• About us
  • Contact us
  • Disclaimer
Tuesday, November 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

Coastal Times by Coastal Times
July 12, 2025
in ರಾಷ್ಟ್ರೀಯ ಸುದ್ದಿ
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
54
VIEWS
WhatsappTelegramShare on FacebookShare on Twitter

ನವದೆಹಲಿ: 270ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದ್ದ ಅಹಮದಾಬಾದ್​ ವಿಮಾನ ದುರಂತದ ಕಾರಣ ಬಯಲಾಗಿದೆ. ಅಪಘಾತದ ಬಗ್ಗೆ ತನಿಖೆ ನಡೆಸಿದ್ದ ವಿಮಾನ ಅಪಘಾತಗಳ ತನಿಖಾ ಸಂಸ್ಥೆಯ (AAIB) ವರದಿ ಶುಕ್ರವಾರ ತಡರಾತ್ರಿ ಬಿಡುಗಡೆಯಾಗಿದೆ.

ವಿಮಾನ ಹಾರಿದ ಕೆಲವೇ ಸೆಕೆಂಡುಗಳಲ್ಲಿ ಎರಡು ಇಂಜಿನ್​ಗಳಿಗೆ ಇಂಧನ ಪೂರೈಕೆ ನಿಂತಿದೆ. ಅದರ ಸ್ವಿಚ್​​ಗಳು RUN ನಿಂದ CUT OFF ಆಗಿದ್ದವು. ಇದರಿಂದ ಇಂಧನ ಸರಬರಾಜಾಗದೆ, ವಿಮಾನ ಮೇಲೆಕ್ಕೆ ಹಾರಲು ಸಾಧ್ಯವಾಗಿಲ್ಲ ಎಂದು ತನಿಖಾ ವರದಿಯಲ್ಲಿ ಎಎಐಬಿ ತಿಳಿಸಿದೆ.

ಪೈಲಟ್​​ಗಳ ಮಾತುಕತೆ ರೆಕಾರ್ಡ್​: ವಿಮಾನ ದುರಂತಕ್ಕೀಡಾಗುವ ಮೊದಲು ಪೈಲಟ್​​ಗಳಿಬ್ಬರು ಮಾತನಾಡಿಕೊಂಡಿದ್ದು, ಬ್ಲ್ಯಾಕ್​​​ಬಾಕ್ಸ್​​ನಲ್ಲಿ ದಾಖಲಾಗಿದೆ. ಒಬ್ಬ ಪೈಲಟ್​ ‘ಇಂಧನವನ್ನು ಏಕೆ ಆಫ್​ ಮಾಡಿದ್ದೀರಿ’ ಎಂದು ಕೇಳುತ್ತಾರೆ. ಅದಕ್ಕೆ ಇನ್ನೊಬ್ಬ ಪೈಲಟ್​ ‘ನಾನು ಮಾಡಿಲ್ಲ’ ಎಂದು ಹೇಳುತ್ತಾರೆ. ಇಂಧನ ಸ್ವಿಚ್​​ಗಳನ್ನು ಮರುಚಾಲನೆ ಮಾಡಿದರೂ, ಅವು ಸಕ್ರಿಯವಾಗಿಲ್ಲ ಎಂದು ತನಿಖಾ ವರದಿ ಹೇಳಿದೆ.

ವಿಮಾನ ಟೇಕ್ ಆಫ್ ಆದ 30 ಸೆಕೆಂಡುಗಳ ನಂತರ ಭೀಕರವಾಗಿ ದುರಂತಕ್ಕೀಡಾಯಿತು. ಅಪಘಾತ ಸ್ಥಳದಲ್ಲಿ ಇಂಧನದ ಮಾದರಿಯನ್ನು ಸಂಗ್ರಹಿಸಿ ಡಿಜಿಸಿಎ (ನಾಗರಿಕ ವಿಮಾನಯಾನ ನಿರ್ದೇಶನಾಲಯ) ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಯಿತು. ಅದರಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಎಎಐಬಿ ಮಾಹಿತಿ ನೀಡಿದೆ.

