• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

Coastal Times by Coastal Times
July 12, 2025
in ಕರಾವಳಿ
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು
42
VIEWS
WhatsappTelegramShare on FacebookShare on Twitter

ಸುಳ್ಯ: ತೀವ್ರ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿ ಯೊಬ್ಬರು ಗರ್ಭಿಣಿ ಎಂದು ವರದಿ ನೀಡಿ ಎಡವಟ್ಟು ಮಾಡಿಕೊಂಡ ಘಟನೆ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ವೈದ್ಯಾಧಿಕಾರಿಯು ಈ ವಿಚಾರವನ್ನು ಆಶಾ ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರರಿಗೆ ಹೇಳಿದ್ದು, ಈ ಸುಳ್ಳು ಮಾಹಿತಿ ಸಾರ್ವಜನಿಕವಾಗಿ ಹರಡಿದ ಕಾರಣ ನಮ್ಮ ಕುಟುಂಬಕ್ಕೆ ಭಾರೀ ಮಾನಸಿಕ ನೋವನ್ನುಂಟು ಮಾಡಿದೆ. ನನ್ನ ಮಗಳು ಈಗ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾಳೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಬಾಲಕಿಯ ಹೆತ್ತವರು ದಾಖಲೆಯೊಂದಿಗೆ ದೂರು ನೀಡಿದ್ದಾರೆ.

ಶಾಲೆಯ ಸಹಪಾಠಿಗಳು, ಶಿಕ್ಷಕರು ಮತ್ತು ಸ್ಥಳೀಯರು ಈ ಕುರಿತು ಮಾತು ಮಾತಿನಲ್ಲಿ ಬಾಲಕಿಯನ್ನು ಮಾನಹಾನಿ ಮಾಡುತ್ತಿದ್ದಾರೆ. ಅಪ್ರಾಪ್ತ ಮಗಳಿಗೆ ತಪ್ಪು ವೈದ್ಯಕೀಯ ಮಾಹಿತಿ ನೀಡುವುದು ಹಾಗೂ ಅವಳ ಖಾಸಗಿ ಮಾಹಿತಿಯನ್ನು ಅನಧಿಕೃತವಾಗಿ ಬಹಿರಂಗಪಡಿಸುವುದು ಪೋಕ್ಸೋ ಕಾಯಿದೆ ಹಾಗೂ ಐ.ಪಿ.ಸಿ. ಸೆಕ್ಷನ್ ಗಳ ಅಡಿಯಲ್ಲಿ ಗಂಭೀರ ಅಪರಾಧವಾಗಿರುತ್ತದೆ. ವೈದ್ಯಾಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಹಿನ್ನೆಲೆ: ಜಿಲ್ಲೆಗೆ ಒಳಪಟ್ಟ ಗ್ರಾಮವೊಂದರ 13 ವರ್ಷದ ಬಾಲಕಿಯನ್ನು ಜ್ವರದ ಹಿನ್ನೆಲೆ ಆಕೆಯ ಹೆತ್ತವರು ಚಿಕಿತ್ಸೆಗಾಗಿ ಜು.1ರಂದು ಸ್ಥಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಅಲ್ಲಿನ ಕರ್ತವ್ಯನಿರತ ವೈದ್ಯಾಧಿಕಾರಿ ಬಾಲಕಿಯನ್ನು ತಪಾಸಣೆ ಮಾಡಿ ಮೂತ್ರ ಮತ್ತು ರಕ್ತ ಪರೀಕ್ಷೆಗೆ ಲ್ಯಾಬ್‌ಗೆ ಚೀಟಿ ನೀಡಿದ್ದರು. ತಪಾಸಣೆಯ ನಂತರ ಹೊರ ರೋಗಿಗಳ ದಾಖಲಾತಿಯಲ್ಲಿ UPT Positive (ಗರ್ಭಿಣಿ) ಎಂದು ಬರೆದಿದ್ದು, ಇನ್ನಷ್ಟು ತಪಾಸಣೆಗಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ರೆಫರ್ ಮಾಡಿದ್ದರು. ಈ ವರದಿಯಿಂದ ತಬ್ಬಿಬ್ಬುಗೊಂಡ ಹತ್ತವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ಹೋಗಿ ಹೆಚ್ಚಿನ ಪರೀಕ್ಷೆ ಮಾಡಿಸಿದಾಗ ಮಗಳು ಗರ್ಭಿಣಿಯಾಗಿಲ್ಲ ಎಂಬ ವರದಿ ಲಭಿಸಿತ್ತು. ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಅಲ್ಲಿಯ ವೈದ್ಯರೂ ಕೂಡಾ ಗರ್ಭಧಾರಣೆಯ ಕುರಿತು ಯಾವುದೇ ದೃಢೀಕರಣ ನೀಡಿರಲಿಲ್ಲ.

