ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗೆ ಢಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿರುವ ಘಟನೆ ಮಂಗಳವಾರ(ನ.12ರಂದು) ನಡೆದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ.
ವಿಟ್ಲ ಕಬಕ ರಸ್ತೆಯ ಕಂಬಳಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ಢಿಕ್ಕಿಯಾಗುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ಕಳೆದುಕೊಂಡ ಕಾರು ಢಿಕ್ಕಿಯಾಗಿದೆ. ಬೈಕ್ ಚರಂಡಿಗೆ ಬಿದ್ದಿದ್ದು, ಕಾರು ರಸ್ತೆಯ ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಢಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಗೊಂಡಿದ್ದು ಚಾಲಕನನ್ನು ರಕ್ಷಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post