• About us
  • Contact us
  • Disclaimer
Sunday, March 15, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆಗ್ನೆಸ್ ಕಾಲೇಜು ಮುಂದೆ ಹಾಡಹಗಲೇ ಕಾರಿನಲ್ಲಿ ಬಂದು ಮಹಿಳೆಯ ಸರ ಕಿತ್ತು ಪರಾರಿ

Coastal Times by Coastal Times
September 12, 2021
in ಕ್ರೈಮ್ ನ್ಯೂಸ್
ಆಗ್ನೆಸ್ ಕಾಲೇಜು ಮುಂದೆ ಹಾಡಹಗಲೇ ಕಾರಿನಲ್ಲಿ ಬಂದು ಮಹಿಳೆಯ ಸರ ಕಿತ್ತು ಪರಾರಿ
17
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.12: ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಗರದ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

ನಂಬರ್ ಪ್ಲೆಟ್ ಇಲ್ಲದ ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು ಹತ್ತಿರದಲ್ಲೇ ನಿಂತಿದ್ದರು. ಇನ್ನೊಬ್ಬಾತ ಮಹಿಳೆಯನ್ನು ಎಳೆದಾಡಿ ಸರ ಕೀಳಲು ಯತ್ನಿಸಿದ್ದಾನೆ.

ಮಧ್ಯಮ ವಯಸ್ಸಿನ ಮಹಿಳೆ ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದರು. ಕೈಯಲ್ಲಿದ್ದ ಬ್ಯಾಗಿನಲ್ಲಿ ಏನೋ ಹುಡುಕಾಡುತ್ತಾ ಹೋಗುತ್ತಿದ್ದಾಗ ಆಗಂತುಕರು ಅಡ್ಡಗಟ್ಟಿದ್ದರು.‌ ಮಹಿಳೆ ತನ್ನ ಸರ ಉಳಿಸಿಕೊಳ್ಳಲು ನೆಲದಲ್ಲಿ ಉರುಳಾಡಿದ್ದಾರೆ. ಆದರೂ ಆ ವ್ಯಕ್ತಿ ಬಿಡಲಿಲ್ಲ. ಇದೇ ವೇಳೆ, ಸರ ಕಿತ್ತು ಓಡುವ ದೃಶ್ಯವನ್ನು ಬಸ್ ನಿಲ್ದಾಣದಲ್ಲಿ ನಿಂತು ಯಾರೋ ಒಬ್ಬರು ಶೂಟ್ ಮಾಡಿದ್ದಾರೆ. ವಿಡಿಯೋ ಈಗ ವೈರಲ್ ಆಗಿದೆ. ವಿಡಿಯೋದಲ್ಲಿ ರಿಡ್ಜ್ ಕಾರು ಸಾಗುತ್ತಿದ್ದಂತೆ ಬೇರೊಬ್ಬ ಯುವಕ ಮತ್ತು ಇನ್ನೊಬ್ಬ ಯುವತಿ ರಕ್ಷಣೆಗೆ ಬಂದಿದ್ದು ಕಾರಿನಲ್ಲಿ ಪರಾರಿಯಾದ ವ್ಯಕ್ತಿಯ ಮೇಲೆ ದಾಳಿಗೆ ಮುಂದಾಗಿದ್ದಾರೆ. ಅಷ್ಟರಲ್ಲಿ ಕಾರಿನಲ್ಲಿದ್ದವರು ಓಡಿ ತಪ್ಪಿಸಿಕೊಂಡಿದ್ದಾರೆ.‌

ಇಷ್ಟಕ್ಕೂ ಅಲ್ಲಿ ಆಗಿದ್ದು ಅಣಕು ಕಾರ್ಯಾಚರಣೆ:

