• About us
  • Contact us
  • Disclaimer
Friday, June 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಮಗ, ಆಧಾರ್‌ ಕಾರ್ಡ್‌ನಿಂದ ತಾಯಿ ಮಡಿಲು ಸೇರಿದ.

Coastal Times by Coastal Times
March 13, 2022
in ರಾಜ್ಯ
ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮೂಕ ಮಗ, ಆಧಾರ್‌ ಕಾರ್ಡ್‌ನಿಂದ ತಾಯಿ ಮಡಿಲು ಸೇರಿದ.
49
VIEWS
WhatsappTelegramShare on FacebookShare on Twitter

ಬೆಂಗಳೂರು: ಮಾತು ಬಾರದ ಮಗ ಸಂತೆಯಲ್ಲಿ ಕಳೆದು ಹೋದಾಗ ಆ ತಾಯಿ ದಿಕ್ಕೇ ತೋಚದಾಗಿದ್ದಳು. ಕಂಡ ಕಂಡಲ್ಲೆಲ್ಲಾ ಹುಡುಕಾಡಿ ಕೊನೆಗೆ ಠಾಣೆಗೆ ದೂರು ನೀಡಿದ್ದಳು. ವರ್ಷಗಳು ಉರುಳಿದರೂ ಮಗ ಕಾಣದೆ ಕಂಗಾಲಾಗಿದ್ದ ಆಕೆಯ ಮೊಗದಲ್ಲಿ ಈಗ ಸಂತಸ ಮೇಳೈಸಿದೆ. ಆಧಾರ್‌ ಕಾರ್ಡ್‌ ಮಾಹಿತಿಯಿಂದಾಗಿ ನಾಗಪುರದಲ್ಲಿದ್ದ ಮಗ ಅಮ್ಮನ ಮಡಿಲು ಸೇರಿದ್ದಾನೆ.

ಸಿಂಗನಾಯಕನಹಳ್ಳಿ ನಿವಾಸಿ ಪಾರ್ವತಮ್ಮ ತರಕಾರಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. 2016 ರ ಮಾರ್ಚ್‌ನಲ್ಲಿ ಎಂದಿನಂತೆ ವ್ಯಾಪಾರಕ್ಕೆ ಹೋಗಿದ್ದ ಅವರು 12 ವರ್ಷದ ಮಗ ಭರತ್‌ಕುಮಾರನನ್ನೂ ಜೊತೆಗೆ ಕರೆದುಕೊಂಡು ಹೋಗಿದ್ದರು. ಆಗ ಕಾಣೆಯಾಗಿದ್ದ ಭರತ್‌, ರೈಲು ಏರಿ ನಾಗಪುರ ತಲುಪಿದ್ದ. ನಿಲ್ದಾಣದಲ್ಲಿ ದಿಕ್ಕು ಕಾಣದೆ ಕಂಗೆಟ್ಟು ಓಡಾಡುತ್ತಿದ್ದ ಆತನನ್ನು ರೈಲ್ವೆ ಭದ್ರತಾ ಪಡೆ ಅಧಿಕಾರಿಗಳು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದರು.

6 ವರ್ಷಗಳಿಂದ ಪುನರ್ವಸತಿ ಕೇಂದ್ರದಲ್ಲೇ ಇದ್ದ ಭರತ್‌ಗೆ ಆಧಾರ್‌ ಕಾರ್ಡ್‌ ಮಾಡಿಸಲು ಅಧಿಕಾರಿಗಳು ತೀರ್ಮಾನಿಸಿದ್ದರು. ಈ ವರ್ಷದ ಜನವರಿಯಲ್ಲಿ ಆಧಾರ್‌ ಸೇವಾ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದರು. ಆತನ ಹೆಸರಿನಲ್ಲಿ ಈಗಾಗಲೇ ಆಧಾರ್‌ ಕಾರ್ಡ್‌ ಇರುವುದು ಆಗ ಗೊತ್ತಾಗಿತ್ತು. ಪುನರ್ವಸತಿ ಕೇಂದ್ರದ ಅಧಿಕಾರಿ ಮಹೇಶ್‌, ಭರತ್‌ ಪೋಷಕರ ವಿಳಾಸ ಪತ್ತೆಗೆ ನೆರವಾಗುವಂತೆ ಸೇವಾ ಕೇಂದ್ರದ ಅಧಿಕಾರಿಗಳಿಗೆ ವಿನಂತಿಸಿದ್ದರು.