ವಿಮಾನವು 1:38:39 ಸೆಕೆಂಡ್​​ಗೆ ಟೇಕ್​​ಆಫ್​ ಆಯಿತು. 1:39:09 ಸೆಕೆಂಡ್​​ಗೆ ಅಪಘಾತಕ್ಕೀಡಾಗಿದೆ. 1:39:05 ಸೆಕೆಂಡ್​​ಗೆ ಪೈಲಟ್‌ಗಳಲ್ಲಿ ಒಬ್ಬರು ‘ಮೇಡೇ ಮೇಡೇ ಮೇಡೇ’ ಎಂದು ತುರ್ತು ಸಂದೇಶ ರವಾನಿಸಿದ್ದಾರೆ. ಇಷ್ಟು ಕಡಿಮೆ ಸಮಯದಲ್ಲಿ ಎಟಿಸಿಒ ಯಾವುದೇ ಪ್ರತಿಕ್ರಿಯೆಯನ್ನು ಪಡೆಯಲಿಲ್ಲ. ಅಷ್ಟರಲ್ಲಿ ವಿಮಾನ ನಿಲ್ದಾಣದ ಪಕ್ಕದ ಹಾಸ್ಟೆಲ್​ ಮೇಲೆ ಅಪ್ಪಳಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಟ್​​ ಆಫ್​ ಆದ ಇಂಧನ ಸ್ವಿಚ್​ಗಳು: ಕಟ್​ ಆಫ್​​ ಆಗಿದ್ದ ಎರಡು ಸ್ವಿಚ್​ಗಳನ್ನು ಆನ್​ ಮಾಡಿದರೂ, ಒಂದು ಎಂಜಿನ್​​ಗೆ ಅಲ್ಪ ಪ್ರಮಾಣದಲ್ಲಿ ಇಂಧನ ಸಾಗಿದೆ. ಇನ್ನೊಂದಕ್ಕೆ ಸಂಪೂರ್ಣವಾಗಿ ಇಂಧನ ಸರಬರಾಜಾಗಿಲ್ಲ. 30 ಸೆಕೆಂಡುಗಳ ಒಳಗೆ ವಿಮಾನವು ಪತನಗೊಂಡಿದೆ. ದುರಂತದ ಸ್ಥಳದಲ್ಲಿ ಸಿಕ್ಕ ಅವಶೇಷಗಳನ್ನು ಸಂಗ್ರಹಿಸಿ, ಅವುಗಳನ್ನು ಮರು ಜೋಡಿಸಿ ತನಿಖೆ ಮಾಡಲಾಗಿದೆ. ಇಂಧನ ಪೂರೈಕೆ ಆಗದೇ ಇರುವುದು ದುರಂತಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದೆ.

ಎಎಐಬಿ ಪ್ರಾಥಮಿಕವಾಗಿ ಸಿಕ್ಕ ಎಲ್ಲ ಆಧಾರಗಳ ಮೇಲೆ ಹೆಚ್ಚುವರಿ ವಿವರಗಳನ್ನು ಸಂಗ್ರಹಿಸುತ್ತಿದೆ. ಇಎಎಫ್​ಆರ್​ನಿಂದ ಡೌನ್‌ಲೋಡ್ ಮಾಡಲಾದ ದತ್ತಾಂಶವನ್ನು ವಿಶ್ಲೇಷಿಸಲಾಗುತ್ತಿದೆ. ತನಿಖೆಯ ಈ ಹಂತದಲ್ಲಿ, B787-8 ಮತ್ತು/ಅಥವಾ GE GEnx-1B ಎಂಜಿನ್ ನಿರ್ವಾಹಕರು ಮತ್ತು ತಯಾರಕರ ಮೇಲೆ ಯಾವುದೇ ಕ್ರಮ ಜರುಗಿಸುವ ಅಗತ್ಯವಿಲ್ಲ ಎಂದು ಹೇಳಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

Next Post

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

Related Posts

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ
ರಾಷ್ಟ್ರೀಯ ಸುದ್ದಿ

ಉಗ್ರರಿಂದ ವಶಪಡಿಸಿಕೊಂಡ ಸ್ಫೋಟಕ ಶ್ರೀನಗರ ಪೊಲೀಸ್‌ ಠಾಣೆಯಲ್ಲಿ ಸ್ಫೋಟ, 7 ಸಾವು, 27 ಮಂದಿಗೆ ಗಾಯ

November 15, 2025
34
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್
ರಾಷ್ಟ್ರೀಯ ಸುದ್ದಿ

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
46
Next Post
ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

Discussion about this post

Recent News

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
60
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
26
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d