿ ಶ್ರೀ ಕ್ಲಾರೆನ್ಸ್ ಪ್ಯಾಸ್, ಉಡುಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಕ್ಲಿಫರ್ಡ್ ಲೋಬೊ, ಹಿರಿಯ ವಕೀಲ ಶ್ರೀ ಎಂ.ಪಿ.ನೋರೊನ್ಹಾ ಅತಿಥಿಗಳಾಗಿದ್ದರು.ಉಪಾಧ್ಯಕ್ಷ ಶ್ರೀ ಜೆರಾಲ್ಡ್ ಡಿಸಿಲ್ವಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ವೇದಿಕೆಯಲ್ಲಿದ್ದರು.
ಬ್ಯಾಂಕಿನ ಸಂಸ್ಥಾಪಕರದಿನಾಚರಣೆಯನ್ನು ಸಂಸ್ಥಾಪಕ ಪಿ.ಎಫ್.ಎಕ್ಸ್ ಸಲ್ದಾನ್ಹಾರವರ ಭಾವಚಿತ್ರಕ್ಕೆ ಹೂ ಅರ್ಪಿಸುವ ಮೂಲಕ ಆಚರಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ ಸಹಕಾರರತ್ನ ಅನಿಲ್ ಲೋಬೊ ಸ್ವಾಗತಿಸಿ ಪ್ರಸ್ತಾವನೆಗೈದು, ಸಂಕಷ್ಟಗೊಳಗಾದ ಸಮುದಾಯದ ನೆರವಿಗಾಗಿ 112 ವರ್ಷಗಳ ಹಿಂದೆ ಬ್ಯಾಂಕನ್ನು ಪಿ ಎಫ್.ಸಲ್ದಾನ್ಹಾ ಸ್ಥಾಪಿಸಿದ್ದರು.ಬ್ಯಾಂಕಿಂಗ್ ಕ್ಷೇತ್ರ ಅಮೂಲಾಗ್ರ ಬದವಾಣೆಗೊಳಗಾಗಿದೆ.ಮಾಹಿತಿ ತಂತ್ರಜ್ಞಾನದಿoದ ಕ್ರಾಂತಿಕಾರಿ ಪರಿವರ್ತನೆಗಳಾಗುತ್ತಿದ್ದು ಅದಕ್ಕೆ ತೆರೆದುಕೊಳ್ಳದಿದ್ದರೆ ಬೆಳೆಯುವುದು, ಉಳಿಯುವುದು ಕಷ್ಟ ಎಂದರು.ಪ್ರಸ್ತುತ ಪಂಚ ಜಿಲ್ಲೆಗಳಿಗೆ ಶಾಖೆಗಳ ವಿಸ್ತರಣೆಯೋಜನೆ ಕಾರ್ಯಗತಗೊಳಿಸುತ್ತಿರುವ ಎಂ.ಸಿ.ಸಿ.ಬ್ಯಾಂಕ್ ಮುಂದೆರಾಜ್ಯಾದ್ಯಂತ ಶಾಖೆಗಳನ್ನು ತೆರೆಯುವಯೋಜನೆ ಹಾಕಿಗೊಂಡಿದೆ.ಬ್ಯಾಂಕಿನ ಕಾರ್ಯಕ್ಷೇತ್ರವು ಇಡೀ ಕರ್ನಾಟಕಕ್ಕೆ ವಿಸ್ತರಿಸಿದ್ದು, ಇದಕ್ಕೆಆರ್ ಬಿಐನಿಂದಲೂಅನುಮೋದನೆ ಸಿಕ್ಕಿರುತ್ತದೆ.ಸುಸುಜ್ಜಿತ ಆಡಳಿತ ಕಛೇರಿಯಲ್ಲಿ ಸಿಬಂದಿ ತರಬೇತಿಕೇಂದ್ರ, ಎಟಿಎಂ, ಕ್ಯಾಶ್ ಡಿಪಾಜಿಟ್ ಯಂತ್ರ, ಪಾಸ್ ಬುಕ್ಕಿಯೊಸ್ ವ್ಯವಸ್ಥೆಯಿದ್ದು, ಗ್ರಾಹಕರಿಗೆ ವಿಶಾಲ ಪಾರ್ಕಿಗೆ ವವ್ಯಸ್ಥೆಯನ್ನೂ ಮಾಡಲಾಗಿದೆಎಂದರು.