ಈಗಾಗಲೇ ಚಾಲ್ತಿಯಲ್ಲಿರುವ ಬಿ.ಭರತ್‌ಕುಮಾರ್‌ ಹೆಸರಿನ ವ್ಯಕ್ತಿಯ ಬೆರಳಚ್ಚು ಭರತ್‌ನ ಬೆರಳಚ್ಚಿಗೆ ಹೋಲಿಕೆಯಾಗುತ್ತಿತ್ತು. ಆಧಾರ್‌ ಕಾರ್ಡ್‌ ಪರಿಶೀಲಿಸಿದಾಗ  ಪಾರ್ವತಮ್ಮನವರ ಮೊಬೈಲ್‌ ಸಂಖ್ಯೆ ಲಭಿಸಿತ್ತು.

‘ಮಗನಿಗೆ ಹುಟ್ಟಿನಿಂದಲೇ ಮಾತು ಬರುತ್ತಿರಲಿಲ್ಲ. ಆತನನ್ನು ಬಹಳ ಅಕ್ಕರೆಯಿಂದ ಸಾಕಿದ್ದೆ. ಶನಿವಾರ ಶಾಲೆಗೆ ರಜೆ ಇದ್ದಿದ್ದರಿಂದ ಸಂತೆಗೆ ಕರೆದುಕೊಂಡು ಹೋಗಿದ್ದೆ. ಚಾಕೊಲೇಟ್‌ ಬೇಕು ಅಂದಿದ್ದಕ್ಕೆ 20 ರೂಪಾಯಿ ಕೊಟ್ಟಿದ್ದೆ. ಅಂಗಡಿಗೆಂದು ಹೋದವನು ಸುಮಾರು ಹೊತ್ತಾದರೂ ಮರಳಿ ಬರಲಿಲ್ಲ. ಗಾಬರಿಯಿಂದ ಎಲ್ಲೆಡೆ ಹುಡುಕಾಡಿದರೂ ಸುಳಿವು ಸಿಗಲಿಲ್ಲ. ದಿಕ್ಕು ಕಾಣದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದೆ’ ಎಂದು ಪಾರ್ವತಮ್ಮ  ತಿಳಿಸಿದರು.

‘ಪ್ರತಿ ಕ್ಷಣವೂ ಆತನ ನೆನಪು ಕಾಡುತ್ತಿತ್ತು. ಆತ ಎಲ್ಲಿದ್ದಾನೊ, ಹೇಗಿದ್ದಾನೊ ಎಂಬ ಕೊರಗಿನಲ್ಲಿ ಕುಗ್ಗಿ ಹೋಗಿದ್ದೆ. ಸರಿಯಾಗಿ ಊಟ ಸೇರುತ್ತಿರಲಿಲ್ಲ. ನಿದ್ರೆಯೂ ಬರುತ್ತಿರಲಿಲ್ಲ. ಆತನಿಗಾಗಿ ಸುತ್ತಾಡದೆ ಇರುವ ದೇವಸ್ಥಾನಗಳಿಲ್ಲ. ಮಗ ನಾಗಪುರದಲ್ಲಿ ಇರುವ ಮಾಹಿತಿ ಸಿಕ್ಕಾಗ ಸಂತಸಕ್ಕೆ ಪಾರವೇ ಇರಲಿಲ್ಲ. ಇದೇ 7 ರಂದು ವಿಡಿಯೊ ಕರೆ ಮೂಲಕ ಆತನ ಜೊತೆ ಮಾತನಾಡಿದ್ದೆ. ನನ್ನ ಮುಖ ಕಂಡೊಡನೆ ಆತ ಬಿಕ್ಕಿ ಬಿಕ್ಕಿ ಅಳಲಾರಂಭಿಸಿದ್ದ’ ಎಂದು ಭಾವುಕರಾದರು.