ದೂರಿನ ಬೆನ್ನಲ್ಲೇ ಪರಿಶೀಲನೆಗೆ ಬಂದ ಅಧಿಕಾರಿಗಳ ತಂಡ: ದೂರಿನ ಗಂಭೀರತೆ ಅರಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್ ಆರ್ ತಿಮ್ಮಯ್ಯ ಅವರು ತನಿಖೆಗಾಗಿ ತಂಡವನ್ನು ರಚಿಸಿ ಸಂಬಂಧಪಟ್ಟ ಗ್ರಾಮಕ್ಕೆ ಕಳುಹಿಸಿದ್ದು, ಜುಲೈ 10 ರಂದು ಮಾಹಿತಿ ಸಂಗ್ರಹಿಸಿದ್ದಾರೆ. ಆರ್.ಸಿ.ಹೆಚ್ (ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ವಿಭಾಗ) ಡಾ. ರಾಜೇಶ್, ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿ ಡಾ. ದಿಲ್ಷಾದ್, ಜಿಲ್ಲಾ ಶುಶ್ರೂಷಣಾಧಿಕಾರಿ ಜೆಸಿ ಕೆವಿ, ತಾಲೂಕು ಆರೋಗ್ಯಾಧಿಕಾರಿ ಮೂವರು ಅಧಿಕಾರಿಗಳ ತಂಡದಲ್ಲಿದ್ದರು.

ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿದ್ದು, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ದಲಿತ ದೌರ್ಜನ್ಯ ಪ್ರಕರಣದ ಅಡಿ ಕೇಸು ದಾಖಲಿಸಬೇಕೆಂದು ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.

ಕೂಲಿ ಕಾರ್ಮಿಕನಾಗಿರುವ ಬಾಲಕಿಯ ತಂದೆ, ವೈದ್ಯಾಧಿಕಾರಿಯ ವರದಿಯಿಂದ ತಬ್ಬಿಬ್ಬುಗೊಂಡು ಸಹಾಯಕ್ಕಾಗಿ ಕಡಬದ ಭೀಮ್ ಆರ್ಮಿ ಸಂಘಟನೆಯನ್ನು ಸಂಪರ್ಕಿಸಿದ್ದರು. ಅವರಿಗೆ ಸೂಕ್ತ ಮಾಹಿತಿ ನೀಡಿ ದೂರು ನೀಡುವ ಬಗ್ಗೆ ತಿಳಿಸಿದ್ದೇವೆ. ಅದರಂತೆ ದೂರು ನೀಡಲಾಗಿದೆ. ಸಂಘಟನೆಯ ಪ್ರಮುಖರು ಬಾಲಕಿ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದೇವೆ. ಸುಳ್ಳು ವರದಿ ನೀಡಿ ಬಾಲಕಿಯ ಮಾನಹಾನಿಗೆ ಕಾರಣವಾದ ವೈದ್ಯಾಧಿಕಾರಿಯನ್ನು ಕೂಡಲೇ ಕರ್ತವ್ಯದಿಂದ ಅಮಾನತುಗೊಳಿಸಬೇಕು. ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟನೆ ಹೋರಾಟದ ಹಾದಿ ಹಿಡಿಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಭೀಮ್ ಆರ್ಮಿ ಸಂಘಟನೆಯ ಉಪಾಧ್ಯಕ್ಷ ರಾಘವ ಕಳಾರ ಎಚ್ಚರಿಕೆ ನೀಡಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

Next Post

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

Related Posts

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು
ಕರಾವಳಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು

July 11, 2025
144
ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಶಬೀರ್ ಬ್ರಿಗೇಡ್ ಮರು ಆಯ್ಕೆ
ಕರಾವಳಿ

ಬೆಂಗಳೂರು | ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಶಬೀರ್ ಬ್ರಿಗೇಡ್ ಮರು ಆಯ್ಕೆ

July 10, 2025
34
Next Post
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
19
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d