ವಿಡಿಯೋ ಪೊಲೀಸ್ ಗ್ರೂಪಿನಲ್ಲಿ ಬರುತ್ತಿದ್ದಂತೆ ಮಾಧ್ಯಮದ ವ್ಯಕ್ತಿಗಳು ನೋಡಿ ಹೌಹಾರಿದ್ದರು. ಹಾಡಹಗಲೇ ಈ ಪರಿ ಸರ ಕಿತ್ತು ಓಡಿದ್ದು ಮಂಗಳೂರಿನಲ್ಲಿ ಇದೇ ಮೊದಲು ಎನ್ನುವ ನೆಲೆಯಲ್ಲಿ ಆತಂಕ ವ್ಯಕ್ತವಾಗಿತ್ತು. ಕೊನೆಗೆ ಈ ವಿಡಿಯೋ ಬಗ್ಗೆ ಮಾಹಿತಿ ಕೇಳಿದಾಗ, ಒಟ್ಟು ಘಟನೆ ಪೊಲೀಸರ ಕಡೆಯಿಂದಲೇ ಸಾರ್ವಜನಿಕರ ಎಚ್ಚರಿಕೆ ಸಲುವಾಗಿ ನಡೆಯುತ್ತಿರುವ ಅಣಕು ಕಾರ್ಯಾಚರಣೆ ಎನ್ನುವುದು ತಿಳಿದುಬಂದಿದೆ. ಕಳೆದ ಒಂದು ವಾರದಲ್ಲಿ ಮಂಗಳೂರಿನ ಉರ್ವಾ ಮತ್ತು ಕದ್ರಿ ಠಾಣೆ ವ್ಯಾಪ್ತಿಯಲ್ಲಿ ಸರಣಿಯಂತೆ ಸರಗಳ್ಳತನ ನಡೆದಿದ್ದು ಅಮಾಯಕ ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕಿನಲ್ಲಿ ಬಂದವರು ಸರ ಕಿತ್ತು ಓಡಿದ ಘಟನೆ ನಡೆದಿತ್ತು. ಸರಕಳ್ಳರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಜನಜಾಗೃತಿಗೆ ಪೊಲೀಸರು ಈ ರೀತಿಯ ಪ್ರಹಸನ ಮಾಡುತ್ತಿದ್ದಾರೆ. ಈ ಮೂಲಕ ಒಬ್ಬಂಟಿ ಮಹಿಳೆಯರು ಬಂಗಾರ ಧರಿಸಿ ಹೋಗುವಾಗ ಜಾಗ್ರತೆ ವಹಿಸಬೇಕು ಎಂದು ಹೇಳುತ್ತಿದ್ದಾರೆ. ಅಲ್ಲದೆ, ಪೊಲೀಸರು ಈ ರೀತಿಯ ಘಟನೆ ಆದಾಗ ಯಾವ ರೀತಿ ಪತ್ತೆ ಕಾರ್ಯ ಮಾಡಬೇಕು ಎಂಬ ಬಗ್ಗೆ ಹಿರಿಯಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ‌

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜೊಮ್ಯಾಟೊದಿಂದ ಇನ್ನುಮುಂದೆ ಈ ಸೇವೆ ಇರುವುದಿಲ್ಲ ; ಸೆ.17ರಿಂದಲೇ ಅನ್ವಯ

Next Post

ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
138
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
Next Post
ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

ಹೊಯ್ಗೆ ಬಜಾರ್ ; ಸಮುದ್ರ ದಂಡೆಯಲ್ಲಿ ತೇಲುತ್ತಿದ್ದ ಯುವತಿಯ ಶವ !

Discussion about this post

Recent News

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
42
ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

March 14, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

ಶಿರಾಡಿ: ಕೆಎಸ್ಸಾರ್ಟಿಸಿ ಬಸ್‌ ಮತ್ತು ಕಾರು ಮುಖಾಮುಖಿಯಾಗಿ ಢಿಕ್ಕಿ ಮೂರು ಮಂದಿ ಸ್ಥಳದಲ್ಲೇ ಮೃತ್ಯು

March 14, 2026
ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

ಸುರತ್ಕಲ್; ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪರ್ಕ ಕಡಿತಗೊಳಿಸಿ ಅನ್ಯಾಯ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

March 14, 2026
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d