ಮಂಗಳೂರು: ಬೆಂಗಳೂರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಏಳು ಮಂದಿ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಹೆತ್ತವರು ಮತ್ತು ಪೊಲೀಸರು ಆತಂಕಗೊಂಡಿದ್ದಾರೆ.
ಹೆಸರಘಟ್ಟದ ಸೌಂದರ್ಯಾ ಲೇಔಟ್ ನಲ್ಲಿ ನಿವಾಸಿಗಳಾಗಿರುವ ಹತ್ತನೇ ಕ್ಲಾಸ್ ಕಲಿಯುತ್ತಿದ್ದ ಪರೀಕ್ಷಿತ್, ನಂದನ್ ಮತ್ತು ಕಿರಣ್ ಶನಿವಾರ ಬೆಳಗ್ಗೆ ಒಂದೇ ಸಮಯದಲ್ಲಿ ನಾಪತ್ತೆಯಾಗಿದ್ದಾರೆ. ಆನಂತರ ಹೆತ್ತವರು ಸಂಜೆವರೆಗೂ ಹುಡುಕಾಡಿ, ಬಗಲಗುಂಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ಮನೆಯಲ್ಲಿ ಓದಿನಲ್ಲಿ ಆಸಕ್ತಿ ಇಲ್ಲ. ಹಾಗಾಗಿ ಮನೆ ಬಿಟ್ಟು ಹೋಗುತ್ತಿದ್ದೇವೆಂದು ಬರೆದಿರುವ ಪತ್ರ ಸಿಕ್ಕಿದೆ.
ಸದ್ಯ ಮಂಗಳೂರಿನಲ್ಲಿ ಪತ್ತೆಯಾಗಿರುವ ಮಕ್ಕಳನ್ನು ಅಮೃತವರ್ಷಿಣಿ, ಭೂಮಿ, ಚೇತನ್, ರಾಯನ್ ಎಂದು ಪಾಂಡೇಶ್ವರ ಪೊಲೀಸರು ಖಚಿತ ಪಡಿಸಿದ್ದಾರೆ. ಇನ್ನು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ನಗರದಲ್ಲಿದ್ದ ಮಕ್ಕಳನ್ನು ರಿಕ್ಷಾ ಚಾಲಕರು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಇದೇ ಹಿನ್ನೆಲೆಯಲ್ಲಿ ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post