• About us
  • Contact us
  • Disclaimer
Monday, September 25, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಸಿನಿಮಾ

ಆಕ್ಷನ್ ಕ್ವೀನ್ ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ ತೆರೆಗೆ ಸಿದ್ಧ!

Coastal Times by Coastal Times
September 12, 2023
in ಸಿನಿಮಾ
ಆಕ್ಷನ್ ಕ್ವೀನ್ ಮಾಲಾಶ್ರೀ ಅಭಿನಯದ “ಮಾರಕಾಸ್ತ್ರ” ಚಿತ್ರ ತೆರೆಗೆ ಸಿದ್ಧ!
63
VIEWS
WhatsappTelegramShare on FacebookShare on Twitterinstagram

ಮಂಗಳೂರು, ಸೆ.12: ಮಾಲಾಶ್ರೀ ಅಭಿನಯದ ‘ಮಾರಕಾಸ್ತ್ರ’ ಸಿನೆಮಾ ಅಕ್ಟೋಬರ್ 6ರಂದು ಸಿನೆಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡದ ಪರವಾಗಿ ಡಾ.ವಿ.ನಟರಾಜ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಕಡೆಗಳಲ್ಲಿ ಚಿತ್ರೀಕರಣ ನಡೆದಿದ್ದು, ಚಿತ್ರದಲ್ಲಿ ಆರು ಹಾಡುಗಳಿವೆ. ಸಿನೆಮಾದ ಹಿಂದಿ ರೈಟ್ಸ್ 1.8 ಕೋಟಿ ರೂ.ಗೆ ಮಾರಾಟವಾಗಿದ್ದು, ಸ್ಯಾಟ್ ಲೈಟ್ ಹಕ್ಕು 1.25 ಕೋಟಿ ರೂ.ಗೆ ಆಫರ್ ಬಂದಿದೆ” ಎಂದು ಮಾಹಿತಿ ನೀಡಿದರು. ಚಿತ್ರದ ನಿರ್ದೇಶಕ ಗುರುಮೂರ್ತಿ ಸುನಾಮಿ ಮಾತನಾಡಿ, ಸಿನೆಮಾದಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶವಿದೆ. ಇದು ನನ್ನ 10 ವರ್ಷಗಳ ಕನಸು. ಸಿನಿಮಾ ನೋಡಿ ಆಶೀರ್ವದಿಸಿ ಎಂದರು.

ಈ ಸಿನಿಮಾದಲ್ಲಿ ಜೂ. ಅಪ್ಪು ಎಂದು ಕರೆಯಲ್ಪಡುವ ಆನಂದ್‌ ಆರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ‘ನಿರ್ದೇಶಕರು ನನಗೆ ಕಥೆ ಹೇಳಿದಾಗ ಈ ಚಿತ್ರದಲ್ಲಿ ನಟಿಸಬೇಕೆಂದು ಆಸೆಯಾಯಿತು. ನಾನು ಹಿಂದೆ ‘ಛಾಯಾ’ ಎಂಬ ಚಿತ್ರದಲ್ಲಿ ನಟಿಸಿದ್ದೆ. ಇದು ಎರಡನೇ ಚಿತ್ರ. ಈ ಸಂದರ್ಭದಲ್ಲಿ ನಾನು ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇನೆ. ಎಲ್ಲರೂ ನನ್ನನ್ನು ಅವರ ರೀತಿ ಕಾಣುವೆ, ಅವರನ್ನೇ ಅನುಕರಣೆ ಮಾಡುತ್ತೀಯಾ ಎನ್ನುತ್ತಾರೆ. ಆದರೆ ನನಗೆ ಹಾಗನಿಸುವುದಿಲ್ಲ’ ಎಂದಿದ್ದಾರೆ ನಾಯಕ ಆನಂದ್‌ ಆರ್ಯ.

ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಗುರುಮೂರ್ತಿ ಸುನಾಮಿ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ “ಮಾರಕಾಸ್ತ್ರ” ಅಂತಲೂ ಹೇಳಬಹುದು. ಈ ವಿಷಯದ ಕುರಿತು ನಮ್ಮ ಚಿತ್ರದ ಕಥೆ ಸಾಗುತ್ತದೆ. ಇದಕ್ಕೆ “ದೇಶದ ರಕ್ಷಣೆಗಾಗಿ” ಎಂಬ ಅಡಿಬರಹವಿದೆ. ನಾನು ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಮೊದಲ ಚಿತ್ರ’ ಎನ್ನುತ್ತಾರೆ ನಿರ್ದೇಶಕ ಗುರುಮೂರ್ತಿ ಸುನಾಮಿ.

‘ಇದೊಂದು ಕೌಟುಂಬಿಕ ಚಿತ್ರ‌. ಇದರಲ್ಲಿ ಆ್ಯಕ್ಷನ್‌, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲ ಅಂಶಗಳೂ ಇವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ’ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ ತಿಳಿಸಿದರು. ಚಿತ್ರವನ್ನು ನಟರಾಜ್ ನಿರ್ಮಿಸಿದ್ದಾರೆ. ಆನಂದ್ ಆರ್ಯ ಚಿತ್ರದ ನಾಯಕ. ಹರ್ಷಿಕಾ ಪೂಣಚ್ಚ, ಭರತ್ ಸಿಂಗ್, ಉಗ್ರಂ ಮಂಜು ಮೊದಲಾದವರು ನಟಿಸಿದ್ದಾರೆ. ಮಂಜು ಕವಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣ ಚಿತ್ರಕ್ಕಿದೆ.

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕ ಗುರುಮೂರ್ತಿ ಸುನಾಮಿ, ನಟ ಆನಂದ್ ಆರ್ಯ, ಕ್ರಿಯೇಟಿವ್ ಹೆಡ್ ಧನಕುಮಾರ್, ಮೈಕೋ ಆನಂದ್ ಮತ್ತಿತರರು ಉಪಸ್ಥಿತರಿದ್ದರು.

Related Posts

ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ
ಸಿನಿಮಾ

ಕೊಂಕಣಿಯ ಬಹು ನಿರೀಕ್ಷಿತ ಚಲನಚಿತ್ರ ಚಲನಚಿತ್ರ ‘ಅಸ್ಮಿತಾಯ್’ ಸೆಪ್ಟೆಂಬರ್ 15 ರಂದು ತೆರೆಗೆ

September 8, 2023
17
ಆ. 25ರಂದು ರಾಜ್‌ ಬಿ. ಶೆಟ್ಟಿ ಅವರ ನೇತೃತ್ವದ “ಟೋಬಿ’ ಕನ್ನಡ ಸಿನೆಮಾ ತೆರೆಗೆ
ಸಿನಿಮಾ

ಆ. 25ರಂದು ರಾಜ್‌ ಬಿ. ಶೆಟ್ಟಿ ಅವರ ನೇತೃತ್ವದ “ಟೋಬಿ’ ಕನ್ನಡ ಸಿನೆಮಾ ತೆರೆಗೆ

August 17, 2023
25

Recent News

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
96
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
140
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In