• About us
  • Contact us
  • Disclaimer
Saturday, January 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಕ್ಷಿಣ ಕನ್ನಡದಲ್ಲಿ ಪ್ಯಾನ್ಲ್ಯು ಕೋಪೆನಿಯಾ ವೈರಸ್ ಹಾವಳಿಗೆ ಸಾಯುತ್ತಿರುವ ಬೆಕ್ಕುಗಳು!

Coastal Times by Coastal Times
August 12, 2023
in ಕರಾವಳಿ
ದಕ್ಷಿಣ ಕನ್ನಡದಲ್ಲಿ ಪ್ಯಾನ್ಲ್ಯು ಕೋಪೆನಿಯಾ ವೈರಸ್ ಹಾವಳಿಗೆ ಸಾಯುತ್ತಿರುವ ಬೆಕ್ಕುಗಳು!
91
VIEWS
WhatsappTelegramShare on FacebookShare on Twitter

ಕಡಬ : ಫೆಲೈನ್ ಪ್ಯಾನ್ಲ್ಯುಕೋಪೆನಿಯಾ ವೈರಸ್‌ನಿಂದಾಗಿ ಮಂಗಳೂರು, ಕಡಬ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನೂರಾರು ಬೆಕ್ಕುಗಳು ಸಾವನ್ನಪ್ಪುತ್ತಿವೆ. ಈ ಕುರಿತು ಮಾಹಿತಿ ನೀಡಿರುವ ಸುಳ್ಯ ತಾಲೂಕು ವೈದ್ಯಾಧಿಕಾರಿ ಡಾ.ನಂದಕುಮಾರ್, “ಬೆಕ್ಕುಗಳ ಸಾವಿನ ಬಗ್ಗೆ ನಮಗೆ ಪಶುಸಂಗೋಪನಾ ಇಲಾಖೆಯಿಂದ ಯಾವುದೇ ಸುತ್ತೋಲೆಗಳು ಬಂದಿಲ್ಲ. ಬೆಕ್ಕು, ನಾಯಿ, ದನ, ಮಂಗ ಸೇರಿದಂತೆ ಪ್ರಾಣಿಗಳು ಕಚ್ಚಿದ್ದು ಅಥವಾ ಪರಚ್ಚಿದ್ದೂ ಅಂತ ಹೇಳಿ ನಿತ್ಯ ಕೆಲವರು ಬಂದು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳುತ್ತಾರೆ. ಆದರೆ, ಇತ್ತೀಚೆಗೆ ನಡೆಯುತ್ತಿರುವ ಬೆಕ್ಕುಗಳ ಸಾವಿನ ಬಗ್ಗೆ ಹಾಗೂ ಪ್ಯಾನ್ಲ್ಯುಕೋಪೆನಿಯಾ ವೈರಸ್​ಗೆ ಹೆದರಿ ಜನರು ಇಂಜೆಕ್ಷನ್ ತೆಗೆದುಕೊಳ್ಳುವ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ, ಈ ಕುರಿತು ಮಾಹಿತಿ ಪಡೆಯಲಾಗುವುದು” ಎಂದಿದ್ದಾರೆ.

ಈ ಬಗ್ಗೆ ಪಶುಸಂಗೋಪನಾ ಇಲಾಖೆ ಹೇಳುವುದೇನು?:  ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ, “ಫೆಲೈನ್ ಪ್ಯಾನ್ಲ್ಯುಕೋಪೆನಿಯಾ ವೈರಸ್ ಸೋಂಕು ಬೆಕ್ಕಿನ ದೇಹದಲ್ಲಿ ಬಿಳಿ ರಕ್ತ ಕಣಗಳ ಇಳಿಕೆಗೆ ಕಾರಣವಾಗುತ್ತದೆ. ಇದು ಫೆಲೈನ್ ಪ್ಯಾನ್ಲ್ಯುಕೋಪೆನಿಯಾ ವೈರಸ್ (ಎಫ್‌ಪಿಎಲ್‌ವಿ) ಎಂಬ ಪಾರ್ವೊವೈರಸ್ ಕುಟುಂಬದ ವೈರಾಣುವಿನಿಂದ ಉಂಟಾಗುತ್ತದೆ. ಬೆಕ್ಕುಗಳ ಪರಸ್ಪರ ಸಂಪರ್ಕದಿಂದ ಈ ಸೋಂಕು ಹರಡುತ್ತದೆ ಮತ್ತು ವ್ಯಾಕ್ಸಿನೇಷನ್ ಮಾತ್ರವೇ ಇದಕ್ಕೆ ಪರಿಹಾರ” ಎಂದರು.