‘ನಾಗಪುರಕ್ಕೆ ಹೋಗಿ ಮಗನನ್ನು ಕರೆದುಕೊಂಡು ಬರಲು ಬೇಕಿದ್ದ ಎಲ್ಲಾ ವ್ಯವಸ್ಥೆಯನ್ನೂ ಶಾಸಕ ಎಸ್‌.ಆರ್.ವಿಶ್ವನಾಥ್‌ ಮಾಡಿದ್ದರು. ಪೊಲೀಸರು ಹಾಗೂ ಪುನರ್ವಸತಿ ಕೇಂದ್ರದ ಅಧಿಕಾರಿಗಳ ಸಹಕಾರ ಮರೆಯುವಂತಿಲ್ಲ. ಪುನರ್ವಸತಿ ಕೇಂದ್ರದಲ್ಲಿ ನನ್ನನ್ನು ಕಂಡೊಡನೆಯೇ ಮಗ ಓಡಿಬಂದು ತಬ್ಬಿಕೊಂಡ. ಆಳೆತ್ತರ ಬೆಳೆದಿರುವ ಆತನನ್ನು ಕಂಡು ನನ್ನ ಕಣ್ಣುಗಳಲ್ಲೂ ನೀರು ತುಂಬಿತು’ ಎಂದು ಗದ್ಗದಿತರಾದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಬೈಕ್ ಸ್ಟಂಟ್, ವೀಲಿಂಗ್, ಇನ್ಸ್ ಟಾ ಗ್ರಾಮ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಸಿಕ್ಕಿಬಿದ್ದ ಎಂಟು ಪೋಕರಿಗಳು, ಪೊಲೀಸರ ವಶಕ್ಕೆ

Next Post

ಕಾರ್ಕಳ: ಕಟೀಲ್ದಪ್ಪೆ ಉಳಾಲ್ದಿನ ” ಸನ್ನಿಧಿ ” ತುಳು ಭಕ್ತಿ ಗೀತೆ ಧ್ವನಿ ಸುರುಳಿ ಇಂದು ಬಿಡುಗಡೆ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
22
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
52
Next Post
ಕಾರ್ಕಳ: ಕಟೀಲ್ದಪ್ಪೆ ಉಳಾಲ್ದಿನ ” ಸನ್ನಿಧಿ ” ತುಳು ಭಕ್ತಿ ಗೀತೆ ಧ್ವನಿ ಸುರುಳಿ ಇಂದು ಬಿಡುಗಡೆ

ಕಾರ್ಕಳ: ಕಟೀಲ್ದಪ್ಪೆ ಉಳಾಲ್ದಿನ " ಸನ್ನಿಧಿ " ತುಳು ಭಕ್ತಿ ಗೀತೆ ಧ್ವನಿ ಸುರುಳಿ ಇಂದು ಬಿಡುಗಡೆ

Discussion about this post

Recent News

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
33
ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
159
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಸಾಮೂಹಿಕ ರಾಜೀನಾಮೆ ಹಾಗೂ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

June 12, 2026
ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

ಧರ್ಮಸ್ಥಳ : 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಸತೀಶ್, ಸಲೀಂ ಆಗಿ ಪತ್ತೆ! ಸಾಯುವ ಮುನ್ನ ಮಗನ ನೋಡಬೇಕೆಂಬ ತಾಯಿ ಕನಸು ನನಸು!

June 11, 2026
ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

ಮಂಗಳೂರಲ್ಲಿ “ಕೆಲವೇ ತಿಂಗಳಲ್ಲಿ ಹಣ ಡಬಲ್ ”, ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ: 5-6 ತಿಂಗಳಾದರೂ ಹಣ ವಾಪಸ್‌ ಇಲ್ಲ

June 10, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d