• About us
  • Contact us
  • Disclaimer
Friday, June 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಟಿ ಅನುಷ್ಕಾಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್! ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು

Coastal Times by Coastal Times
June 12, 2022
in ಕ್ರೈಮ್ ನ್ಯೂಸ್
ನಟಿ ಅನುಷ್ಕಾಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್! ಗೃಹ ಸಚಿವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರಿಂದ ದೂರು
104
VIEWS
WhatsappTelegramShare on FacebookShare on Twitter

ಬೆಂಗಳೂರು, ಜೂ. 12: ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ದಿವಂಗತ ಡಾನ್ ಮುತ್ತಪ್ಪ ರೈ ಅಕ್ಕನ ಮಗ ಮನ್ವಿತ್ ರೈ ಸ್ಕೆಚ್ ಹಾಕಿರುವ ಸಂಗತಿ ಹೊರ ಬಿದ್ದಿದೆ. ಗುಣರಂಜನ್ ಶೆಟ್ಟಿ ಹತ್ಯೆಗೆ ಮನ್ವಿತ್ ರೈ ಸಂಚು ರೂಪಿಸಿರುವ ಸಂಬಂಧ ಜಯ ಕರ್ನಾಟಕ ಸಂಘಟನೆ ಸದಸ್ಯರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ದೂರು ನೀಡಿದ್ದಾರೆ.

ಮುತ್ತಪ್ಪ ರೈ ಬಲಗೈ ಬಂಟನಾಗಿರುವ ಗುಣರಂಜನ್ ಶೆಟ್ಟಿ ಜಯಕರ್ನಾಟಕ ಸಂಘಟನೆ ಪ್ರಮುಖ ಸ್ಥಾನದಲ್ಲಿದ್ದಾರೆ. ದಿವಂಗತ ಡಾ. ಮುತ್ತಪ್ಪ ರೈ ಅವರ ಪರಮಾಪ್ತರಾಗಿ ಗುರುತಿಸಿಕೊಂಡಿದ್ದರು. ನಟಿ ಅನುಷ್ಕಾ ಶೆಟ್ಟಿಯ ಸಹೋದರ ಕೂಡ ಹೌದು. ಇನ್ನು ಮುತ್ತಪ್ಪ ರೈ ಅವರ ಅಕ್ಕನ ಮಗ ಮನ್ವಿತ್ ರೈ. ಮುತ್ತಪ್ಪ ರೈ ಅವರಿಂದ ಮನ್ವಿತ್ ರೈ ಹೊರ ಬಂದಿದ್ದ. ಇದೀಗ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿರುವ ವಿಚಾರ ಹೊರ ಬರುತ್ತಿದ್ದಂತೆ ಇದಕ್ಕೆ ಸಂಬಂಧಿಸಿದ ಅಡಿಯೋ ಕೂಡ ಮನ್ವಿತ್ ರೈ ಬಿಡುಗಡೆ ಮಾಡಿದ್ದಾನೆ.

ತೆಲುಗು ಚಿತ್ರರಂಗದ ಖ್ಯಾತ ನಟಿ, ಪುತ್ತೂರು ಮೂಲದ ಅನುಷ್ಕಾ ಶೆಟ್ಟಿ ಸಹೋದರನಾಗಿರುವ ಗುಣರಂಜನ್ ಶೆಟ್ಟಿ ಮೊದಲಿನಿಂದಲೂ ಮುತ್ತಪ್ಪ ರೈ ಜೊತೆಗೇ ಗುರುತಿಸಿಕೊಂಡಿದ್ದವರು. ಆದರೆ ಎರಡು ವರ್ಷಗಳ ಹಿಂದೆ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಕುಟುಂಬದಲ್ಲಿ ಆಸ್ತಿ ಜಗಳ ಉಂಟಾಗಿದ್ದ ಬಗ್ಗೆ ಮಾಹಿತಿಗಳಿದ್ದವು. ಇಬ್ಬರು ಮಕ್ಕಳು ಆಸ್ತಿಗಾಗಿ ಜಗಳ ಮಾಡಿಕೊಂಡಿದ್ದಾರೆ. ಎರಡನೇ ಪತ್ನಿಯೂ ಆಸ್ತಿಗಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ ಅನ್ನುವ ಸುದ್ದಿಗಳಿದ್ದವು. ಇದೀಗ ಮತ್ತೆ ಆಸ್ತಿ ವಿಚಾರದಲ್ಲಿ ಜಗಳ ನಡೆದಿದೆಯೋ ಅನ್ನುವಂತೆ ವದಂತಿಗಳು ಹರಡಿದ್ದು, ಹಿಂದೆ ಮುತ್ತಪ್ಪ ರೈ ಜೊತೆಗೇ ಖಾಸಾ ಬಳಗದಲ್ಲಿ ಗುರುತಿಸಿಕೊಂಡಿದ್ದ ಪುತ್ತೂರು ಮೂಲದ ಮನ್ವಿತ್ ರೈ ವಿರುದ್ಧವೇ ಆರೋಪ ಕೇಳಿಬರುತ್ತಿದೆ.

ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಎಂಬ ವದಂತಿ ಬರ್ತಾಯಿವೆ. ಇದು ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಾರೆ. ಆದರೆ ಈ ವಿಚಾರದಲ್ಲಿ ಯಾಕೆ ನನ್ನ ಹೆಸರು ಬರ್ತಾ ಇದೆಯೋ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಸಂಬಂಧ ಇಲ್ಲ ಎಂದು ಮನ್ವಿತ್ ರೈ ಅಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ತನಿಖೆ ಆಗ್ತಿರೋದ್ರಿಂದ ಇದರಲ್ಲಿ ಯಾರು ಇದ್ದಾರೆ ಎಂಬುದು ಹೊರಗೆ ಬರಲಿದೆ ಎಂಬ ಎಚ್ಚರಿಕೆ ಕೊಟ್ಟಿದ್ದಾರೆ. ವಿನಾಃಕಾರಣ ನನ್ನ ಹೆಸರು ಯಾಕೆ ಬಳಸುತ್ತಿದ್ದಾರೋ ಗೊತ್ತಿಲ್ಲ. ನನ್ನ ಮೇಲೆ ಇದುವರೆಗೂ ಯಾವುದೇ ಕ್ರಿಮಿನಲ್ ಕೇಸ್ ಇಲ್ಲ. ಒಂದು ಎಫ್ಐಆರ್ ಕೂಡ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಕೇಶ್ ಮಲ್ಲಿ ಹತ್ಯೆ ವಿಚಾರದಲ್ಲಿ ಮನ್ವಿತ್ ಹೆಸರು ತಳಕು: 2020 ರಲ್ಲಿ ಮುತ್ತಪ್ಪ ರೈ ಪರಮಾಪ್ತ ರಾಕೇಶ್ ಮಲ್ಲಿಯನ್ನು ಕೊಲೆ ಮಾಡಲು ಮಾಜಿ ಡಾನ್ ಮುತ್ತಪ್ಪ ರೈ ಅವರು ಸುಪಾರಿ ಕೊಟ್ಟಿರುವ ವಿಚಾರದಲ್ಲಿ ಮನ್ವಿತ್ ರೈ ಹೆಸರು ಕೇಳಿ ಬಂದಿತ್ತು. ಮೂರು ಕೋಟಿ ರೂ.ಗೆ ಮುತ್ತಪ್ಪ ರೈ ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ವೇಳೆ ರಾಕೇಶ್ ಮಲ್ಲಿ ಮಾಧ್ಯಮಗಳ ಎದುರು ಬಂದು ನನ್ನ ಕೊಲೆಗೆ ಮುತ್ತಪ್ಪ ರೈ ಸುಪಾರಿ ನೀಡಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದ. ಇದಕ್ಕೆ ಸಂಬಂಧಿಸದಿಂತೆ ವಿದೇಶದಿಂದಲೇ ವಿಡಿಯೋ ಬಿಡುಗಡೆ ಮಾಡಿದ್ದ ಮನ್ವಿತ್ ರೈ, ರಾಕೇಶ್ ಮಲ್ಲಿ ಕೊಲ್ಲಲು ಸುಪಾರಿ ಕೊಡುವುದಾಗಿ ಹೇಳಿದ್ದು ನಿಜ ಎಂದು ಮನ್ವಿತ್ ರೈ ಸಹ ಸ್ಪಷ್ಟನೆ ನೀಡಿದ್ದ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಝುಲೇಖಾ ಯೆನೆಪೋಯ ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭ

Next Post

ರೌಡಿಶೀಟರ್ ರಾಜ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳಿಗೆ ಸಹಕರಿಸಿದ 9 ಮಂದಿ ಬಂಧನ

Related Posts

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ
ಕ್ರೈಮ್ ನ್ಯೂಸ್

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
65
ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ
ಕ್ರೈಮ್ ನ್ಯೂಸ್

ವೆಬ್​ ಸೀರೀಸ್ ನೋಡಿ ಒಂದೇ ಕುಟುಂಬದ ನಾಲ್ವರನ್ನು ಕೊಂದ 17ರ ಬಾಲಕ, ಕೊನೆಗೂ ಸಿಕ್ಕಿ ಬಿದ್ದ

May 30, 2026
94
Next Post
ರೌಡಿಶೀಟರ್ ರಾಜ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳಿಗೆ ಸಹಕರಿಸಿದ 9 ಮಂದಿ ಬಂಧನ

ರೌಡಿಶೀಟರ್ ರಾಜ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳಿಗೆ ಸಹಕರಿಸಿದ 9 ಮಂದಿ ಬಂಧನ

Discussion about this post

Recent News

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
65
ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

15 ತಿಂಗಳಿಗೆ ಹಣ ಡಬಲ್‌! ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಠೇವಣಿ ಸಂಗ್ರಹ, ಆದಿತ್ಯರಾಜ ಕ್ಯಾಪಿಟಲ್‌ ಮೇಲೆ ಪೊಲೀಸರ ದಾಳಿ

June 5, 2026
ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

June 3, 2026
ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಕೊಲೆಯಾದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ: ಮೂವರು ಆರೋಪಿಗಳ ಬಂಧನ

June 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d