• About us
  • Contact us
  • Disclaimer
Monday, December 22, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಆ್ಯಸಿಡ್ ದಾಳಿ ಆರೋಪಿ ಬಂಧನ, ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್!! ಭಕ್ತರ ವೇಷದಲ್ಲಿ ಪೊಲೀಸರಿಂದ ಸೆರೆ

Coastal Times by Coastal Times
May 13, 2022
in ಕ್ರೈಮ್ ನ್ಯೂಸ್, ರಾಜ್ಯ
ಆ್ಯಸಿಡ್ ದಾಳಿ ಆರೋಪಿ ಬಂಧನ, ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್!! ಭಕ್ತರ ವೇಷದಲ್ಲಿ ಪೊಲೀಸರಿಂದ ಸೆರೆ
102
VIEWS
WhatsappTelegramShare on FacebookShare on Twitter

ಬೆಂಗಳೂರು: 24 ವರ್ಷದ ಯುವತಿ ಮೇಲೆ ಆ್ಯಸಿಡ್ ಎರಚಿದ್ದ ನಾಗೇಶ್, ತಮಿಳುನಾಡಿಗೆ ಹೋಗಿ ‘ರಮಣ’ ಆಶ್ರಮದಲ್ಲಿ ಸ್ವಾಮೀಜಿ ಆಗಿ ವೇಷ ಬದಲಿಸಿಕೊಂಡಿದ್ದ. ಭಕ್ತರ ವೇಷದಲ್ಲಿ ಆಶ್ರಮಕ್ಕೆ ಹೋಗಿದ್ದ ಪೊಲೀಸರು, ನಾಗೇಶ್‌ನನ್ನು ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 28ರಂದು ಕೃತ್ಯ ಎಸಗಿ ಪರಾರಿಯಾಗಿದ್ದ ನಾಗೇಶ್, ತಮಿಳುನಾಡಿನ ಹಲವು ಊರುಗಳಲ್ಲಿ ಸುತ್ತಾಡಿದ್ದ. ಪೊಲೀಸರು ತನ್ನನ್ನು ಹುಡುಕುತ್ತಿದ್ದಾರೆಂಬುದನ್ನು ತಿಳಿದಿದ್ದ ನಾಗೇಶ್, ಆಶ್ರಮವೊಂದಕ್ಕೆ ಸೇರಿದ್ದ. ಸ್ವಾಮೀಜಿ ಆಗಿ ಬದಲಾಗಿದ್ದ ನಾಗೇಶ್‌ಗೆ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಪಶ್ಚಿಮ ವಿಭಾಗದ ಪೊಲೀಸರಿಗೆ ಆರೋಪಿ ಬಗ್ಗೆ ಮಾಹಿತಿ ಸಿಕ್ಕಿತ್ತು. ‘ಆಶ್ರಮಕ್ಕೆ ನೇರವಾಗಿ ಹೋಗಿ ಸ್ವಾಮೀಜಿಯನ್ನು ಬಂಧಿಸಿದರೆ ಭಕ್ತರು ತರಾಟೆಗೆ ತೆಗೆದುಕೊಳ್ಳುತ್ತಾರೆ’ ಎಂಬುದನ್ನು ತಿಳಿದಿದ್ದ ಪೊಲೀಸರು, ಆರಂಭದಲ್ಲಿ ಭಕ್ತರ ವೇಷದಲ್ಲೇ ಆಶ್ರಮಕ್ಕೆ ಪ್ರವೇಶಿಸಿದ್ದರು. ಕೆಲದಿನ ನಾಗೇಶ್‌ ವರ್ತನೆ ಹಾಗೂ ಆತನ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದರು. ನಾಗೇಶ್‌ ಎಂಬುದು ಖಾತ್ರಿಯಾಗುತ್ತಿದ್ದಂತೆ ತಮಿಳುನಾಡು ಪೊಲೀಸರ ಸಹಾಯದಿಂದ ಆತನನ್ನು ವಶಕ್ಕೆ ಪಡೆದಿದ್ದಾರೆ.

ಸ್ವಾಮಿಜಿ ವೇಶದಲ್ಲಿದ್ದ ನಾಗೇಶ್ : ಬಂಧನದ ವೇಳೆ ಆರೋಪಿ ನಾಗೇಶ್ ಸ್ವಾಮಿಜಿ ವೇಶದಲ್ಲಿದ್ದ ಎನ್ನಲಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಖಾವಿ ಪಂಚೆ ಧರಿಸಿದ್ದ ಆರೋಪಿ ನಾಗೇಶ್ ಕೈಗೆ ಪೊಲೀಸರು ಬೇಡಿ ಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ.

ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ನಾಗೇಶ್ : ಈ ಹಿಂದೆ ಕೂಡ ನಾಗೇಶ್ ಬೇರೆ ಬೇರೆ ಯುವತಿಯರನ್ನ ಪ್ರೀತಿಸುವಂತೆ ಕಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಗೇಶ್ ಮೂಲತಃ ಕೃಷ್ಣಗಿರಿ ಜಿಲ್ಲೆಯ ಕೊಡಿಯಾಲಂ ನಿವಾಸಿಯಾಗಿದ್ದು, 7 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಯುವತಿ ದೊಡ್ಡಮ್ಮ ಮನೆಯಲ್ಲಿ ಬಾಡಿಗೆಗೆ ಇದ್ದ. ಪ್ರೀತಿ ಮಾಡು ಅಂತಾ ಯುವತಿಯ ಹಿಂದೆ ಬಿದ್ದಿದ್ದ. ಮನೆ ಖಾಲಿ ಮಾಡಿಸಿದ ಬಳಿಕ ತಮ್ಮ ಸ್ವಂತ ಊರು ಕೊಡಿಯಾಲಂಗೆ ಹೋಗಿದ್ದ.

ಎರಡು ವರ್ಷದ ಹಿಂದೆ ಮತ್ತೋರ್ವ ಯುವತಿಗೂ ಹೀಗೆ ಕಾಟ ಕೊಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಡಿಯಾಲಂನಲ್ಲಿರುವ ತಮ್ಮ ಮನೆ ಪಕ್ಕದಲ್ಲಿದ್ದ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೇ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಳು. ಯುವತಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದು ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದರು. ನಂತರ ಆ ಯುವತಿಯನ್ನ ಬೇರೆ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. ನಂತರ ಮತ್ತೆ ಕೊಡಿಯಾಲಂ ಬಿಟ್ಟು ಬೆಂಗಳೂರಿಗೆ ಬಂದಿದ್ದ. ಮತ್ತೆ ಬೆಂಗಳೂರಿಗೆ ಬಂದು ಅದೇ ಯುವತಿಗೆ ಪ್ರೀತಿಸುವಂತೆ ಪೀಡಿಸಿದ್ದ. ಪ್ರೀತಿ ತಿರಸ್ಕರಿಸಿದಕ್ಕೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಲಯಾಳಂ ನಟಿ-ರೂಪದರ್ಶಿ ಸಹನಾ ತನ್ನ 22 ನೇ ಹುಟ್ಟುಹಬ್ಬದಂದು ಶವವಾಗಿ ಪತ್ತೆಯಾಗಿದ್ದಾಳೆ, ಪತಿ ಪೊಲೀಸ್ ವಶಕ್ಕೆ

Next Post

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳುತ್ತಿದ್ದ ನಾಗನಿಗೆ ಪೊಲೀಸರಿಂದ ಗುಂಡೇಟು

Related Posts

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
96
ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು
ಕ್ರೈಮ್ ನ್ಯೂಸ್

ಮಂಗಳೂರು: ಅರ್ಮೇನಿಯಾದಲ್ಲಿ 1.5 ಲಕ್ಷ ಸಂಬಳದ ಉದ್ಯೋಗ ಕೊಡಿಸುವುದಾಗಿ 2-3 ಲಕ್ಷ ಹಣ ಪಡೆದು ವಂಚನೆ; ಮೂವರ ವಿರುದ್ದ ದೂರು ದಾಖಲು

December 19, 2025
104
Next Post
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳುತ್ತಿದ್ದ ನಾಗನಿಗೆ ಪೊಲೀಸರಿಂದ ಗುಂಡೇಟು

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ನೆಪದಲ್ಲಿ ತಪ್ಪಿಸಿಕೊಳ್ಳುತ್ತಿದ್ದ ನಾಗನಿಗೆ ಪೊಲೀಸರಿಂದ ಗುಂಡೇಟು

Discussion about this post

Recent News

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025” ಅದ್ದೂರಿಯ ಆಚರಣೆ, ಆನಂದದ ಚಿಲುಮೆ.

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025” ಅದ್ದೂರಿಯ ಆಚರಣೆ, ಆನಂದದ ಚಿಲುಮೆ.

December 22, 2025
40
ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
96
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025” ಅದ್ದೂರಿಯ ಆಚರಣೆ, ಆನಂದದ ಚಿಲುಮೆ.

ಸ್ನೇಹಾಲಯದಲ್ಲಿ “ಕ್ರಿಸ್‌ಮಸ್ ಸಂಭ್ರಮ 2025” ಅದ್ದೂರಿಯ ಆಚರಣೆ, ಆನಂದದ ಚಿಲುಮೆ.

December 22, 2025
ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

ಉಪ್ಪಿನಂಗಡಿ: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; ಆರೋಪಿ ಅರೆಸ್ಟ್

December 22, 2025
ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಪತ್ನಿ ಬುಷ್ರಾ ಬಿಬಿಗೆ 17 ವರ್ಷ ಜೈಲು ಶಿಕ್ಷೆ

December 21, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d