• About us
  • Contact us
  • Disclaimer
Sunday, December 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್

Coastal Times by Coastal Times
March 13, 2024
in ರಾಜಕೀಯ
ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬ್ರಿಜೇಶ್ ಚೌಟರಿಗೆ ಬಿಜೆಪಿಯಿಂದ ಟಿಕೆಟ್
64
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.13: ಭಾರತೀಯ ಭೂ ಸೇನೆಯ ನಿವೃತ್ತ ಅಧಿಕಾರಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯ ಟಿಕೆಟ್ ಬಗ್ಗೆ ಕೆಲವು ದಿನದಿಂದ ಇದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿವೆ. ಈ ಮಧ್ಯೆ ಬ್ರಿಜೇಶ್ ಚೌಟರ ಆಯ್ಕೆಯು ಬಿಜೆಪಿ ವಲಯದಲ್ಲೇ ಅಚ್ಚರಿ ವ್ಯಕ್ತವಾಗಿವೆ.

ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯ, ದೇಶದ ಎಲ್ಲ ನಾಯಕರನ್ನು ಉಲ್ಲೇಖಿಸಿ ಅಭಿನಂದನೆ ಹೇಳಿದ ಬೃಜೇಶ್ ಚೌಟ, ಈ ಮಣ್ಣಿಗೆ, ದೈವ ದೇವರ ತುಳುನಾಡಿಗೆ ವಿಶೇಷ ಶಕ್ತಿಯಿದೆ. ದಕ್ಷಿಣ ಕನ್ನಡ ಎಂಬ ಅದ್ಭುತ ನೆಲದಲ್ಲಿ ಬಿಜೆಪಿ ಟಿಕೆಟ್ ಕೊಟ್ಟಿರುವುದಕ್ಕೆ ಋಣಿಯಾಗಿದ್ದೇನೆ. ಅಸಂಖ್ಯಾತ ದೇವ ದುರ್ಲಭ ಕಾರ್ಯಕರ್ತರಿಗೆ ಋಣಿಯಾಗಿದ್ದೇನೆ ಎಂದರು.

ಬ್ರಿಜೇಶ್ ಚೌಟ ತನ್ನ ಕಾಲೇಜು ದಿನಗಳಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ)ನಲ್ಲಿ ನಾಯಕತ್ವಕ್ಕಾಗಿ ಹೆಸರುವಾಸಿಯಾಗಿದ್ದರು. ಅವರು ಪ್ರಾಥಮಿಕ ಶಿಕ್ಷಣವನ್ನು ಮಂಗಳೂರಿನ ಮಿಲಾಗ್ರಿಸ್ ಶಾಲೆಯಲ್ಲಿ ಪಡೆದರು. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಶಿಕ್ಷಣ ಪೂರ್ಣಗೊಳಿಸಿದ್ದರು. ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ನಲ್ಲಿ ವ್ಯಾಸಂಗ ಮಾಡಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಎನ್‌ಸಿಸಿಯಲ್ಲಿ ಅತ್ಯುತ್ತಮ ಕೆಡೆಟ್ ಆಗಿ ಗುರುತಿಸಿಕೊಂಡಿದ್ದು, ದಿಲ್ಲಿಯ ಗಣರಾಜ್ಯ ಪರೇಡ್‌ನಲ್ಲಿ ಭಾಗವಹಿಸಿದ್ದರು. ಪದವಿಯ ಬಳಿಕ ಬ್ರಿಜೇಶ್ ಚೌಟ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಎಕ್ಸಾಮಿನೇಷನ್ (ಸಿಡಿಸಿ) ಉತ್ತೀರ್ಣರಾದರು. ಬಳಿಕ ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡಮಿಯಲ್ಲಿ (ಒಟಿಎ) ತರಬೇತಿ ಪಡೆದರು. ಪ್ರತಿಷ್ಠಿತ 8 ಗೂರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ವಿವಿಧ ಪ್ರದೇಶಗಳಲ್ಲಿ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ.

ಸ್ವಯಂ ನಿವೃತ್ತಿಯ ನಂತರ 2011ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. 2013ರಲ್ಲಿ ಬಿಜೆಪಿ ಯುವ ಮೋರ್ಚಾದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 2016ರಿಂದ 2019ರವರೆಗೆ ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು.

ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು 2015ರಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳದ ನಿಷೇಧದ ವಿರುದ್ಧದ ಪ್ರತಿಭಟನೆಯನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಗಳೂರು ಕಂಬಳವನ್ನು ಹಲವು ವರ್ಷಗಳಿಂದ ಆಯೋಜಿಸಿ ಗಮನ ಸೆಳೆದಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಟಿ20 ವಿಶ್ವಕಪ್ ಟೂರ್ನಿಯಿಂದ ವಿರಾಟ್ ಕೊಹ್ಲಿಗೆ ಕೊಕ್ ಸಾಧ್ಯತೆ

Next Post

ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
49
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
40
Next Post
ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ

ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪದಗ್ರಹಣ

Discussion about this post

Recent News

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
36
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
46
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

48 ಗಂಟೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಇಂಡಿಗೋ ಸಂಸ್ಥೆಗೆ ಕೇಂದ್ರ ಸೂಚನೆ

December 6, 2025
ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮೃತ್ಯು

December 6, 2025
ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

ಮಂಗಳೂರು: ಹಣ ಹೂಡಿಕೆ ನೆಪದಲ್ಲಿ ತರಕಾರಿ, ಹಣ್ಣು ವ್ಯಾಪಾರಿಗೆ 33.11 ಲಕ್ಷ ರೂ. ವಂಚನೆ

December 6, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d