• About us
  • Contact us
  • Disclaimer
Monday, February 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಡ್ಯದಲ್ಲಿ ಮೋದಿ ಮೇಲೆ ಅಭಿಮಾನದ ಹೂಮಳೆ ; 118 ಕಿ. ಮೀ ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಿದ ಪ್ರಧಾನಿ ನಮೋ

Coastal Times by Coastal Times
March 13, 2023
in ರಾಜ್ಯ
ಮಂಡ್ಯದಲ್ಲಿ ಮೋದಿ ಮೇಲೆ ಅಭಿಮಾನದ ಹೂಮಳೆ ; 118 ಕಿ. ಮೀ ದಶಪಥ  ಹೆದ್ದಾರಿ ಲೋಕಾರ್ಪಣೆ ಮಾಡಿದ ಪ್ರಧಾನಿ ನಮೋ
46
VIEWS
WhatsappTelegramShare on FacebookShare on Twitter

ಮಂಡ್ಯ: ನಗರದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1.8 ಕಿ.ಮೀ ರೋಡ್‌ ಶೋ ನಡೆಸಿ  ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದರು. ತಮ್ಮ ಮೇಲೆ ಬಿದ್ದ ಅಭಿಮಾನದ ಹೂವಿನ ರಾಶಿಯನ್ನು ಮತ್ತೆ ಜನರೆಡೆಗೇ ಎರಚಿ ಸಂಭ್ರಮ ದುಪ್ಪಟ್ಟುಗೊಳಿಸಿದರು.

ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಈ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ರೋಡ್‌ ಶೋ ಒಂದು ಬದಿಯಷ್ಟೇ ನಡೆದರೂ, ಎರಡೂ ಬದಿಯಲ್ಲಿ ಜನ ಬೆಳಿಗ್ಗೆಯಿಂದಲೇ ಕಾತರದಿಂದ ಬಿಸಿಲಿನಲ್ಲೇ ಕಾಯುತ್ತಿದ್ದರು.

ಶ್ವೇತವರ್ಣದ ಜುಬ್ಬಾ ಧರಿಸಿದ್ದ ಪ್ರಧಾನಿ ಹಸನ್ಮುಖರಾಗಿ ಜನರತ್ತ ಕೈಬೀಸುತ್ತಾ ಮುಂದೆ ಸಾಗಿದರು. ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ‘ಭಾರತ್‌ ಮಾತಾ ಕೀ ಜೈ’, ‘ಜೈ ಶ್ರೀ ರಾಮ್‌’ ಎಂದು ಘೋಷಣೆಗಳನ್ನು ಮೊಳಗಿಸಿದರು. ಬೆಳಿಗ್ಗೆ 11.40ಕ್ಕೆ ರೋಡ್‌ಶೋ ಆರಂಭಿಸಿದ ಅವರು 20 ನಿಮಿಷಗಳ ಕಾಲ ಜನರೊಂದಿಗಿದ್ದರು. ನಂದಾ ಟಾಕೀಸ್‌ ಬಳಿ ರೋಡ್‌ ಶೋ ಮುಗಿಯಿತು.

ಮಧ್ಯಾಹ್ನ 12 ಗಂಟೆಗೆ ನಗರದಿಂದ ಹೊರಟ ಪ್ರಧಾನಿ ಅಮರಾವತಿ ಹೋಟೆಲ್‌ ಬಳಿ ಬೆಂಗಳೂರು– ಮೈಸೂರು ದಶಪಥ ಹೆದ್ದಾರಿ ಪ್ರವೇಶಿಸಿದರು. ತಾಲ್ಲೂಕಿನ ಹನಕೆರೆ ಬಳಿ ಕಾರಿಳಿದು ಅವರು ನಡಿಗೆ ಮೂಲಕ ಹೆದ್ದಾರಿ ಉದ್ಘಾಟಿಸಲೆಂದೇ ಕೆಂಪು ಹಾಸು ಹಾಸಿದ್ದು ವಿಶೇಷವಾಗಿತ್ತು. 50 ಮೀಟರ್‌ಗಳವರೆಗೆ ಹೆಜ್ಜೆಹಾಕಿ ಅವರು ವಿಧ್ಯುಕ್ತವಾಗಿ ಬೆಂಗಳೂರು– ಮೈಸೂರು ದಶಪಥ ಹೆದ್ದಾರಿಗೆ ಚಾಲನೆ ನೀಡಿದರು.

ರಸ್ತೆಯ ಒಂದು ಬದಿಯಲ್ಲಿ ಪ್ರಧಾನಿ ನಡೆದರೆ ಇನ್ನೊಂದು ಬದಿಯಲ್ಲಿ ಜಾನಪದ ಕಲಾ ತಂಡಗಳು ಪ್ರದರ್ಶನ ನೀಡಿದ್ದು ಗಮನ ಸೆಳೆಯಿತು. ಬಳಿಕ ಮದ್ದೂರು ತಾಲ್ಲೂಕು ಗೆಜ್ಜಲಗೆರೆ ಕಾಲೊನಿ ಬಳಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಂಡರು.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟಿಸಿದ ಪ್ರಧಾನಿ ಮೋದಿ ; ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು.

And here he is …. PM Sri @narendramodi holds road show in Mandya . First PM to visit district after 41 years . People’s love & affection is palpable . https://t.co/LU5ZbBool1

— B L Santhosh (@blsanthosh) March 12, 2023

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಎಮ್ ಸಿ ಸಿ ಬ್ಯಾಂಕ್ ನಲ್ಲಿ ಮಹಿಳಾ ದಿನಾಚರಣೆ

Next Post

“ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ” ದ ಉದ್ಘಾಟನೆ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಾಕ್ರಮ

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
58
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
131
Next Post
“ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ” ದ ಉದ್ಘಾಟನೆ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಾಕ್ರಮ

"ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ" ದ ಉದ್ಘಾಟನೆ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಾಕ್ರಮ

Discussion about this post

Recent News

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
17
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
93
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

T20 ವಿಶ್ವಕಪ್: ಪಂದ್ಯ ಬಹಿಷ್ಕರಿಸುವ ನಾಟಕವಾಡಿದ್ದ ಪಾಕ್​ಗೆ ಭಾರೀ ಮುಖಭಂಗ; ಭಾರತಕ್ಕೆ 61 ರನ್ ಜಯ

February 16, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಗಂಡನ ಪ್ರೇಮ, ಪ್ರೀತಿ, ಪ್ರಣಯದಾಟವನ್ನು ಸ್ವತಃ ಪತ್ನಿಯೇ ಬಟಾ ಬಯಲು

February 15, 2026
ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದ ಅತೀ ಕಿರಿಯ ಅಂಗಾಂಗ ದಾನಿ ಅಲಿನ್ ಶೆರಿನ್ !

February 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d