ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪ್ಪಿನಂಗಡಿಯ ನೇತ್ರಾವತಿ ನದಿಯ ಸೇತುವೆ ಬಳಿ ನಿರ್ಮಾಣವಾಗುತ್ತಿರುವ ಗುಡ್ಡ ಕುಸಿತಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಸಂಜೆ ವೀಕ್ಷಿಸಿದರು. ಇದಕ್ಕೂ ಮುನ್ನ ಅವರು, ಸುಳ್ಯದಲ್ಲಿ ಭೂಕಂಪನದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ , ಕಂದಾಯ ಸಚಿವ ಆರ್ ಅಶೋಕ್, ಸಚಿವರಾದ ವಿ.ಸುನಿಲ್ ಕುಮಾರ್, ಸಿ.ಸಿ. ಪಾಟೀಲ, ಎಸ್. ಅಂಗಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಎಸ್.ಪಿ. ಋಷಿಕೇಶ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಕೆ., ಪುತ್ತೂರು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ ಪ್ರೀಯ, ತಾಲೂಕು ಆರೋಗ್ಯಾಧಿಕಾರಿ ದೀಪಕ್ ರೈ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಮಧುಸೂದನ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post