ಮಂಗಳೂರು: ಗಾಂಜಾ ಪ್ರಕರಣದಲ್ಲಿ ವೈದ್ಯ ಸೇರಿದಂತೆ ಮತ್ತೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 15 ತಲುಪಿದೆ. ವೈದ್ಯರು ಹಾಗೂ ವೈದ್ಯಕೀಯ ಕಾಲೇಜು ಗಾಂಜಾ ಪ್ರಕರಣದ ಬೆನ್ನತ್ತಿರುವ ಪೊಲೀಸರು ಓರ್ವ ವೈದ್ಯ ಹಾಗೂ ಓರ್ವ ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿಯನ್ನು ಸೆರೆ ಹಿಡಿದಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹೆಚ್ಚುತ್ತಿದೆ.
ಬೆಂಗಳೂರು ನಗರದ ಹಲ್ಸೂರು ನಿವಾಸಿ ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಡಿ ಮಾಡುತ್ತಿರುವ ವೈದ್ಯ ಬಾಲಾಜಿ (29) ಮತ್ತು ಆಂಧ್ರಪ್ರದೇಶದ ಅನಸ್ತೇಶಿಯಾ ಸ್ನಾತ್ತಕೋತ್ತರ ಪದವಿ ಪಡೆಯುತ್ತಿರುವ ರಾಘವ ದತ್ತಾ(28) ಬಂಧಿತ ಆರೋಪಿಗಳಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮಾತನಾಡಿ, ಈ ಪ್ರಕರಣದಲ್ಲಿ ಬಂಧಿತ ವೈದ್ಯ ಡಾ.ಬಾಲಾಜಿ ಫಳ್ನೀರ್ನಲ್ಲಿ ವಾಸ್ತವ್ಯವಿದ್ದ. ಈತ ತಾನು ವಾಸ್ತವ್ಯವಿರುವ ಮನೆಯಲ್ಲಿಯೇ ಸಣ್ಣಮಟ್ಟಿನ ಪಾರ್ಟಿ ಆಯೋಜಿಸಿ ವಿದ್ಯಾರ್ಥಿಗಳು ಹಾಗೂ ಸ್ನೇಹಿತರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದನು. ತನಿಖೆ ಮುಂದುವರಿದಿದ್ದು, ಇನ್ನೂ ಕೆಲವರು ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದ್ದು ಶೀಘ್ರದಲ್ಲೇ ಅವರನ್ನೂ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಿಶೋರಿಲಾಲ್ ಬಂಟ್ಸ್ ಹಾಸ್ಟೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು ಗಾಂಜಾ, ಎಂಡಿಎಂಎ ಡ್ರಗ್ಸ್ ಅನ್ನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ. ಆನಂತರ ವಿದ್ಯಾರ್ಥಿಗಳು ಮತ್ತು ವೈದ್ಯರೇ ಗಾಂಜಾ, ಇನ್ನಿತರ ಡ್ರಗ್ಸ್ ಅನ್ನು ಇತರರಿಗೂ ಪೂರೈಸಲು ಆರಂಭಿಸಿದ್ದರು. ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಜಾಲದ ಬೆನ್ನತ್ತಿ ಒಟ್ಟು 15 ಮಂದಿಯನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post