ಏನೆಲ್ಲ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ಬೆಕ್ಕಿನಲ್ಲಿ ಹೆಚ್ಚಿನ ಜ್ವರ, ವಾಂತಿ, ಅತಿಸಾರ (ಹೆಚ್ಚಾಗಿ ರಕ್ತಸಿಕ್ತವಾಗಿ), ಹಸಿವಿನ ಕೊರತೆ, ಅನೋರೆಕ್ಸಿಯಾ ಮತ್ತು ನಿರ್ಜಲೀಕರಣದ ಲಕ್ಷಣಗಳು ಕಾಣಿಸುತ್ತಿದ್ದು, ಕೊನೆಗೆ ಸಾವನ್ನಪ್ಪುತ್ತಿವೆ. ಇದು ಬೆಕ್ಕು ಹೊರತುಪಡಿಸಿ ಇತರ ಪ್ರಾಣಿಗಳಿಗೆ ಅಥವಾ ಮನುಷ್ಯರಿಗೆ ಹರಡುವ ರೋಗವಲ್ಲ. ಆದರೂ ಮುನ್ನೆಚ್ಚರಿಕೆ ವಹಿಸಬೇಕು. ಹಲವು ಕಡೆ ಬೆಕ್ಕು ಕಚ್ಚಿದೆ, ಪರಚಿದೆ ಎಂದು ರೆಬೀಸ್ ಇಂಜೆಕ್ಷನ್ ತೆಗೆದುಕೊಳ್ಳುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರಾಣಿಗಳು ಕಚ್ಚಿದರೆ ಇಂಜೆಕ್ಷನ್ ತೆಗೆದುಕೊಳ್ಳುವುದು ಒಳ್ಳೆಯದೇ, ಇದರಿಂದ ಯಾವುದೇ ತೊಂದರೆ ಇಲ್ಲ. ಈ ಬಗ್ಗೆ ಆಯಾ ಭಾಗಗಳಲ್ಲಿರುವ ನಮ್ಮ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

“ಅಲೆಮಾರಿ ಮತ್ತು ಸಾಕು ಬೆಕ್ಕುಗಳು ಎಫ್‌ಪಿಎಲ್ ಸೋಂಕಿಗೆ ಬಲಿಯಾಗುತ್ತಿವೆ. ಸೋಂಕಿತ ಬೆಕ್ಕುಗಳಲ್ಲಿ ತೀವ್ರವಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಲಸಿಕೆ ಹಾಕಿದ ಬೆಕ್ಕುಗಳು ಸುರಕ್ಷಿತವಾಗಿವೆ. ವಯಸ್ಕ ಬೆಕ್ಕುಗಳು ತಮ್ಮ ದೇಹದ ರೋಗನಿರೋಧಕ ಶಕ್ತಿ ಅವಲಂಬಿಸಿಕೊಂಡು ಬದುಕಬಹುದು” ಎಂದು ಡಾ.ಅರುಣ್ ಕುಮಾರ್ ಶೆಟ್ಟಿ ಹೇಳಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಾದ್ ಸೈಮಾಚೊ : ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗ

Next Post

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತದ ಮುಡಿಗೆ ಕಿರೀಟ

Related Posts

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ
ಕರಾವಳಿ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
33
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ
ಕರಾವಳಿ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
23
Next Post
ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತದ ಮುಡಿಗೆ ಕಿರೀಟ

ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಭಾರತದ ಮುಡಿಗೆ ಕಿರೀಟ

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
33
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
47
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d