• About us
  • Contact us
  • Disclaimer
Monday, January 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,

Coastal Times by Coastal Times
August 12, 2024
in ಕ್ರೈಮ್ ನ್ಯೂಸ್
ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ಅಟ್ಟಾಡಿಸಿ ಬರ್ಬರ ಹತ್ಯೆ,
240
VIEWS
WhatsappTelegramShare on FacebookShare on Twitter

ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.

ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು. ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.

ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.

2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಉಳ್ಳಾಲ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್​ನಲ್ಲಿ ತರಬೇತಿ: ಅರ್ಜಿ ಆಹ್ವಾನ

Next Post

ಮಂಗಳೂರು: ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

Related Posts

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?
ಕ್ರೈಮ್ ನ್ಯೂಸ್

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
121
ಕಡಬ: ತಂದೆಗೆ ಚೂರಿ ಇರಿತ, ಮಗ ಗುಂಡೇಟಿಗೆ ಬಲಿ; ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯ
ಕ್ರೈಮ್ ನ್ಯೂಸ್

ಕಡಬ: ತಂದೆಗೆ ಚೂರಿ ಇರಿತ, ಮಗ ಗುಂಡೇಟಿಗೆ ಬಲಿ; ಕೌಟುಂಬಿಕ ಕಲಹ ಸಾವಿನಲ್ಲಿ ಅಂತ್ಯ

January 25, 2026
84
Next Post
ಮಂಗಳೂರು: ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

ಮಂಗಳೂರು: ಇಂದಿರಾ ಆಸ್ಪತ್ರೆಗೆ 25 ವರ್ಷಗಳ ಸಂಭ್ರಮ

Discussion about this post

Recent News

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
12
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
35
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d