ನಗರದ ಹಿರಿಯ ವಕೀಲ ಬ್ಯಾಂಕಿನ ಕಾನೂನು ಸಲಹೆಗಾರರಾದ ಶ್ರೀ ಕೇರೆನ್ಸ್ ಪ್ಯಾಸ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತಾನಾಡಿದಅವರು ಬ್ಯಾಂಕಿಗೆ ಗ್ರಾಹಕರೇ ಮುಖ್ಯ ಹೊರತುಗ್ರಾಹಕರಿಗೆ ಬ್ಯಾಂಕ್ ಅಲ್ಲ, ಅವರೆಂದಿಗೂ ಬ್ಯಾಂಕಿಗೆ ಭಾರವಲ್ಲಎನ್ನುವ ಸೂತ್ರವನ್ನು ಪಾಲಿಸಬೇಕು ಎಂದು ಹೇಳಿ ಬ್ಯಾಂಕಿನ ಅಧ್ಯಕ್ಷ, ನಿರ್ದೆಶಕರು ಹಾಗೂ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.

1000 ಕೋಟಿ ವ್ಯವಹಾರದ ಮೈಲಿಗಲ್ಲು ಆಚರಣೆಯ ಸಂದರ್ಭದಲ್ಲಿ ಹೊರತಂದಿರುವ ಕೊಡುಗೆಗಳ ಪೈಕಿ ಡೈಮಂಡ್ ಕಸ್ಟಮರ್ ಕಾರ್ಡ್ಅನ್ನು ಬಿಡುಗಡೆಗೊಳಿಸಿ ಹಸ್ತಾಂತರಿಸಲಾಯಿತು.

ವಂದನೀಯ ಬೊನವೆಂಚರ್ನಜರೆತ್ ಮಾತನಾಡಿ 112 ವರ್ಷದಿಂದ ಸ್ಥಾಪಕರು, ಆ ಬಳಿಕ ಆಡಳಿತ ಮಂಡಳಿ, ಸಿಬಂದಿಯ ಶ್ರಮದಿಂದ ಎಂ.ಸಿ.ಸಿ.ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಔನ್ನತ್ಯ ಸಾಧಿಸುತ್ತಾ ಬಂದಿದೆ.ಸಮಾಜಕ್ಕೆ ಸದಾಕೊಡುಗೆ ನೀಡುತ್ತಿರುವ ಬ್ಯಾಂಕ್ನ ಸೇವೆ ಇನ್ನೂ ಮುಂದುವರಿಯಲಿ ಎಂದು ಹಾರೈಸಿದರು.


ಮುಖ್ಯ ಅತಿಥಿಗಳಾದ ವಂ.ರಾಬರ್ಟ್ಡಿಸೋಜ, ಶ್ರೀ ಕ್ಲಿಫರ್ಡ್ ಲೋಬೊ ಹಾಗೂ ಹಿರಿಯ ವಕೀಲ ಶ್ರೀ ಎಂ.ಪಿ.ನೊರೊನ್ಹಾ ಸಂಧರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ಬ್ಯಾಂಕಿನ ನಿರ್ದೇಶಕರಾದಅನಿಲ್ ಪತ್ರಾವೊ, ಹೆರಾಲ್ಡ್ ಮೊಂತೇರೊ, ಎಲ್ ರೊಯ್ ಕ್ರಾಸ್ಟೋ, ರೋಶನ್ ಡಿಸೋಜ, ಡಾ| ಜೆರಾಲ್ಡ್ ಪಿಂಟೊ, ಅಂಡ್ರುಡಿಸೋಜ, ಡೆವಿಡ್ ಡಿಸೋಜ, ಜೆ.ಪಿ.ರೊಡ್ರಿಗಸ್, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ.ಪಿಂಟೊ, ಐರಿನ್ ರೆಬೆಲ್ಲೊ,ಸುಶಾಂತ್ ಸಲ್ದಾನ್ಹಾ, ಶರ್ಮಿಳಾ ಮಿನೇಜಸ್, ಫೆಲಿಕ್ಸ್ ಡಿಕ್ರುಜ್ ಆಲ್ವಿನ್ ಪಿ. ಮೊಂತರೊ ವೇದಿಕೆಯಲ್ಲಿ ಹಾಜರಿದ್ದರು, ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿದರು, ಮನು ಬಂಟ್ವಾಳ ನಿರೂಪಿಸಿದರು.

Discover more from Coastal Times Kannada
Subscribe to get the latest posts sent to your email.







Discussion about this post